ಎರಡು ತಿಂಗಳಲ್ಲಿ ಇ-ತ್ಯಾಜ್ಯ ಕಾರ್ಖಾನೆಗಳ ಪರಿಶೀಲನೆ: ನಿರ್ದಾಕ್ಷಿಣ್ಯ ಕ್ರಮ
ಬೆಂಗಳೂರು, ಏಪ್ರಿಲ್ 02: ಇನ್ನೆರಡು ತಿಂಗಳಲ್ಲಿ ಇ-ತ್ಯಾಜ್ಯ ಕಾರ್ಖಾನೆಗಳನ್ನು ಪರಿಶೀಲಿಸಲಾಗುತ್ತದೆ. ಅಲ್ಲಿ ಬೇಕಾದ ದಾಖಲೆಗಳಿಲ್ಲದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಸುರೇಶ್ ತಿಳಿಸಿದರು.
ಆಲ್ ಇಂಡಿಯಾ ಇ-ವೇಸ್ಟ್ ರಿಸೈಕ್ಲರ್ಸ್ ಅಸೋಸಿಯೇಷನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಕಷ್ಟು ಇ-ಘಟಕಗಳು ಪರವಾನಗಿ ಇನ್ನಿತರೆ ಪ್ರಮುಖ ದಾಖಲೆಗಳನ್ನು ಹೊಂದಿಲ್ಲ ಎಂದು ದೂರುಗಳು ಕೇಳಿಬಂದಿವೆ. ಹೀಗಾಗಿ ರಾಜ್ಯದಲ್ಲಿರುವ ಎಲ್ಲ ಇ-ಕಾರ್ಖಾನೆ ಹಾಗೂ ಇ-ಘಟಕಗಳನ್ನು ಪರಿಶೀಲಿಸಲಾಗುತ್ತದೆ. ದಾಖಲೆಗಳು ಸರಿ ಇಲ್ಲದಿದ್ದ ಪಕ್ಷದಲ್ಲಿ ಅಂತಹ ಕಾರ್ಖಾನೆ ಅಥವಾ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕಾನೂನು ರೀತಿಯಲ್ಲಿ ಎಲ್ಲಾ ದಾಖಲೆಗಳು ಸರಿ ಇದ್ದರೆ ಅಂತಹ ಘಟಕ ಅಥವಾ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಲ್ಲಾ ರೀತಿಯ ಸಹಾಯವನ್ನು ಮಾಡಲಾಗುತ್ತದೆ ಒಂದೊಮ್ಮೆ ದಾಖಲೆಗಳು ತಪ್ಪಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಕೇಂದ್ರವು ನೇರವಾಗಿಯೇ ಎಚ್ಚರಿಕೆ ನೀಡಲು ತಿಳಿಸಿದೆ ಎಂದರು.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ದಕ್ಷಿಣ ವಿಭಾಗದ ಪರಿಸರ ಅಧಿಕಾರಿ ಎಂ.ಸಿ. ರಮೇಶ್ ಮಾತನಾಡಿ, ನಮ್ಮ ವಿಭಾಗದ ವ್ಯಾಪ್ತಿಯಲ್ಲಿ ಒಟ್ಟು 5 ಇ-ತ್ಯಾಜ್ಯ ನಿರ್ವಹಣಾ ಘಟಕಗಳಿವೆ. ಕರ್ನಾಟಕದಲ್ಲಿರುವ ಪರವಾನಗಿ ಪಡೆಯದ ಘಕಟಗಳಿಗೆ ಕಾರ್ಖಾನೆಗಳಿಂದ ಇ-ತ್ಯಾಜ್ಯ ರವಾನೆಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಅಂತಹ ಕಾರ್ಖಾನೆಗಳ ಬಗ್ಗೆ ಮಾಹಿತಿ ನೀಡಿದರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಅಸೋಸೊಯೇಷನ್ ಅಧ್ಯಕ್ಷ ಕಾಳೀರೇಗೌಡ ಮಾತನಾಡಿ, ದೇಶಾದ್ಯಂತ ಇರುವ 118 ಕಾರ್ಖಾನೆಗಳು, ರಾಜ್ಯದಲ್ಲಿರುವ 78 ಕಾರ್ಖಾನೆಗಳು ಸೇರಿ ಸಂಸ್ಥೆಯನ್ನು ಹುಟ್ಟುಹಾಕಿದ್ದೇವೆ. ಇದರಿಂದ ಇ-ತ್ಯಾಜ್ಯ ನಿರ್ವಹಣೆ, ಇ-ತ್ಯಾಜ್ಯ ಉತ್ಪಾದನೆ, ಇ-ತ್ಯಾಜ್ಯದ ಕುರಿತು ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಹಾಗೆಯೇ ಇ-ತ್ಯಾಜ್ಯ ಮರುಬಳಕೆ ಕುರಿತು ತಿಳಿ ಹೇಳಲಾಗುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications