ಪರಪ್ಪನ ಅಗ್ರಹಾರ ಜೈಲಿನಿಂದ ವಿದ್ಯಾರ್ಥಿನಿ ಅಮೂಲ್ಯ ಹೊರಕ್ಕೆ
ಬೆಂಗಳೂರು, ಜೂನ್ 12: 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿ ದೇಶದ್ರೋಹದ ಆರೋಪ ಹೊತ್ತುಕೊಂಡಿದ್ದ ವಿದ್ಯಾರ್ಥಿನಿ, ಎಡಪಂಥೀಯ ಚಿಂತನೆಯ ಅಮೂಲ್ಯ ಲಿಯೊನಾ ನರೋನಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಶುಕ್ರವಾರ ಸಂಜೆ ಹೊರಕ್ಕೆ ಬಂದಿದ್ದಾರೆ.
Recommended Video
ಫೆಬ್ರವರಿ 20ರಂದು ಬೆಂಗಳೂರಿನಲ್ಲಿ ಸಿಎಎ, ಎನ್ಆರ್ಸಿ ವಿರೋಧಿಸಿ ಸಮಾವೇಶ ಹಮ್ಮಿಕೊಳ್ಳಲೈತ್ತು. ಸಂಸದ ಅಸಾದುದ್ದಿನ್ ಓವೈಸಿ ಭಾಗಿಯಾಗಿದ್ದ ಈ ಸಮಾವೇಶದಲ್ಲಿ ಅಮೂಲ್ಯ ಲಿಯೋನಾ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದರು.
ಅಮೂಲ್ಯಾ ವಿರುದ್ಧ ದೇಶದ್ರೋಹದ ಆರೋಪ ಹೊರೆಸಿ ಜೈಲಿಗೆ ಕಳಿಸಲಾಗಿತ್ತು. ಆಕೆಗೆ ಜಾಮೀನು ದೊರೆತರೆ ಬೇರೆ ರೀತಿಯ ಅಪರಾಧಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಸಮಾಜಕ್ಕೂ ಒಳಿತಿಲ್ಲ ಎಂದು ಬುಧವಾರದಂದು ಜಡ್ಜ್ ವಿದ್ಯಾಧರ ಶಿರಹಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ, ಆಕೆಗೆ ಜಾಮೀನು ನೀಡಲು ಸಾಧ್ಯವಾಗಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಕಾನೂನಿನ ಪ್ರಕಾರ,ಆರೋಪಿಯನ್ನು ಬಂಧಿಸಿ ಜೈಲಿನಲ್ಲಿರಿಸಿದ ಬಳಿಕ 90 ದಿನಗಳೊಳಗೆ ದೋಷಾರೋಪಣ ಪಟ್ಟಿಯನು ಕೋರ್ಟಿಗೆ ಸಲ್ಲಿಸಬೇಕಾಗುತ್ತದೆ. ಆದರೆ, ಅಮೂಲ್ಯಾ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ ಕಾರಣ ಆಕೆಗೆ ಡೀಫಾಲ್ಡ್ ಬೇಲ್ ಸಿಗಬೇಕಿದೆ ಎಂದು ವಾದಿಸಿದರು.
ಈ ಕುರಿತಂತೆ ಮೇ 26, ಮೇ 29ರಂದು ಇಮೇಲ್ ಕಳಿಸಿದ್ದರು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಇದೆಲ್ಲ ಫಲ ನೀಡದಿದ್ದಾಗ ಜೂನ್ 2 ರಂದು ಅರ್ಜಿ ಸಲ್ಲಿಸಿದ್ದಾರೆ. ಇದಾದ ಬಳಿಕ ಜೂನ್ 3 ರಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ವಕೀಲ ಪ್ರಸನ್ನ ತಿಳಿಸಿದರು.
ಹೀಗಾಗಿ, ಕಾನೂನಿಗೆ ಬದ್ಧವಾಗಿ ಸಿಆರ್ ಪಿ ಸಿ ಸೆಕ್ಷನ್ 162 ಕಲಂ 2 ಅಡಿಯಲ್ಲಿ statutory bail ನೀಡಲಾಗಿದೆ. ಐದನೇ ಹೆಚ್ಚುವರಿ ಸಿಟಿ ಸಿವಿಎಲ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನಿಂದಾಗಿ ಡಿಫಾಲ್ಡ್ ಜಾಮೀನು ನೀಡಲಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications