ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ; ಸಿಎಂ ಬೊಮ್ಮಾಯಿ
ಬೆಂಗಳೂರು, ಜನವರಿ 18: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ. ಹೀಗಾಗಿ ಸುಭಾಷ ಚಂದ್ರ ಬೋಸ್ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ (ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ಬೆಂಗಳೂರಿನ ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಯ ಆವರಣದಲ್ಲಿ ಸುಭಾಷ್ ಚಂದ್ರ ಬೋಸ್ರವರ 125ನೇ ಜನ್ಮ ದಿನಾಚರಣೆಯನ್ನು ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನೂರು ಜನ ಎನ್ಸಿಸಿ ಕೆಡಿಟ್ ಮತ್ತು ಕಮಾಂಡರ್ಗಳು ಭಾಗಿಯಾಗಲಿದ್ದಾರೆ ಎಂದರು.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಇದು ಸುಭಾಷ್ ಚಂದ್ರ ಬೋಸ್ರವರ 125ನೇ ಜನ್ಮ ದಿನ. ಹೀಗಾಗಿ ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ವರ್ಷವಿಡೀ ಸುಭಾಷ್ ಚಂದ್ರ ಬೋಸ್ ಅವರ ಕುರಿತಾದ ಕಾರ್ಯಕ್ರಮಗಳನ್ನು ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ವಿಶೇಷವಾದ ಹಾಗೂ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕರ್ನಾಟಕ ಗೋವಾ ಎನ್ಸಿಸಿ ನಿರ್ದೇಶನಾಲಯದ ಮುಖ್ಯಸ್ಥ ಏರ್ ಕಮಾಂಡರ್ ಬಿ.ಎಸ್. ಕನ್ವರ್ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.
ಜನವರಿ
23ರಿಂದ
ಗಣರಾಜ್ಯೋತ್ಸವ
ಪ್ರಾರಂಭ
ಇನ್ಮುಂದೆ
ಪ್ರತಿ
ಬಾರಿಯ
ಗಣರಾಜ್ಯೋತ್ಸವವು
ಜನವರಿ
24ರ
ಬದಲಿಗೆ
ಜನವರಿ
23ರಿಂದ
ಪ್ರಾರಂಭವಾಗಲಿದೆ
ಮತ್ತು
ಸ್ವಾತಂತ್ರ್ಯ
ಹೋರಾಟಗಾರ
ಸುಭಾಷ್
ಚಂದ್ರ
ಬೋಸ್
ಅವರ
ಜನ್ಮದಿನವನ್ನು
ಒಳಗೊಂಡಿರುತ್ತದೆ
ಎಂದು
ಕೇಂದ್ರ
ಸರ್ಕಾರದ
ಮೂಲಗಳು
ತಿಳಿಸಿವೆ.
ಭಾರತದ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಸ್ಮರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗಮನಕ್ಕೆ ಅನುಗುಣವಾಗಿದೆ. ಇದು ಮೊದಲು ಬೋಸ್ ಅವರ ಜನ್ಮ ವಾರ್ಷಿಕೋತ್ಸವವನ್ನು "ಪರಾಕ್ರಮ್ ದಿವಸ್' ಎಂದು ಆಚರಿಸಲು ಪ್ರಾರಂಭಿಸಿತ್ತು.
ಭಾರತದ ಮೊದಲ ಸೇನೆಯ ಸ್ಥಾಪಕನ ಶೌರ್ಯ ಮತ್ತು ಧೈರ್ಯವನ್ನು ಗೌರವಿಸಲು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸಲಾಗುವುದು ಎಂದು ಕೇಂದ್ರವು ಈ ಹಿಂದೆ ಘೋಷಿಸಿತ್ತು.
Recommended Video
ಅಂತಹ ಇತರ ದಿನಗಳನ್ನು ಆಚರಿಸುವುದು ವಾರ್ಷಿಕ ವ್ಯವಹಾರವಾಗಿದ್ದು, ಅದರಲ್ಲಿ ಆಗಸ್ಟ್ 14 ಅನ್ನು ವಿಭಜನೆಯ ಕರಾಳ ನೆನಪಿನ ದಿನ, ಅಕ್ಟೋಬರ್ 31 ಅನ್ನು ರಾಷ್ಟ್ರೀಯ ಏಕತಾ ದಿನ (ಸರ್ದಾರ್ ಪಟೇಲ್ ಅವರ ಜನ್ಮದಿನ), ನವೆಂಬರ್ 15 ಅನ್ನು ಜನಜಾತಿಯ ಗೌರವ್ ದಿವಸ್ (ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವ), ನವೆಂಬರ್ 26 ಅನ್ನು ಸಂವಿಧಾನದ ದಿನವಾಗಿ ಮತ್ತು ಡಿಸೆಂಬರ್ 26ರಂದು ವೀರ್ ಬಾಲ್ ದಿವಸ್ (ಗುರು ಗೋವಿಂದ್ ಸಿಂಗ್ ಅವರ ನಾಲ್ವರು ಪುತ್ರರಿಗೆ ಗೌರವ) ಎಂದು ಸೇರಿಸಲಾಗಿದೆ.