ಉಪವಾಸ ಸತ್ಯಾಗ್ರಹಲ್ಲಿ ಪಾಲ್ಗೊಂಡ ಬಳಿಕ ವಿದ್ಯಾರ್ಥಿ ಸಾವು; ಆರೋಪ ನಿರಾಕರಿಸಿದ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ
ಹತ್ತು ದಿನಗಳಿಂದ, ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್ಗೆ 8,500 ರೂಪಾಯಿ ಬಸ್ ಶುಲ್ಕವನ್ನು ವಿಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ.
ಬೆಂಗಳೂರು, ಫೆಬ್ರವರಿ. 26: ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಡೆವಲಪ್ಮೆಂಟ್ ಸ್ಟಡೀಸ್ನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ 26 ವರ್ಷದ ವಿದ್ಯಾರ್ಥಿ ವಿಶ್ವವಿದ್ಯಾನಿಲಯದ ವಾರ್ಷಿಕ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸುತ್ತಿದ್ದಾಗ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ ನಂತರ ಅವರು ಸಾವನ್ನಪ್ಪಿದ್ದಾರೆ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಮೃತ ವಿದ್ಯಾರ್ಥಿಯನ್ನು ಪ್ರಥಮ ವರ್ಷದ ಎಂಎ ಡೆವಲಪ್ಮೆಂಟ್ ಸ್ಟಡೀಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದ 26 ವರ್ಷದ ಅಭಿಜಿತ್ ಶಿಂಧೆ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಯೊಬ್ಬರ ದುರದೃಷ್ಟಕರ ಸಾವಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ವಿದ್ಯಾರ್ಥಿ, ಕಾಲೇಜು ಉತ್ಸವದಲ್ಲಿ ಭಾಗವಹಿಸುತ್ತಿದ್ದಾಗ ಕುಸಿದುಬಿದ್ದು ಶುಕ್ರವಾರ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಅಭಿಜಿತ್ ಶಿಂಧೆ ಅವರು ಗುರುವಾರ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು ಎಂದು ಸ್ನಾತಕೋತ್ತರ ವಿದ್ಯಾರ್ಥಿ ಹಾಗೂ ಅವರ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಹತ್ತು ದಿನಗಳಿಂದ, ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್ಗೆ 8,500 ರೂಪಾಯಿ ಬಸ್ ಶುಲ್ಕವನ್ನು ವಿಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ. ಆದೇಶವನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ. ಸುಮಾರು 2.5 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕೆಜಿಎ ಹಾಸ್ಟೆಲ್ನಿಂದ ಕ್ಯಾಂಪಸ್ಗೆ ಮತ್ತು ಹೊರಗೆ ಕರೆದೊಯ್ಯಲು ಕಡ್ಡಾಯವಾಗಿ ಹೆಚ್ಚುವರಿ ಬಸ್ ಶುಲ್ಕವನ್ನು ಪಾವತಿಸಬೇಖು ಎಂದು ವಿವಿ ಒತ್ತಾಯಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪ್ರವೇಶ ಪ್ರಕ್ರಿಯೆಯಲ್ಲಿ ಈ ಹೆಚ್ಚುವರಿ ಶುಲ್ಕದ ಬಗ್ಗೆ ಆಡಳಿತ ಮಂಡಳಿ ತಿಳಿಸಿರಲಿಲ್ಲ, ಅವರ ಸಮಸ್ಯೆಗಳನ್ನು ಆಲಿಸಲು ವಿಶ್ವವಿದ್ಯಾಲಯ ನಿರಾಕರಿಸಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಯೊಬ್ಬರು ಹೇಳುವಂತೆ, ಈ ಪ್ರತಿಭಟನೆಯಲ್ಲಿ ಕಳೆದ 10 ನೇ ದಿನದಿಂದ ಅಭಿಜಿತ್ ಶಿಂಧೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಗುರುವಾರ ಮಾತ್ರ ಅವರು ಉಪವಾಸ ಬಿಟ್ಟಿದ್ದರು. ವಿಶ್ವವಿದ್ಯಾನಿಲಯದ ಕ್ಯಾಂಪಸ್ನೊಳಗೆ ಮೂಲಭೂತ ವೈದ್ಯಕೀಯ ಸೌಲಭ್ಯಗಳ ಕೊರತೆಯಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ನಾವು ಉಪವಾಸ ಮುಷ್ಕರದ ಬಗ್ಗೆ ತಿಳಿಸಿದ ನಂತರವೂ ಕಾಲೇಜು ತುರ್ತು ಪರಿಸ್ಥಿತಿಗಳಿಗೆ ಯಾವುದೇ ವೈದ್ಯಕೀಯ ಬೆಂಬಲವನ್ನು ನೀಡಲಿಲ್ಲ. ಅಭಿಜಿತ್ ಶಿಂಧೆ ಪ್ರತಿಭಟನೆಯಲ್ಲಿ ಇರಲಿಲ್ಲ ಎಂದು ಹೇಳಿ ತಮ್ಮ ಹೆಸರು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ಸೌಲಭ್ಯಗಳು ಲಭ್ಯವಿವೆ ಎಂದು ಹೇಲಿರುವ ವಿವಿ ವಕ್ತಾರರು, ಯಾವುದೇ ವೈದ್ಯಕೀಯ ಸಹಾಯವನ್ನು ಒದಗಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪವನ್ನು ತಳ್ಳಿಹಾಕಿದ್ದಾರೆ. ಜೊತೆಗೆ ಮೃತರು ಉಪವಾಸ ಸತ್ಯಾಗ್ರಹದ ಭಾಗವಾಗಿರಲಿಲ್ಲ ಎಂದು ವಿಶ್ವವಿದ್ಯಾಲಯ ಹೇಳಿಕೊಂಡಿದೆ.

"ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ವಿದ್ಯಾರ್ಥಿಯೊಬ್ಬರ ಸಾವಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ವಿದ್ಯಾರ್ಥಿ ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿದ್ದ ವೇಳೆ ವಿದ್ಯಾರ್ಥಿಯು ಕುಸಿದು ಬಿದ್ದಿದ್ದು, ತಕ್ಷಣದ ವೈದ್ಯಕೀಯ ಸಹಾಯ ನೀಡಲಾಗಿದೆ . ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೃತ ವಿದ್ಯಾರ್ಥಿಯು ಫೆಬ್ರವರಿ 23, ಗುರುವಾರ ಅಥವಾ ಫೆಬ್ರವರಿ 24, ಶುಕ್ರವಾರ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ" ಎಂದು ವಿಶ್ವವಿದ್ಯಾಲಯದ ವಕ್ತಾರರು ತಿಳಿಸಿದ್ದಾರೆ. ಇನ್ನು, ಇದುವರೆಗೆ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications