ಕೊರೊನಾ ಲಸಿಕೆಯಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ: ಸುಧಾಕರ್
ಬೆಂಗಳೂರು/ಚಿಕ್ಕಬಳ್ಳಾಪುರ, ಜನವರಿ 17: ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ, ಲಸಿಕೆಯಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲ ದಿನವೇ 62% ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ. ಡಾ.ಸುದರ್ಶನ್ ಬಲ್ಲಾಳ್ ಅವರು ಲಸಿಕೆ ಪಡೆದಿದ್ದು, ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೀಗಾಗಿ ಜನರು ಲಸಿಕೆಯ ಮೇಲೆ ವಿಶ್ವಾಸವಿಡಬೇಕು. ಲಸಿಕೆ ಪಡೆದರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎರಡನೇ ಡೋಸ್ ಪಡೆದ 10 ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ. ಅಲ್ಲಿಯವರೆಗೂ ಸುರಕ್ಷತಾ ಕ್ರಮ ಪಾಲಿಸಬೇಕು ಎಂದರು.

ಮಣಿಪಾಲ್ ಆಸ್ಪತ್ರೆಯಲ್ಲಿ 4,200 ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್ ಗಳನ್ನು ರೂಪಿಸಿ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುತ್ತಿದೆ. ಶೇ.70 ರಷ್ಟು ಮಂದಿಗೆ ಲಸಿಕೆ ನೀಡಲು ಸಾಧ್ಯವಿದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ಕಾರಣಾಂತರಗಳಿಂದ ಲಸಿಕೆ ಪಡೆಯದವರು ಮತ್ತೆ ಲಸಿಕೆ ಪಡೆಯಲು ಅವಕಾಶವಿದೆ ಎಂದರು.

ಬಿಜೆಪಿ ವರಿಷ್ಠರು ನಮ್ಮ ಸರ್ಕಾರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಮುಂದಿನ ಐದು ವರ್ಷವೂ ನಮ್ಮ ಸರ್ಕಾರ ಇರಲಿದೆ ಎಂದು ಅವರು ಹೇಳಿದ್ದಾರೆ. ವಿರೋಧ ಪಕ್ಷಗಳು ವಿರೋಧವಾಗಿ ಹೇಳಿದರೆ ಅವರಿಗೆ ಮಾರ್ಕೆಟ್ ದೊರೆಯುತ್ತದೆ. ಯಾರು ಏನು ಹೇಳಿದರೂ ಅದನ್ನು ಸಾಬೀತುಮಾಡಬೇಕು ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications