ಸಬರ್ಬನ್ ರೈಲು ಯೋಜನೆ: ಬರಲಿವೆ ಕೇವಲ 57 ನಿಲ್ದಾಣಗಳು
ಬೆಂಗಳೂರು, ಜುಲೈ 24: ಸಬರ್ಬನ್ ರೈಲು ಯೋಜನೆ ಪುಷ್ಠಿ ಪಡೆದುಕೊಳ್ಳುತ್ತಿದ್ದು ಯೋಜನೆಯಲ್ಲಿ 57 ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದ್ದು ಒಟ್ಟು 16 ಸಾವಿರ ಕೋಟಿ ರೂ ವ್ಯಯಿಸಲಾಗುತ್ತಿದೆ.
ಒಟ್ಟು 148 ಕಿ.ಮೀ ವ್ಯಾಪ್ತಿಯಲ್ಲಿ ರೈಲು ನಿಲ್ದಾಣಗಳು ನಿರ್ಮಾಣವಾಗುತ್ತಿವೆ. ನವೆಂಬರ್ನಲ್ಲಿ ಸಲ್ಲಿಸಲಾಗಿದ್ದು 13 ಕಿ.ಮೀ ವ್ಯಾಪ್ತಿಗೆ ಇದೂ ಕೂಡ ಸೇರಿಕೊಳ್ಳುತ್ತದೆ.
2018ರಲ್ಲಿಯೇ ರೈಲ್ ಇಂಡಿಯಾ ಟೆಕ್ನಾಲಜಿಕಲ್ ಅಂಡ್ ಎಕನಾಮಿಕ್ ಸರ್ವೀಸ್ಗೆ ಟೆಂಡರ್ ನೀಡಲಾಗಿದೆ. ಕಾಮಗಾರಿಯು 2025ಕ್ಕೆ ಪೂರ್ಣಗೊಳ್ಳಲಿದೆ.ಆ 148 ಕಿ.ಮೀ ವ್ಯಾಪ್ತಿಯಲ್ಲಿ 55.575 ಕಿ.ಮೀ ಎಲಿವೇಟೆಡ್ ಹಾಗೂ 92.595 ಕಿ.ಮೀ ಗ್ರೇಡ್ ಲೆವೆಲ್ನಲ್ಲಿ ನಿರ್ಮಿಸಲಾಗುತ್ತದೆ.

ಮೊದಲು 86 ನಿಲ್ದಾಣಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು ಈಗ ಕೇವಲ 57 ನಿಲ್ದಾಣಗಳು ಮಾತ್ರ ಬರಲಿದೆ ಎಂದು ರೈಲ್ವೆ ಇಲಾಖೆ ಮಾಹಿತ ನೀಡಿದೆ. ಒಟ್ಟು ನಾಲ್ಕು ಕಾರಿಡಾರ್ಗಳನ್ನು ಇದು ಹೊಂದಿರುತ್ತದೆ.
- ಕ್ರಾಂತಿವೀರ ಸಂಗೊಲ್ಳಿ ರಾಯಣ್ಣ-ಯಶವಂತಪುರ-ಯಲಹಂಕ- ದೇವನಹಳ್ಳಿ- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(41.4ಕಿ.ಮೀ)
- ಬೈಯಪ್ಪನಹಳ್ಳಿ-ಬಾಣಸವಾಡಿ-ಲೊಟ್ಟಿಗೆಹಳ್ಳಿ-ವೈಟ್ಫೀಲ್ಡ್-ಯಶವಂತಪುರ(25.1 ಕಿ.ಮೀ)
-ಕೆಂಗೇರಿ-ಕಂಟೋನ್ಮೆಂಟ್-ವೈಟ್ಫೀಲ್ಡ್(35.52 ಕಿ.ಮೀ)
-ಹೆಲ್ಲಳಿಗೆ-ಬೈಯಪ್ಪನಹಳ್ಳಿ-ಚೆನ್ನಸಂದ್ರ-ಯಲಹಂಕ-ರಾಜಾನುಕುಂಟೆ(46.24ಕಿ.ಮೀ) ವ್ಯಾಪ್ತಿಯಲ್ಲಿ ಸಬರ್ಬನ್ ರೈಲು ಸಂಚರಿಸಲಿದೆ. ನೆಲಮಂಗಲದಿಂದ ಚಿಕ್ಕಬಾಣಾವರ ಮಾರ್ಗವನ್ನು ಕೈಬಿಡಲಾಗಿದೆ.
ಬೆಂಗಳೂರು ನಗರ ರೈಲ್ವೆ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಬೆಂಗಳೂರಿನ ಮಧ್ಯಭಾಗದಲ್ಲಿರುವವರಿಗೆ ಸಹಾಯವಾಗಲಿದೆ. ಇದೇ ಉದ್ದೇಶದಿಂದ ಬಿಎಂಆರ್ಸಿಎಲ್ ಕೂಡ ಮೆಟ್ರೋ ಮಾರ್ಗವನ್ನು ಕೂಡ ನಿರ್ಮಿಸುತ್ತಿದೆ.
ಶೀಘ್ರ ಒಂದು ಕಾರಿಡಾರ್ ನಿರ್ಮಾಣ ಪೂರ್ಣಗೊಳ್ಳುವುದಾಗಿ ರೈಲ್ವೆ ಇಲಾಖೆ ತಿಳಿಸಿದೆ. ಕೆಂಗೇರಿಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಾರಣ ಈ ಕಾರಿಡಾರ್ನ್ನು ಕೊನೆಗೆ ಕೈಗೆತ್ತಿಕೊಳ್ಳಲಾಗುತ್ತದೆ.
ಮೊದಲು 18,133 ಕೋಟಿ ವೆಚ್ಚದಲ್ಲಿ ಸಬರ್ಬನ್ ರೈಲ್ವೆ ಯೋಜನೆ ನಿರ್ಮಾಣ ಮಾಡಲು ಹೊರಟಿತ್ತು. ಈಗ ಪರಿಷ್ಕರಿಸಲಾಗಿದ್ದು 16,035 ಕೋಟಿ ವೆಚ್ಚದಲ್ಲಿ ಯೋಜನೆ ನಿರ್ಮಾಣವಾಗಲಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications