ಭಾನುವಾರವನ್ನೇ ಟಾರ್ಗೆಟ್ ಮಾಡಿಕೊಂಡ ಸರಗಳ್ಳರು
ಬೆಂಗಳೂರು, ಅಕ್ಟೋಬರ್, 12: ಸರಗಳ್ಳರು ಭಾನುವಾರವನ್ನೇ ಟಾರ್ಗೆಟ್ ಮಾಡಿಕೊಂಡಂತಿದೆ. ಜನ ಸಂಚಾರ ವಿರಳವಾಗಿರುತ್ತದೆ ಎಂಬುದು ಅದಕ್ಕೆ ಕಾರಣ ಇರಬಹುದು.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಮತ್ತು ವಿದ್ಯಾರಣ್ಯಪುರದಲ್ಲಿ ಇಬ್ಬರು ಮಹಿಳೆಯರ ಸರ ಕಳ್ಳತನ ಮಾಡಲಾಗಿದೆ. ಮತ್ತೊಂದೆಡೆ ಬ್ಲ್ಯಾಕ್ ಪಲ್ಸರ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೀಣ್ಯ ಎಂವಿಐ ಲೇಔಟ್ನಲ್ಲಿ ಮಹಿಳೆಯ ಸರ ಅಪಹರಣಕ್ಕೆ ಯತ್ನಿಸಿ ಪರಾರಿಯಾಗಿದ್ದಾರೆ.[ಈ ಎರಡು ಕೆಜಿ ಚಿನ್ನದಲ್ಲಿ ನಿಮ್ಮ ಸರವೂ ಇದೆಯಾ ನೋಡಿ?]

ವಿದ್ಯಾರಣ್ಯಪುರ ವ್ಯಾಪ್ತಿಯ ಬಿಇಎಲ್ 3ನೇ ಬ್ಲಾಕ್ ನಿವಾಸಿ ಭಾನುಮತಿ (65) ಎಂಬುವರು ತರಕಾರಿ ತರಲು ಹತ್ತಿರದ ಅಂಗಡಿಗೆ ಹೋಗುತ್ತಿದ್ದಾಗ ಹಿಂದಿನಿಂದ ನಡೆದುಕೊಂಡು ಬಂದ ದುಷ್ಕರ್ಮಿ 70 ಗ್ರಾಂ ಸರ ಕಿತ್ತುಕೊಂಡಿದ್ದಾನೆ. ಮಹಿಳೆ ಸಹಾಯಕ್ಕಾಗಿ ಕೂಗಿದ್ದಾಳೆ ಆದರೆ ಜನರು ಆಗಮಿಸುವಷ್ಟರಲ್ಲಿ ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಮತ್ತೊಬ್ಬ ವ್ಯಕ್ತಿಯ ಜತೆ ಕಳ್ಳ ಪರಾರಿಯಾಗಿದ್ದಾನೆ.[ಬಜಾಜ್ ಪಲ್ಸರ್ ವಿಶೇಷತೆಯೇನು?]
ಕಾಮಾಕ್ಷಿಪಾಳ್ಯದಲ್ಲಿ ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಕಾಮಾಕ್ಷಿಪಾಳ್ಯ ಸಮೀಪದ ಬಿಡಿಎ ಲೇಔಟ್ನ ಲತಾ (50) ಎಂಬುವರು ಸಮೀಪದ ಅಂಗಡಿಯಿಂದ ತರಕಾರಿ ಖರೀದಿಸಿ ಮನೆಗೆ ವಾಪಸಾಗುತ್ತಿದ್ದಾಗ ಹಿಂದಿನಿಂದ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಲತಾ ಅವರಿಂದ 100 ಗ್ರಾಂ ಚಿನ್ನದ ಸರ ದೋಚಿದ್ದಾರೆ.
ವಿಳಾಸ ಕೇಳುವ ನೆಪದಲ್ಲಿ ಬಂದರು
ಪೀಣ್ಯ ಎಂವಿಐ ಲೇಔಟ್ನಲ್ಲಿ ರಮಾಲಕ್ಷ್ಮಮ್ಮ (65) ಎಂಬುವರು ಮನೆ ಮುಂದೆ ನಿಂತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಬಳಿ ಬಂದ ದುಷ್ಕರ್ಮಿಯೊಬ್ಬ ಅವರ ಕುತ್ತಿಗೆಗೆ ಕೈ ಹಾಕಿ ಸರ ದೋಚಲು ಪ್ರಯತ್ನ ಮಾಡಿದ್ದಾನೆ. ಸರವನ್ನು ಗಟ್ಟಿಯಾಗಿ ಹಿಡಿದುಕೊಂಡ ಲಕ್ಷ್ಮಮ್ಮ ಕೂಗಿಕೊಂಡಿದ್ದಾರೆ. ಲಕ್ಷ್ಮಮ್ಮನ ಚೀರಾಟ ಕೇಳಿಸಿ ಮನೆಯಲ್ಲಿದ್ದ ಕುಟುಂಬ ಸದಸ್ಯರು ಹೊರಬರುತ್ತಿದ್ದಂತೆ ಹೆದರಿದ ಆರೋಪಿ ಪರಾರಿಯಾಗಿದ್ದಾನೆ. ಹಿಂದೆ ನಡೆದ ಬಹುತೇಕ ಸರಗಳ್ಳತ ಪ್ರಕರಣಗಳು ಭಾನುವಾರವೇ ನಡೆದಿದ್ದವು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications