ಜೆಪಿ ನಗರದ ಪ್ರಮುಖ ಆಕರ್ಷಣೆಯಾದ ಕಬ್ಬಿನ ಗಣಪತಿ
ಬೆಂಗಳೂರು ಸೆಪ್ಟೆಂಬರ್ 15: ಬೆಂಗಳೂರು ನಗರದಲ್ಲಿ ಪ್ರಮುಖ ಆಕರ್ಷಣೆ ಆಗಿರುವ ಅತಿ ದೊಡ್ಡ ಪರಿಸರ ಸ್ನೇಹಿ ಕಬ್ಬಿನ ಗಣಪತಿಯ ದರ್ಶನಕ್ಕೆ ಲಕ್ಷಾಂತರ ಭಕ್ತರ ದಂಡೇ ಅಗಮಿಸುತ್ತಿದೆ.
ಜೆ ಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 30 ಅಡಿ ಎತ್ತರದ ಕಬ್ಬಿನ ಗಣಪತಿಗೆ 4 ಸಾವಿರ ಕೆಜಿ ಬೃಹದಾಕಾರದ ಲಾಡು ನೈವೇದ್ಯಕ್ಕೆ ಇಟ್ಟಿದ್ದು ಕೂಡಾ ಪ್ರಮುಖ ಆಕರ್ಷಣೆ ಯೇ ಸರಿ.
ಬೆಳಗ್ಗಿನಿಂದಲೇ ದೇವಸ್ಥಾನಕ್ಕೆ ಕುಟುಂಬ ಸಮೇತವಾಗಿ ಆಗಮಿಸಿದ ಭಕ್ತರು ಗಣಪತಿಯ ದರುಶನ ಪಡೆದರು
ಈ ಕಬ್ಬಿನ ಗಣಪತಿ ಯನ್ನು ಇನ್ನು 10 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಹಾಗೆಯೇ ಮೊದಲೇ ತಿಳಿಸಿದಂತೆ 4 ಸಾವಿರ ಕೆಜಿ ಲಾಡುವನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ಹಂಚಲಾಗುತ್ತಿದೆ ಎಂದು ದೇವಸ್ಥಾನದ ಸಂಸ್ಥಾಪಕ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದರು.
ಕಬ್ಬಿನ ಗಣೇಶನಿಗೆ 4 ಸಾವಿರ ಕೆಜಿ ಬೃಹತ್ ಲಾಡು ಅರ್ಪಣೆ
ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ 30 ಅಡಿ ಎತ್ತರದ ಕಬ್ಬಿನಲ್ಲಿಯೇ ನಿರ್ಮಿಸಲಾಗಿರುವ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗುವುದು. ಈ ಮೂರ್ತಿ ಪರಿಸರ ಸ್ನೇಹಿಯಾಗಿರಲಿದೆ. ಅಲ್ಲದೆ ಪರಿಸರಕ್ಕೆ ಯಾವುದೇ ರೀತಿಯಲ್ಲೂ ಹಾನಿಯನ್ನು ಉಂಟು ಮಾಡದ ರೀತಿಯಲ್ಲಿ ನಿರ್ಮಿಸಲಾಗುವುದು. 50 ಟನ್ ಕಬ್ಬನ್ನು ಬಳಸಲಾಗಿದ್ದು, 50 ಕ್ಕೂ ಹೆಚ್ಚು ಕಾರ್ಮಿಕರು ಈ ಗಣಪತಿಯನ್ನು ನಿರ್ಮಿಸಲು ಹಗಲಿರುಳು ಶ್ರಮಿಸಿದ್ದಾರೆ ಎಂದರು.