ಕಾಫಿ ಕಾರ್ಮಿಕ ಹೆಣ್ಣುಮಕ್ಕಳ ನೆರವಿಗಾಗಿ ಸಂತೆ
ಬೆಂಗಳೂರು, ಡಿಸೆಂಬರ್ 04 : ಘಮಘಮಿಸಿ ಕಾಫಿ ಪ್ರಿಯರನ್ನು ತನ್ನೆಡೆಗೆ ಸೆಳೆಯುವ ಕಾಫಿ ಸಂತೆ ಚಿತ್ರಕಲಾ ಪರಿಷತ್ತಿನಲ್ಲಿ ಭಾನುವಾರ ಮುಕ್ತಾಯವಾಗಿದೆ. ಸಾವಿರಾರು ಕಾಫಿ ಪ್ರಿಯರು ಸಂತೆಯ ಪ್ರಯೋಜನ ಪಡೆದಿದ್ದಾರೆ.
ಕಾಫಿತೋಟಗಳಲ್ಲಿ ದುಡಿಯುವ ಮಹಿಳಾ ಕಾರ್ಮಿಕರ ಸಬಲೀಕರಣ ಹಾಗೂ ಅವರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 'ಮಹಿಳಾ ಕಾಫಿ ಅಲೆಯನ್ಸ್ ಇಂಡಿಯಾ'ವು ಡಿ.1 ರಿಂದ ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಕಾಫಿ ಸಂತೆ ಆಯೋಜಿಸಿತ್ತು.

ಕಾಫಿಪ್ರಿಯರನ್ನು ಪ್ರೋತ್ಸಾಹಿಸುವುದು ಆ ಮೂಲಕ ಕಾಫಿಯನ್ನು ಜನಪ್ರಿಯಗೊಳಿಸುವುದು ಸಂತೆಯ ಉದ್ದೇಶ. ಸಂತೆಯಲ್ಲಿ ಉತ್ತಮ ಗುಣಮಟ್ಟದ ಕಾಫಿಪುಡಿ ಮಾರಾಟ, ಕಾಫಿ ತಯಾರಿಸುವ ಯಂತ್ರಗಳ (ಕಾಫಿ ಮೇಕಿಂಗ್ ಮಷಿನ್ ) ಮಾರಾಟ ನಡೆಯಿತು.
ಸಂತೆಯಲ್ಲಿ ಕಾಫಿ ಬೆಳೆಗಾರರು, ಕೆಫೆಗಳು, ಕಾಫಿ ಮಾರಾಟ ಮಳಿಗೆಗಳು, ಕಾಫಿ ಬೀಜದಿಂದ ತಯಾರಿಸಿದ ಆಭರಣಗಳ ಮಾರಾಟಕ್ಕೂ ವೇದಿಕೆ ಕಲ್ಪಿಸಲಾಗಿತ್ತು. ಕಾಫಿ ಬೀಜಗಳನ್ನು ಬಳಸಿ ರಚಿಸಿದ ಚಿತ್ರಕಲೆಗಳ ಪ್ರದರ್ಶನ ಹಾಗೂ ಮಾರಾಟ ನಡೆಯಿತು.

ಕಾಫಿ ಸಂತೆಯಲ್ಲಿ ಸಂಗ್ರಹಿಸಿದ ಹಣವನ್ನು ಕಾಫಿ ತೋಟದಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಶಿಬಿರ, ಆರೋಗ್ಯವಿಮೆ ಹಾಗೂ ಪೌಷ್ಠಿಕ ಆಹಾರ ವಿತರಣೆಗೆ ಬಳಸಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರು ಮಾಹಿತಿ ನೀಡಿದರು.

'ಸಕಲೇಶಪುರ, ಹಾಸನ, ಚಿಕ್ಕಮಗಳೂರು ಮತ್ತಿತರ ಜಿಲ್ಲೆಗಳಲ್ಲಿ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಕಾರ್ಮಿಕರ ಹೆಣ್ಣು ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ ಒದಗಿಸಲು ಹಣ ಸಂಗ್ರಹಿಸುವ ಉದ್ದೇಶದಿಂದ ನಗರದಲ್ಲಿ ಕಾಫಿ ಸಂತೆಯನ್ನು ಏರ್ಪಡಿಸಲಾಗಿತ್ತು. ಘಟಕವು ಮೂರನೇ ಬಾರಿಗೆ ಸಂತೆಯನ್ನು ಆಯೋಜಿಸಿದೆ.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications