ನಿಖಿಲ್ ಗಿಂತಲೂ ಸುಮಲತಾ ಯೋಗ್ಯ ಅಭ್ಯರ್ಥಿ: ಪ್ರಕಾಶ್ ರೈ
ಬೆಂಗಳೂರು, ಏಪ್ರಿಲ್ 11: ಸುಮಲತಾ ಅಂಬರೀಶ್ ಗೆ ಹೋಲಿಸಿದರೆ ನಿಖಿಲ್ ಕುಮಾರಸ್ವಾಮಿ ಅವರಷ್ಟು ಉತ್ತಮ ಅಭ್ಯರ್ಥಿ ಅಲ್ಲ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಖಿಲ್ ಯುವಕ ಆದರೆ ಚುನಾವಣಾ ಕಣದಲ್ಲಿ ವಯಸ್ಸು ಅರ್ಹತೆ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಸೇವಾ ಮನೋಭಾವ, ನಡತೆ, ಮಾತು, ಅನುಭವ ಇವೆಲ್ಲವೂ ಚುನಾವಣಾ ಕಣದಲ್ಲಿ ಮುಖ್ಯವಾಗುತ್ತದೆ, ಅರ್ಹತೆ ಇದ್ದರೆ ಕುಟುಂಬ ರಾಜಕಾರಣವೂ ಸಹ ಪರಿಗಣನೆಗೆ ಬರುವುದಿಲ್ಲ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ಸುಮಲತಾ ಅವರಿಗೆ ರಾಜಕೀಯದ ಬಗ್ಗೆ ಸ್ಪಷ್ಟತೆ ಇದೆ, ಅವರು ಗೆಲ್ಲಬೇಕು ಎಂದ ಪ್ರಕಾಶ್ ರೈ, ಸುಮಲತಾ ಅವರಿಗಿಂತಲೂ ಒಳ್ಳೆಯ ಅಭ್ಯರ್ಥಿ ಇದ್ದಿದ್ದರೆ ಅವರನ್ನು ಬೆಂಬಲಿಸಬಹುದಿತ್ತು, ಸುಮಲತಾ ಅವರ ಸ್ಪರ್ಧೆ ಕಾಂಗ್ರೆಸ್ಗೆ ನುಂಗಲರಾದ ತುತ್ತಾಗಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಟೀಕಿಸಿದ ಅವರು, ಎರಡೂ ಪಕ್ಷಗಳು ಕೇವಲ ರಾಜಕೀಯ ಉದ್ದೇಶದಿಂದ ಮೈತ್ರಿ ಮಾಡಿಕೊಂಡಿವೆ. ಆದರೆ ಕಾರ್ಯಕರ್ತರಿಗೆ ಮರ್ಯಾದೆ ಇದೆ ಅವರು ಮೈತ್ರಿಗೆ ಒಪ್ಪುತ್ತಿಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಪಕ್ಷಗಳು 'ನಾವು ಜಾತ್ಯಾತೀತರು' ಎಂದ ತಕ್ಷಣ ನಾವದನ್ನು ನಂಬಿಬಿಡಬೇಕಾ. ಬಿಜೆಪಿಯನ್ನು ಮಾತ್ರವೇ ಏಕೆ ಬೈಯಬೇಕು ಅವರು ಮಾತ್ರವೇ ಕೋಮುವಾದಿಗಳಾ ಎಂದು ಅವರು ಪ್ರಶ್ನಿಸಿದರು.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರಕಾಶ್ ರೈ ಅವರು, ಗೌರಿ ಲಂಕೇಶ್ ಹತ್ಯೆಯಿಂದ ಹುಟ್ಟಿದ ಹೋರಾಟದ ಕೆಚ್ಚಿನಿಂದ ಅಚಾನಕ್ ಆಗಿ ರಾಜಕೀಯಕ್ಕೆ ಬಂದಿದ್ದೇನೆ, ಇನ್ನೂ ಹದಿನೈದು ವರ್ಷ ರಾಜಕೀಯದಲ್ಲಿ ಮುಂದುವರೆಯುತ್ತೇನೆ ಎಂದು ಅವರು ಹೇಳಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications