ಮೋದಿ ವಿರುದ್ಧ ಎಂಎಂಎಸ್ : ವಿದ್ಯಾರ್ಥಿ ಬಂಧನ
ಬೆಂಗಳೂರು, ಮೇ.25: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಂಎಂಎಸ್ ಮೂಲಕ ಅಪಪ್ರಚಾರ ಮಾಡುತ್ತಿದ್ದ ಭಟ್ಕಳ ಮೂಲದ ಐವರು ವಿದ್ಯಾರ್ಥಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ಪೈಕಿ ನಾಲ್ವರನ್ನು ನಿರ್ದೋಷಿಗಳೆಂದು ಪರಿಗಣಿಸಿ ಬಿಡುಗಡೆ ಮಾಡಲಾಗಿದ್ದು, ಓರ್ವನನ್ನು ಬಂಧನದಲ್ಲಿರಿಸಲಾಗಿದೆ.
ಬಂಧಿತರನ್ನು ಎಂಬಿಎ ವಿದ್ಯಾರ್ಥಿಗಳಾದ ಮುಸಾಫರ್ ಸದಾ, ಮಹಮ್ಮದ್ ಹನೀಫ್ ಕೋಲಾ, ಬಿಸಾಮಹಲಾಂಗಾರ್, ಓಂಕಾರ್ ಬ್ರಹ್ಮಾವರ್, ರಹಮತುಲ್ಲಾ ಮಲಿಕ್ ಎಂದು ಗುರುತಿಸಲಾಗಿದೆ. ವಸಂತನಗರದ ಬಾಡಿಗೆ ಮನೆಯೊಂದರಲ್ಲಿ ಎಲ್ಲರೂ ವಾಸವಿದ್ದಾರೆ. ಮೋದಿ ವಿರುದ್ಧ ಎಸ್ ಎಂಎಸ್ ಹಾಗೂ ಎಂಎಂಎಸ್ ಗಳನ್ನು ಓಂಕಾರ್ ಬ್ರಹ್ಮಾವರ್ ರಚಿಸುತ್ತಿದ್ದ ಅದನ್ನು ಉಳಿದವರು ಹಂಚುತ್ತಿದ್ದರು ಎಂದು ತಿಳಿದು ಬಂದಿದೆ.
ಮೋದಿ ವಿರುದ್ಧ ಎಂಎಂಎಸ್ ಹರಿದಾಡುತ್ತಿರುವುದನ್ನು ಪತ್ತೆ ಹಚ್ಚಿದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರ ಪೂರ್ವಾಪರದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಸಿಸಿಬಿ ಪೊಲೀಸರ ಒಂದು ತಂಡ ಈಗಾಗಲೇ ಭಟ್ಕಳಕ್ಕೆ ತೆರಳಿದೆ. ಓಂಕಾರ್ ಗೆ ರಾಷ್ಟ್ರೀಯ ಮಟ್ಟದ ಪಕ್ಷವೊಂದರ ಬೆಂಬಲವೂ ಸಿಕ್ಕಿತ್ತು ಎಂಬ ಮಾಹಿತಿ ಕೂಡಾ ಇದೆ.

ಗೋವಾ ಯುವಕ ಬಂಧನ, ಪ್ರತಿಭಟನೆ: ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ನರೇಂದ್ರ ಮೋದಿ ವಿರುದ್ಧ ಫೇಸ್ಬುಕ್ನಲ್ಲಿ ಟೀಕೆಗಳನ್ನು ಮಾಡಿದ್ದ ಗೋವಾದ ಯುವಕನೊಬ್ಬನ ಬಂಧನವನ್ನು ಖಂಡಿಸಿ ಕೆಲವು ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸದ್ಯ ರಾಜ್ಯದಿಂದ ಹೊರಗೆ ಇರುವ ಆರೋಪಿ ಲಾವು ಛೋಡಾಂಕರ್ ಪರವಾಗಿ ಕೋರಲಾದ ನಿರೀಕ್ಷಣಾ ಜಾಮೀನನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ತಳ್ಳಿ ಹಾಕಿದೆ. ರಾಜ್ಯದ ಉದ್ಯಮಿ ಮತ್ತು ಬಿಜೆಪಿ ನಾಯಕ ಅತುಲ್ ಪೈ ಕಾನೆ ಎಂಬವರು ಛೋಡಾಂಕರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
ಲಾವು ಛೋಡಾಂಕರ್ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ಗೋವಾದ ಸೈಬರ್ ಅಪರಾಧ ಘಟಕದ ಪೊಲೀಸರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ರಾಜ್ಯದಲ್ಲಿ ‘ಕೋಮು ಮತ್ತು ಸಾಮಾಜಿಕ ಕ್ಷೋಭೆ' ಸೃಷ್ಟಿಸುವ ಯೋಜನೆಯ ಭಾಗವಾಗಿ ಫೇಸ್ಬುಕ್ನಲ್ಲಿ ಟೀಕೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ದೂರಿನಲ್ಲಿ ಹೇಳಿಕೊಂಡಿದ್ದಾರೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications