GPS ಆಧಾರಿತ ಟ್ಯಾಂಕರ್ ನೀರು ಪೂರೈಕೆಗೆ ಬೆಂಗಳೂರಲ್ಲಿ ಭಾರೀ ಸ್ಪಂದನೆ: BWSSB
ಬೆಂಗಳೂರು, ಮೇ 12: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ಕಾವೇರಿ ಯೋಜನೆಯ ಅಡಿಯಲ್ಲಿ BIS ಪ್ರಮಾಣಿತ ಶುದ್ಧ ಕುಡಿಯುವ ನೀರು ಪೂರೈಸುವುದಕ್ಕೆ ಬೆಂಗಳೂರು ಜಲಮಂಡಳಿ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಜಲಮಂಡಳಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷರಾದ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಶುದ್ಧ ಕುಡಿಯುವ ನೀರಿನ ಸರಬರಾಜು ಕುರಿತು ಸೋಮವಾರ ತಿಳಿಸಿರುವ ಅವರು, ತಂತ್ರಜ್ಞಾನ ಬಳಕೆಯ ಮೂಲಕ BIS ಪ್ರಮಾಣೀತ ಶುದ್ಧ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಜನರ ಮನೆಬಾಗಿಲಿಗೆ ತಲುಪಿಸುತ್ತಿರುವ ದೇಶದ ಏಕೈಕ ಸರಕಾರಿ ಸಂಸ್ಥೆ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ. ಈಗಾಗಲೇ ಯೋಜನೆಗೆ ಚಾಲನೆ ನೀಡಲಾಗಿದೆ.

ಏಕರೂಪದ ಸೇವೆಗಾಗಿ ಬ್ರಾಂಡಿಂಗ್
ಖಾಸಗಿ ಟ್ಯಾಂಕರ್ಗಳು ಪೂರೈಸುವಂತಹ ನೀರಿನ ಗುಣಮಟ್ಟದ ಬಗ್ಗೆ ಯಾವುದೇ ಖಾತರಿ ಇಲ್ಲ. ಬಹಳಷ್ಟು ಸಂಧರ್ಭಗಳಲ್ಲಿ ಅವರು ಪೂರೈಸುವಂತಹ ಕೊಳವೆಬಾವಿಯ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲ. ಅಲ್ಲದೇ, ಅಂತರ್ಜಲದ ಮೇಲೆ ಇನ್ನಷ್ಟು ಒತ್ತಡ ಹೆಚ್ಚು ಮಾಡುತ್ತಾರೆ. ಇದನ್ನ ತಡಿಯುವುದು ಹಾಗೆಯೇ BIS ಪ್ರಮಾಣಿತ ಶುದ್ಧ ಕುಡಿಯುವ ನೀರನ್ನು ಟ್ಯಾಂಕರ್ ಮೇಲೆ ಅವಲಂಬಿತರಾಗಿರುವಂತಹ ಜನರಿಗೆ ತಲುಪಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಯಾವುದೇ ಸಂಧರ್ಭದಲ್ಲೂ ಕೂಡಾ ಯಾರಾದರೂ ನಮ್ಮ ನೀರನ್ನು ಪರಿಶೀಲಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.
100 ಟ್ಯಾಂಕರ್ಗಳ ಬ್ರಾಂಡಿಂಗ್
ಬೆಂಗಳೂರು ಜಲಮಂಡಳಿ ತನ್ನ ಒಡೆತನದಲ್ಲಿರುವ 60 ಹಾಗೂ ನೊಂದಣಿಯಾಗಿರುವಂತಹ 100 ಕ್ಕೂ ಹೆಚ್ಚು ಟ್ಯಾಂಕರ್ಗಳನ್ನು ಬ್ರಾಂಡಿಂಗ್ ಮಾಡಿಸಿದೆ. ಖಾಸಗಿ ಟ್ಯಾಂಕರ್ಗಳು ನಮ್ಮ ನೀರನ್ನು ಬಿಟ್ಟು ಬೇರೆ ನೀರನ್ನು ಸರಬರಾಜು ಮಾಡಬಾರದು ಎನ್ನುವ ಷರತ್ತನ್ನು ವಿಧಿಸಲಾಗಿದೆ. ಟ್ರಿಪ್ ಆಧಾರದಲ್ಲಿ ಖಾಸಗಿ ಟ್ಯಾಂಕರ್ಗಳಿಗೆ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಕೆಗೆ ಬಳಸಲಾಗುವಂತಹ ಈ ಟ್ಯಾಂಕರ್ಗಳಲ್ಲಿ ಅಗತ್ಯ ಇಪಿಐ ಕೋಟೀಂಗ್ ಮಾಡಿಸಲಾಗಿದೆ. ಈ ಯೋಜನೆಗಾಗಿ ಜಲಮಂಡಳಿ ವತಿಯಿಂದ ಹೊಸ ಟ್ಯಾಂಕರ್ಗಳನ್ನು ಖರೀದಿಸಲಾಗಿಲ್ಲ ಎಂದರು.

1000 ಕ್ಕೂ ಹೆಚ್ಚು ಜನರಿಂದ ಆಪ್ ಡೌನ್ಲೋಡ್
ಸಂಚಾರಿ ಕಾವೇರಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಎರಡು ದಿನಗಳಲ್ಲೇ ಸುಮಾರು 1000 ಕ್ಕೂ ಹೆಚ್ಚು ಜನರು ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿದ್ದಾರೆ. ಅಲ್ಲದೇ ಟ್ಯಾಂಕರ್ ಬುಕ್ಕಿಂಗ್ ಮಾಡಿರುವಂತಹ ಜನರಿಗೆ ನೀರು ಸರಬರಾಜು ಮಾಡಲಾಗಿದೆ. RFID ಹಾಗೂ GPS ಟ್ರ್ಯಾಕಿಂಗ್ ಅಳವಡಿಸಿದ್ದು ಟ್ಯಾಂಕರ್ ಜಲಮಂಡಳಿಯ ನಿಗದಿತ ಕಾವೇರಿ ಕನೆಕ್ಟ್ ಸೆಂಟರ್ಗಳಲ್ಲೇ ನೀರು ತುಂಬಿಸಿ, ಅವುಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವುದನ್ನು ಖಾತರಿ ಮಾಡಿಕೊಂಡಿದ್ದೇವೆ ಎಂದು ಅವರು ವಿವರಿಸಿದರು.
ಸರಬರಾಜು ಆಗುವಂತಹ ನೀರಿನ ಬಗ್ಗೆ ಯಾವುದೇ ಅನುಮಾನಗಳಿದ್ದಲ್ಲಿ ಪರೀಕ್ಷೆಗೆ ಜಲಮಂಡಳಿ ಸಿದ್ಧವಿದೆ ಎಂದು ಜಲಮಂಡಳಿ ಅಧ್ಯಕ್ಷ ಇಂದಿನ ಪ್ರಕಟಣೆಯಲ್ಲಿ ಹೇಳಿದ್ದಾರೆ. ಈ ವಿವರಣೆ ಮೂಲಕ ಬೆಂಗಳೂರು ಜನರಿಗೆ ನೀರು ಪೂರೈಕೆಗೆ ಹಳೆಯ ಟ್ಯಾಂಕ್ಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಟೀಕಿಸಿದ್ದ ಬಿಜೆಪಿಗೆ ಉತ್ತರ ಸಿಕ್ಕಂತಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications