10 ದಿನಗಳ ಕಾಲ ಸುಮನಹಳ್ಳಿ ಮೇಲ್ಸೇತುವೆ ಬಂದ್, ಪರ್ಯಾಯ ಮಾರ್ಗ?
ಬೆಂಗಳೂರು, ನವೆಂಬರ್ 2: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಬೃಹದಾಕಾರದ ಹೊಂಡ ಇರುವ ಕಾರಣ ರಸ್ತೆ ಕಾಮಗಾರಿಗಾಗಿ ಹತ್ತು ದಿನಗಳ ಕಾಲ ಮೇಲ್ಸೇತುವೆಯನ್ನು ಬಿಬಿಎಂಪಿ ಮುಚ್ಚಿದೆ.
ನಾಯಂಡಹಳ್ಳಿಯಿಂದ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಹೊರ ವರ್ತುಲ ರಸ್ತೆಯಲಲ್ಲಿರುವ ಸಮುನಹಳ್ಳಿ ಮೇಲ್ಸೇತುವೆಯಲ್ಲಿ ಸುಮಾರು 6 ಅಡಿ ಅಗಲದಷ್ಟು ದೊಡ್ಡ ಗುಂಡಿಯಾಗಿದೆ.
ಕೇವಲ ಗುಂಡಿ ಮಾತ್ರವಲ್ಲ ಅದು ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರೆ ಅದರ ಅಡಿ ಇರುವ ಕಬ್ಬಿಣದ ಸರಳುಗಳು ಕೂಡ ಕಾಣುತ್ತಿವೆ. ಅಂದರೆ ಬಿಬಿಎಂಪಿಯ ಕಳಪೆ ಕಾಮಗಾರಿ ಎಷ್ಟಿದೆ ಎಂದು ಆ ಹೊಂಡವನ್ನು ನೋಡಿಯೇ ಅರಿಯಬಹುದಾಗಿದೆ.
ಗೊರಗುಂಟೆಪಾಳ್ಯದಿಂದ ನಾಯಂಡಹಳ್ಳಿ ಕಡೆ ಹೋಗುವ ವಾಹನಗಳು ಎಂದಿನಂತೆ ಫ್ಲೈಓವರ್ ಮೇಲೆ ಸಂಚರಿಸಬಹುದಾಗಿದೆ.

ಬಿಬಿಎಂಪಿ ಅಧಿಕಾರಿಗಳು ಕಳೆದ 4 ವರ್ಷಗಳಿಂದ ಸೇತುವೆ ನಿರ್ವಹಣೆ ಮಾಡಿರಲಿಲ್ಲ. ಈ ಬ್ರಿಡ್ಜ್ ನಿರ್ಮಾಣ ಮಾಡಿದ ಚೆನ್ನೈ ಮೂಲದ ಖಾಸಗಿ ಸಂಸ್ಥೆ ಇಸಿಸಿಐ 3 ರಾಜ್ಯಗಳಲ್ಲಿ ಕಪ್ಪು ಪಟ್ಟಿಯಲ್ಲಿದೆ. ಈ ಸೇತುವೆ ಹಾಳಾಗಳು ಅಧಿಕಾರಿಗಳ ಬೇಜಾವಾಬ್ದಾರಿ ಕಾರಣ ಎಂದು ನೇರವಾಗಿ ಹೇಳಿದ್ದಾರೆ.
ಸುಮನಹಳ್ಳಿ ಸಿಗ್ನಲ್ನಲ್ಲಿ ವಿಜಯನಗರ, ಮಾರುಕಟ್ಟೆ ಕಡೆಯಿಂದ ಸುಂಕದಕಟ್ಟೆ, ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆಗೆ ವಾಹನಗಳು ಸಂಚರಿಸುತ್ತವೆ. ಭಾರೀ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ 2007ರಲ್ಲಿ ಬಿಡಿಎ ಫ್ಲೈಓವರ್ ಕಾಮಗಾರಿಯ ಗುತ್ತಿಗೆಯನ್ನು ಚೆನ್ನೈ ಮೂಲದ ಇಸಿಸಿಐ ಕಂಪನಿಗೆ ನೀಡಿತ್ತು.
2010ರಲ್ಲಿ ಉದ್ಘಾಟನೆಯಾದ ಬಳಿಕ 2016ರವರೆಗೆ ಬಿಡಿಎ ನಿರ್ವಹಣೆ ಮಾಡಿ ನಂತರ ಬಿಬಿಎಂಪಿಗೆ ನೀಡಿತ್ತು. ಆದರೆ ಬಿಬಿಎಂಪಿ ಅಧಿಕಾರಿಗಳು ನಿರ್ವಹಣೆ ಸರಿ ಮಾಡದ ಪರಿಣಾಮ ರಸ್ತೆ ಗುಂಡಿ ಬಿದ್ದಿದೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ವತಃ ಅಧಿಕಾರಿಗಳ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಮೇಲ್ಸೇತುವೆಯನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುರಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications