ಅಂಬಿ ಸಮಾಧಿ ಮುಂದೆ ನಾಮಪತ್ರಕ್ಕೆ ಪೂಜೆ, ಭಾವುಕರಾದ ಸುಮಲತಾ

ಬೆಂಗಳೂರು, ಮಾರ್ಚ್ 19 : ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಅಂಬರೀಶ್ ಸಮಾಧಿ ಮುಂದೆ ನಾಪಮತ್ರಕ್ಕೆ ಪೂಜೆ ಸಲ್ಲಿಸಿದರು. ಮಾ.20ರಂದು ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿ ಮುಂದೆ ಮಂಗಳವಾರ ಸಂಜೆ ಸುಮಲತಾ ಅವರು ನಾಮಪತ್ರಕ್ಕೆ ಪೂಜೆ ಸಲ್ಲಿಸಿದರು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮುಂತಾದವರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಸುಮಲತಾ ಅವರು ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾ.20ರಂದು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಅದಕ್ಕೂ ಮೊದಲು ಅಂಬರೀಶ್ ಸಮಾಧಿ ಮುಂದೆ ನಾಮಪತ್ರವನ್ನು ಇಟ್ಟು ಅವರು ಪೂಜೆ ಸಲ್ಲಿಸಿದರು.

Sumalatha offer prayers at Ambareesh memorial in Kanteerava Studio

ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಿದೆ. ಮಂಗಳವಾರ ಪಕ್ಷೇತರ ಅಭ್ಯರ್ಥಿಯಾಗಿ ಕೌಡ್ಲೆ ಚನ್ನಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಸಂಯುಕ್ತ ಜನತಾ ದಳ ಪಕ್ಷದಿಂದ ಒಬ್ಬರು, ಸಮಾಜವಾದಿ ಪಕ್ಷದಿಂದ ಒಬ್ಬರು ಮಂಡ್ಯದಿಂದ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಮಾ.26ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾ.29 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಏಪ್ರಿಲ್ 18ರಂದು ಮತದಾನ ನಡೆಯಲಿದೆ.

ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ. ಮಾ.25ರಂದು ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+