ಅಭಿಗೆ ವಿಶ್ ಮಾಡಿದ ನಿಖಿಲ್, ಇದೆ ಸರಿಯಾದ ಹಾದಿ ಎಂದ ಸುಮಲತಾ
Recommended Video
ರಾಜಕೀಯದಲ್ಲಿ ಯಾರು ಶತ್ರುಗಳಿಲ್ಲ, ಯಾರು ಮಿತ್ರರೂ ಇರುವುದಿಲ್ಲ ಎಂಬ ಮಾತಿದೆ. ಆಪ್ತ ಸ್ನೇಹಿತರ ನಡುವೆ ರಾಜಕೀಯ ಕದನ, ವೈಮನಸ್ಯದ ಹೊಗೆಯಾಡಿದ್ದು ಈಗ ತಿಳಿಕೊಂಡಿದೆ. ಮಂಡ್ಯ ಲೋಕಸಭಾ ಚುನಾವಣೆ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ರೆಬಲ್ ಸ್ಟಾರ್ ಅಂಬರೀಷ್ ಅವರ ಪುತ್ರ ಅಭಿಷೇಕ್ ಅವರ ಚೊಚ್ಚಲ ಸಿನಿಮಾ 'ಅಮರ್' ಗೆ ಶುಭ ಹಾರೈಸಿದ್ದಾರೆ. ಮಂಡ್ಯ ಚುನಾವಣೆ ಸಂದರ್ಭದಲ್ಲಿ ಎರಡು ಬಣಗಳ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಅನಗತ್ಯ ನಿಂದನೆ, ಟೀಕೆ, ಟ್ರಾಲ್ ಕಂಡು ಬಂದಿತ್ತು. ಆದರೆ, ಇದೆಲ್ಲವನ್ನು ಮರೆತು ನಿಖಿಲ್ ಅವರು ಸೌಹಾರ್ದತೆಯ, ಭ್ರಾತೃತ್ವದೆಡೆ ಪಥದಲ್ಲಿ ಹೆಜ್ಜೆ ಇಟ್ಟು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಭಿಷೇಕ್ ಗೆ ಶುಭ ಹಾರೈಸಿದ್ದಾರೆ. ಇದಕ್ಕೆ ಅಭಿ ಕೂಡಾ ಪ್ರತಿಕ್ರಿಯಿಸಿದ್ದಾರೆ. ಇವರಿಬ್ಬರ ಪೋಸ್ಟ್ ಗಳನ್ನು ಟ್ವೀಟ್ ಮಾಡಿರುವ ಸಂಸದೆ ಸುಮಲತಾ, ಮುಂದೆ ಸಾಗಲು ಇದೇ ಸರಿಯಾದ ಮಾರ್ಗ ಎಂದಿದ್ದಾರೆ.
ಮಂಡ್ಯ ಚುನಾವಣೆ ಬಳಿಕ ನಿಖಿಲ್ ಮತ್ತು ಅಭಿಷೇಕ್ ನಡುವಿನ ಸ್ನೇಹ ಮುಂದುವರಿಯುತ್ತಾ? ಇಲ್ಲವಾ? ಒಬ್ಬರಿಗೊಬ್ಬರು ಮಾತನಾಡುವುದಿಲ್ಲವಾ? ಎಂಬೆಲ್ಲ ಕೆಟ್ಟ ಕುತೂಹಲ ಅಭಿಮಾನಿಗಳಲ್ಲಿತ್ತು. ಈಗ ಇವರಿಬ್ಬರ ಆತ್ಮೀಯ ಮಾತುಕತೆ ಪೋಸ್ಟ್ ನೋಡಿದಮೇಲೆ ಇಬ್ಬರ ನಡುವಿನ ಬಾಂಧವ್ಯಕ್ಕೆ ಕವಿದಿದ್ದ ಕಾರ್ಮೋಡ ಸರಿದಿದೆ ಎನ್ನಬಹುದು.

2019ರ ಲೋಕಸಭೆ ಚುನಾವಣೆ ಫಲಿತಾಂಶ ಮೇ 23ರಂದು ಪ್ರಕಟವಾಗಿದ್ದು, ಬಿಜೆಪಿ ಬೆಂಬಲದಿಮ್ದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅವರು ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು 1.26 ಲಕ್ಷಕ್ಕೂ ಅಧಿಕ ಮತಗಳಿಂದ ಸೋಲಿಸಿ ಸಂಸದೆಯಾಗಿ ಆಯ್ಕೆಯಾಗಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications