ಕರ್ನಾಟಕದಲ್ಲಿ ಆಗಸ್ಟ್ ತಿಂಗಳಲ್ಲೂ ಭಾನುವಾರದ ಲಾಕ್ ಡೌನ್ ವಿಸ್ತರಣೆ
ಬೆಂಗಳೂರು, ಜುಲೈ.26: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಪ್ರತಿನಿತ್ಯ 5000ದ ಗಡಿ ದಾಟುತ್ತಿದೆ. ಈ ಹಿನ್ನೆಲೆ ಇನ್ನೂ ಮೂರು ವಾರಗಳ ಕಾಲ ಭಾನುವಾರದ ಲಾಕ್ ಡೌನ್ ವಿಸ್ತರಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ.
Recommended Video
ದೇಶಾದ್ಯಂತ ಎರಡನೇ ಅವಧಿ ಅನ್ ಲಾಕ್ ಮಾರ್ಗಸೂಚಿಯು ಐದು ದಿನಗಳಲ್ಲೇ ಅಂತ್ಯಗೊಳ್ಳಲಿದೆ. ಆಗಸ್ಟ್.01ರಿಂದ ಅನ್ ಲಾಕ್-3 ಮಾರ್ಗಸೂಚಿ ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಿದ್ಧತೆ ಮಾಡಿಕೊಂಡಿದೆ. ಈ ಮಧ್ಯೆ ರಾಜ್ಯ ಸರ್ಕಾರವು ಮಹತ್ವ ತೀರ್ಮಾನವನ್ನು ತೆಗೆದುಕೊಂಡಿದೆ.
ಆಗಸ್ಟ್ ತಿಂಗಳಿನಲ್ಲಿಯೂ ಭಾನುವಾರದ ಲಾಕ್ ಡೌನ್ ಮುಂದುವರಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಒಲವು ತೋರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಇನ್ನೂ ಮೂರು ವಾರಗಳ ಕಾಲ ಲಾಕ್ ಡೌನ್ ಮುಂದುವರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ.

ಜುಲೈ.27ರಂದು ಸಿಎಂಗಳ ಜೊತೆ ಪ್ರಧಾನಿ ಸಭೆ:
ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಅನ್ ಲಾಕ್-2 ಮಾರ್ಗಸೂಚಿಗಳನ್ನು ಪಾಲಿಸುವಂತೆ ಈ ಹಿಂದೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿತ್ತು. ಜುಲೈ.31ರಂದು ಈ ಮಾರ್ಗಸೂಚಿಗಳ ಅವಧಿ ಪೂರ್ಣಗೊಳ್ಳಲಿದ್ದು, ರಾಜ್ಯಗಳಲ್ಲಿನ ಕೊರೊನಾವೈರಸ್ ಸೋಂಕಿನ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜುಲೈ.27ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ. ಈ ಸಭೆಯ ಬಳಿಕ ಯಾವ ರೀತಿಯ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು ಎನ್ನುವ ಬಗ್ಗೆ ಕೇಂದ್ರ ಸರ್ಕಾರವು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications