ಬೇಸಿಗೆ ಎಫೆಕ್ಟ್: ಬೆಂಗಳೂರಿನ ಕೆಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು, ಏಪ್ರಿಲ್ 27: ಹೆಚ್ಚುತ್ತಿರುವ ಬೇಸಿಗೆಯ ತಾಪಮಾನ ಪರಿಣಾಮ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನೀರಿಗೆ ಅಪಾರ ಬೇಡಿಕೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಬಾಣಸವಾಡಿಯ ಒಎಂಬಿಆರ್ ಲೇಔಟ್ ನಿವಾಸಿಗಳು ಒಂದು ತಿಂಗಳಿನಿಂದ ನಿತ್ಯವೂ ನೀರು ಪೂರೈಕೆ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಈ ಹಿಂದೆ ವಾರಕ್ಕೆ ಮೂರು ಬಾರಿ ನೀರು ಪಡೆಯುತ್ತಿದ್ದೆವು. ಈಗ ಇದು ಒಂದು ತಿಂಗಳಿನಿಂದ ಸತತ 10 ದಿನಗಳಿಗೊಮ್ಮೆ ನೀರು ಬರುತ್ತಿದೆ. ನಮಗೆ ನೀರು ಸಿಗುತ್ತಲೇ ಇಲ್ಲ. ಕೆಲವೊಮ್ಮೆ ನೀರನ್ನು ಅಲ್ಪ ಸಮಯ ಮಾತ್ರ ಅದು ಸ್ಪಲ್ವೇ ಸರಬರಾಜು ಮಾಡಲಾಗುತ್ತಿದೆ ಎಂದು ಒಎಂಬಿಆರ್ ಲೇಔಟ್ ನಿವಾಸಿಯೊಬ್ಬರು ತಿಳಿಸಿದರು.

ವಿದ್ಯಾಮಾನ್ಯನಗರ, ಅಂದ್ರಹಳ್ಳಿ, ಕಮ್ಮನಹಳ್ಳಿ ಮುಂತಾದ ಪ್ರದೇಶಗಳಿಂದಲೂ ಇದೇ ರೀತಿಯ ದೂರುಗಳು ಬರುತ್ತಿವೆ. ಈ ಬಗ್ಗೆ ನೀರು ಸರಬರಾಜು ಏಕೆ ತಡೆಯಾಗುತ್ತಿದೆ ಎಂದು ನಮಗೆ ಖಚಿತವಾಗಿಲ್ಲ. ಬಹುಶಃ ಬೇಡಿಕೆ ಹೆಚ್ಚಿರಬಹುದು. ಆದರೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ವಿದ್ಯಾಮಾನ್ಯ ನಗರದ ನಿವಾಸಿಯೊಬ್ಬರು ತಿಳಿಸಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ.
ನಮಗೆ ಆಗುತ್ತಿರುವ ನೀರಿನ ಹಾಹಾಕಾರದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕಾವೇರಿ ಭವನದಲ್ಲಿ (ಬಿಡ್ಲುಎಸ್ಎಸ್ಬಿ ಪ್ರಧಾನ ಕಚೇರಿ) ಅಧಿಕಾರಿಗಳನ್ನು ಭೇಟಿ ಮಾಡಲು ಚಿಂತನೆ ನಡೆಸಿರುವುದಾಗಿ ತಿಳಿಸಿದ್ದಾರೆ. ನೀರು ನಮಗೆ ಮೂಲಭೂತ ಅವಶ್ಯಕತೆಯಾಗಿದೆ. ಯಾವಾಗ ನೀರು ಸರಬರಾಜು ಬರುತ್ತದೆ ಎಂದು ಅಧಿಕಾರಿಗಳು ನಮಗೆ ತಿಳಿಸಬೇಕು. ನಾವು ಪ್ರತಿ ಬಾರಿ ದೂರು ನೀಡಿದಾಗಲೂ ಅವರು ನಮಗೆ ಕೆಲಸಗಾರ ರಜೆಯಲ್ಲಿದ್ದಾರೆ ಎಂಬ ಸಣ್ಣ ಕಾರಣಗಳನ್ನು ನೀಡುತ್ತಾರೆ. ಇಲ್ಲಿ ಕೆಲಸಗಾರರ ಕೊರತೆ ಇದೆಯೇ ಎಂಬುದು ನಮಗೂ ಗೊತ್ತಿಲ್ಲ ಎಂದರು.

ಕೆಲವು ನಿವಾಸಿಗಳು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡ್ಲುಎಸ್ಎಸ್ಬಿ) ಅಧಿಕಾರಿಗಳು ಖಾಸಗಿ ಟ್ಯಾಂಕರ್ಗಳೊಂದಿಗೆ ಶಾಮೀಲಾಗಿ ವ್ಯಾಪಾರ ಮಾಡಲು ಕೆಲಸ ಮಾಡುತ್ತಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಹಿರಿಯ ಬಿಡ್ಲುಎಸ್ಎಸ್ಬಿ ಅಧಿಕಾರಿಯೊಬ್ಬರು ನೀರಿನ ಕೊರತೆಯಾಗುತ್ತಿದೆ ಎಂಬ ಆರೋಪವನ್ನು ನಿರಾಕರಿಸಿ ಬದಲಿಗೆ ತಾಂತ್ರಿಕ ಅಡಚಣೆಗಳು ಮತ್ತು ವಿದ್ಯುತ್ ಅಡೆತಡೆಗಳಂತಹ ಸಮಸ್ಯೆಗಳಿವೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರಿನ ಪೂರ್ವ ಮತ್ತು ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ ಮಾತ್ರ ಸಮಸ್ಯೆ ಇದೆ. ಬೇಸಿಗೆಯಲ್ಲಿ ನೀರಿನ ಬೇಡಿಕೆ ಹೆಚ್ಚಾಗುವುದರ ಪರಿಣಾಮವಾಗಿ ನೀರಿನ ವ್ಯತ್ಯಯ ಕೊನೆಯಲ್ಲಿ ಪ್ರದೇಶಗಳಲ್ಲಿ ಹೆಚ್ಚಾಗಬಹುದು. ಆದರೆ ಶೀಘ್ರವೇ ಈ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದು ಬಿಡಬ್ಲ್ಯುಎಸ್ಎಸ್ಬಿ ಇಂಜಿನಿಯರ್-ಇನ್-ಚೀಫ್ ಹೇಳಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications