ನಿಖಿಲ್ ಗಿಂತಲೂ ಸುಮಲತಾ ಯೋಗ್ಯ ಅಭ್ಯರ್ಥಿ: ಪ್ರಕಾಶ್ ರೈ
ಬೆಂಗಳೂರು, ಏಪ್ರಿಲ್ 11: ಸುಮಲತಾ ಅಂಬರೀಶ್ ಗೆ ಹೋಲಿಸಿದರೆ ನಿಖಿಲ್ ಕುಮಾರಸ್ವಾಮಿ ಅವರಷ್ಟು ಉತ್ತಮ ಅಭ್ಯರ್ಥಿ ಅಲ್ಲ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಖಿಲ್ ಯುವಕ ಆದರೆ ಚುನಾವಣಾ ಕಣದಲ್ಲಿ ವಯಸ್ಸು ಅರ್ಹತೆ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಸೇವಾ ಮನೋಭಾವ, ನಡತೆ, ಮಾತು, ಅನುಭವ ಇವೆಲ್ಲವೂ ಚುನಾವಣಾ ಕಣದಲ್ಲಿ ಮುಖ್ಯವಾಗುತ್ತದೆ, ಅರ್ಹತೆ ಇದ್ದರೆ ಕುಟುಂಬ ರಾಜಕಾರಣವೂ ಸಹ ಪರಿಗಣನೆಗೆ ಬರುವುದಿಲ್ಲ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ಸುಮಲತಾ ಅವರಿಗೆ ರಾಜಕೀಯದ ಬಗ್ಗೆ ಸ್ಪಷ್ಟತೆ ಇದೆ, ಅವರು ಗೆಲ್ಲಬೇಕು ಎಂದ ಪ್ರಕಾಶ್ ರೈ, ಸುಮಲತಾ ಅವರಿಗಿಂತಲೂ ಒಳ್ಳೆಯ ಅಭ್ಯರ್ಥಿ ಇದ್ದಿದ್ದರೆ ಅವರನ್ನು ಬೆಂಬಲಿಸಬಹುದಿತ್ತು, ಸುಮಲತಾ ಅವರ ಸ್ಪರ್ಧೆ ಕಾಂಗ್ರೆಸ್ಗೆ ನುಂಗಲರಾದ ತುತ್ತಾಗಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಟೀಕಿಸಿದ ಅವರು, ಎರಡೂ ಪಕ್ಷಗಳು ಕೇವಲ ರಾಜಕೀಯ ಉದ್ದೇಶದಿಂದ ಮೈತ್ರಿ ಮಾಡಿಕೊಂಡಿವೆ. ಆದರೆ ಕಾರ್ಯಕರ್ತರಿಗೆ ಮರ್ಯಾದೆ ಇದೆ ಅವರು ಮೈತ್ರಿಗೆ ಒಪ್ಪುತ್ತಿಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಪಕ್ಷಗಳು 'ನಾವು ಜಾತ್ಯಾತೀತರು' ಎಂದ ತಕ್ಷಣ ನಾವದನ್ನು ನಂಬಿಬಿಡಬೇಕಾ. ಬಿಜೆಪಿಯನ್ನು ಮಾತ್ರವೇ ಏಕೆ ಬೈಯಬೇಕು ಅವರು ಮಾತ್ರವೇ ಕೋಮುವಾದಿಗಳಾ ಎಂದು ಅವರು ಪ್ರಶ್ನಿಸಿದರು.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರಕಾಶ್ ರೈ ಅವರು, ಗೌರಿ ಲಂಕೇಶ್ ಹತ್ಯೆಯಿಂದ ಹುಟ್ಟಿದ ಹೋರಾಟದ ಕೆಚ್ಚಿನಿಂದ ಅಚಾನಕ್ ಆಗಿ ರಾಜಕೀಯಕ್ಕೆ ಬಂದಿದ್ದೇನೆ, ಇನ್ನೂ ಹದಿನೈದು ವರ್ಷ ರಾಜಕೀಯದಲ್ಲಿ ಮುಂದುವರೆಯುತ್ತೇನೆ ಎಂದು ಅವರು ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications