ಬೆಂಗಳೂರಿಗೆ ಬೇಕು ನಮ್ಮ ರೈಲು ಯೋಜನೆ
ಬೆಂಗಳೂರು, ಫೆ.11 : ಪ್ರೊ.ರಾಜೀವ್ ಗೌಡ ಅವರ ಬೆಂಗಳೂರು ನೀಡ್ಸ್ ಯು ಸಂಘಟನೆ ಮತ್ತು ವಿವಿಧ ನಾಗರೀಕ ಗುಂಪುಗಳ ವತಿಯಿಂದ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬೆಂಗಳೂರು ಉಪನಗರ ರೈಲು ಸೇವೆಯನ್ನು ಆರಂಭಿಸುವ ಕುರಿತು ಮನವಿ ಸಲ್ಲಿಸಲಾಯಿತು.
ಫೆ.8ರ ಭಾನುವಾರ ಪ್ರೊ.ರಾಜೀವ್ ಗೌಡ, ಐಐಎಂಬಿ ಸಾರ್ವಜನಿಕ ಕಾರ್ಯನೀತಿ ಕೇಂದ್ರ, ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ಪ್ರಜಾರಾಗ್ ಸಹಭಾಗಿತ್ವದಲ್ಲಿ ಉಪನಗರ ರೈಲು ಸೇವೆಯ 40 ಜನಪ್ರತಿನಿಧಿಗಳ ಜೊತೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ನಮ್ಮ ರೈಲು ಯೋಜನೆಯನ್ನು ಶೀಘ್ರ ಅನುಷ್ಠಾನ ಮಾಡಬೇಕೆಂದು ಮನವಿ ಮಾಡಲಾಯಿತು. [ಬೆಂಗಳೂರಿಗೆ ಉಪ ನಗರ ರೈಲು ಯೋಜನೆ]

ಪ್ರೊ. ರಾಜೀವ್ ಗೌಡ ನೇತೃತ್ವದ ತಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ, ಬೆಂಗಳೂರು ಉಪನಗರ ರೈಲು ಸೇವೆ ಆರಂಭಿಸಲು ಇಲಾಖೆ ಅನುಮೋದನೆ ನೀಡಬೇಕು, ಈ ಯೋಜನೆ ಅನುಷ್ಠಾನಕ್ಕಾಗಿ ಅಗತ್ಯವಿರುವ ವಿಶೇಷ ವಾಹನ ಖರೀದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ 50 ಪಾಲುದಾರಿಕೆಯಲ್ಲಿ ಒಪ್ಪಂದ ಮಾಡಿಕೊಳ್ಳಬೇಕು ಮತ್ತು ಬೆಂಗಳೂರು ರೈಲು ಸೇವೆಯ ಮೊದಲನೇ ಹಂತವನ್ನು ಶೀಘ್ರ ಅನುಷ್ಠಾನ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಉಪ ನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಒತ್ತಾಯ ಮಾಡುತ್ತೇವೆ. ಈ ನಮ್ಮ ರೈಲು ಯೋಜನೆಯಿಂದ ಬೆಂಗಳೂರು-ಚೆನ್ನೈ ಕಾರಿಡಾರ್ ಯೋಜನೆಗೆ ಸಹಾಯಕವಾಗಲಿದ್ದು, ರಾಜ್ಯದಲ್ಲಿ ಕೈಗಾರಿಕೀಕರಣವನ್ನು ಉತ್ತೇಜಿಸುತ್ತದೆ. ನಗರದ ಜನರಿಗೆ ಇದರಿಂದ ಸಹಾಯಕವಾಗುವುದಲ್ಲದೇ ರಾಜ್ಯ ಸರ್ಕಾರ ಮ್ತು ರೈಲ್ವೆ ಇಲಾಖೆಗೆ ಲಾಭಕಾರಿಯಾಗಿದೆ ಎಂದು ಪ್ರೊ.ರಾಜೀವ್ ಗೌಡ ಹೇಳಿದರು.
ಈ ರೈಲು ಯೋಜನೆಯಿಂದ ಮಹಾನಗರಕ್ಕೆ ಅಗತ್ಯವಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಲಭ್ಯವಾಗುತ್ತದೆ. ಬೆಂಗಳೂರು ಸುತ್ತಲಿನ ಉಪನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸಲು ಸಹಾಯಕವಾಗುತ್ತದೆ ಸಾಮಾಜಿಕ ಹಾಗೂ ಪ್ರಾದೇಶಿಕ ಅಭಿವೃದ್ಧಿಗೂ ಈ ಯೋಜನೆ ಸಹಕಾರಿಯಾಗಲಿದೆ ಎಂದು ರಾಜೀವ್ ಗೌಡ ಹೇಳಿದ್ದಾರೆ.
2009ರಿಂದ ಪ್ರಜಾ ರಾಗ್ ಮತ್ತು ಪ್ರೊ. ರಾಜೀವ್ ಗೌಡ ಅವರು, ನಮ್ಮ ರೈಲು ಯೋಜನೆಯ ಅನುಷ್ಠಾನಕ್ಕಾಗಿ ಕೆಲಸ ಮಾಡುತ್ತಿದ್ದಾರೆ. 2013-14ನೇ ಬಜೆಟ್ ನಲ್ಲಿ ಸಿದ್ದರಾಮಯ್ಯ ಈ ಯೋಜನೆಯನ್ನು ಸೇರಿಸಿದ್ದಾರೆ. ಫೆ.8ರಂದು ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರೈಲು ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರು ರೈಲು ವಿಕಾಸ ನಗಮ ಸ್ಥಾಪಿಸುವುದಾಗಿಯೂ ಘೋಷಿಸಿದ್ದಾರೆ.
ನಮ್ಮ ರೈಲು ಯೋಜನೆಯೂ ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್, ಪೀಣ್ಯ, ಬೊಮ್ಮಸಂದ್ರ ಮುಂತಾದ ಕೈಗಾರಿಕಾ ಹಾಗೂ ಉತ್ಪಾದನಾ ಕೇಂದ್ರಗಳಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತದೆ. ಈ ಸೇವೆಯಿಂದ ಪ್ರತಿದಿನ ಸುಮಾರು 1.5 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications