ರಾಜ್ಯದ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಚಿಂತನೆ: ಸುಧಾಕರ್
ಬೆಂಗಳೂರು, ಫೆಬ್ರವರಿ 01:ರಾಜ್ಯದ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲದ ರಾಜ್ಯದ 9 ಜಿಲ್ಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡುವುದಾಗಿ ತಿಳಿಸಿದ್ದಾರೆ.
ಹೊಸ ನಾಲ್ಕು ಕಾಲೇಜುಗಳಲ್ಲಿ ಹೊಸ ಪ್ರವೇಶಾತಿಗೆ ಚಾಲನೆ ನೀಡಿದ್ದೇವೆ ಈ ಬಾರಿಯಿಂದ 150 ಹೆಚ್ಚುವರಿ ಪ್ರವೇಶಾತಿಗೆ ಅವಕಾಶ ಇದೆ. ಎಂಸಿಐ ಅನುಮತಿಯೂ ನಮಗೆ ಸಿಕ್ಕಿದೆ.

ಕೊರೊನಾ ಲಸಿಕೆ ಸಂಪೂರ್ಣ ಭಾರತಕ್ಕೆ ಸೇರಿದ್ದು ನಮ್ಮ ದೇಶದಲ್ಲಿ ತಯಾರಿಕೆ ಮಾಡಲಾಗುತ್ತಿದೆ ನಮ್ಮ ಸಂಶೋಧಕರ ಬಗ್ಗೆ ನಾವು ಹೆಮ್ಮೆ ಪಡಬೇಕು ಎಂದು ಸಚಿವ ಸುಧಾಕರ್ ತಿಳಿಸಿದರು.
ರಾಜ್ಯದ 9 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಲ್ಲ ಹೀಗಾಗಿ ಸಾರ್ವಜನಿಕ ಹೂಡಿಕೆಯಿಂದ ಕಾಲೇಜು ಸ್ಥಾಪಿಸಲು ಚಿಂತನೆ ನಡೆದಿದೆ.ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.
ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಕೇಳಿದ ಪ್ರಶ್ನೆಗೆ ಉತ್ತಿರಿಸಿದ ಸಚಿವರು, ಕ್ಲಿನಿಕಲ್ ಟ್ರಯಲ್ ಮಾಡುವುದು ಕೇಂದ್ರಕ್ಕೆ ಬಿಟ್ಟದ್ದು, ಕೇಂದ್ರ ಸರ್ಕಾರ ಕ್ಲಿನಿಕಲ್ ಟ್ರಯಲ್ ಮಾಡಿದೆ ನಂತರವೇ ರಾಜ್ಯಗಳಿಗೆ ಲಸಿಕೆ ಅಭಿಯಾನ ಆರಂಭಿಸಿದೆ. ಕೇಂದ್ರದ ಮಾರ್ಗಸೂಚಿಯನ್ನು ನಾವು ಯಥಾವತ್ತಾಗಿ ಪಾಲಿಸಿದ್ದೇವೆ. ಲಸಿಕೆ ಬಗ್ಗೆ ವಿವರವಾದ ಮಾಹಿತಿಗೆ ಕೇಂದ್ರ ಸರ್ಕಾರಕ್ಕೆ ಬರೆಯಬಹುದು ಎಂದರು.
ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದ ವೇಳೆ ರಾಜ್ಯದಲ್ಲಿ ಹೊಸ ಮೆಡಿಕಲ್ ಕಾಲೇಜು ಆರಂಭವಾಗುತ್ತಿವೆ. ಆದರೆ ಚಿಕ್ಕಬಳ್ಳಾಪುರಕ್ಕೆ ಮಾತ್ರ ಯಾಕೆ ಹೆಚ್ಚು ಅನುದಾನ ಹಾವೇರಿ, ಯಾದಗಿರಿ ಹಾಗೂ ಚಿಕ್ಕಮಗಳೂರು ಹೊಸ ಕಾಲೇಜುಗಳಿಗೆ ಅನುದಾನ ಕಡಿಮೆ ಯಾಕೆ ಎಂದು ಎಸ್.ವಿ.ಸಂಕನೂರು ಆರೋಗ್ಯ ಸಚಿವರಿಗೆ ಪ್ರಶ್ನೆ ಕೇಳಿದರು.
ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಮೊದಲೇ ಪ್ರಾರಂಭ ಆಗಿದೆ. ಹಾವೇರಿಯಲ್ಲಿ ಜಾಗದ ಸಮಸ್ಯೆ ಇತ್ತು, ಅದಕ್ಕೆ ಪ್ರಗತಿಯಲ್ಲಿ ಹಿಂದುಳಿದಿದೆ. 2022ರ ಜೂನ್ ಅಂತ್ಯಕ್ಕೆ ಕಾಮಗಾರಿ ಮುಗಿಸಲು ಕಾಲಮಿತಿ ನೀಡಿದ್ದೇವೆ. ಕೇಂದ್ರ ಸರ್ಕಾರ ಶೇ. 60, ರಾಜ್ಯ ಸರ್ಕಾರ ಶೇ. 40 ಅನುದಾನದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು.
Recommended Video
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications