ಬೆಂಗಳೂರು: ಮಾದರಿ ವಾರ್ಡ್ ನಿರ್ಮಾಣಕ್ಕೆ ಡಿಪಿಆರ್ ರೂಪಿಸಲು ಪಾಲಿಕೆ ಸೂಚನೆ
ಬೆಂಗಳೂರು, ಸೆಪ್ಟಂಬರ್ 16: ರಾಜಧಾನಿಯಲ್ಲಿ ಮಾದರಿ ವಾರ್ಡ್ ಸಿದ್ಧಗೊಳ್ಳುತ್ತಿದೆ. ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯ ಸುಂಕೆನಹಳ್ಳಿ ವಾರ್ಡ್ ಅನ್ನು ಮಾದರಿ ವಾರ್ಡ್ ರೂಪಿಸಲು ಕಾರ್ಯ ಸಾಧ್ಯತಾ ವರದಿ ಸಿದ್ಧಪಡಿಸಲು ಆಯುಕ್ತರಾದ ರಾಜೇಂದ್ರ ಚೋಳನ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ಮಂಗಳವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವುಗೊಳಿಸಿ, ನವೀನ ರೀತಿಯಲ್ಲಿ ಪಾದಚಾರಿ ನಿರ್ಮಾಣ, ಬ್ಲಾಕ್ ಸ್ಪಾಟ್ ಗಳ ತೆರವುಗೊಳಿಸಬೇಕು. ತ್ಯಾಜ್ಯ ನಿರ್ವಹಣೆ ಬಗ್ಗೆ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಬೇಕು. ಪಾದಚಾರಿ ವ್ಯಾಪಾರಿಗಳ ವ್ಯಾಪಾರಕ್ಕೆ ಸ್ಥಳ ನಿಗದಿಪಡಿಸುವುದು ಹಾಗೂ ಪಾದಚಾರಿ ಪಕ್ಕದಲ್ಲಿ ಸಸಿ ನೆಟ್ಟು ಹಸಿರೀಕರಣಗೊಳಿಸುವುದು ಸೇರಿದಂತೆ ಕಾರ್ಯ ಸಾಧ್ಯತಾ ವರದಿ (Action Plan) ಸಿದ್ದಪಡಿಸಿ ಸಲ್ಲಿಸಿ ಎಂದರು.

ಗಾಂಧಿ ಬಜಾರ್ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಈಗಾಗಲೇ ಸ್ಥಳ ನಿಗದಿಪಡಿಸಲಾಗಿದೆ. ನಿಗದಿಪಡಿಸಿದ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಅವಕಾಶ ನೀಡಬೇಕು. ಹೆಚ್ಚುವರಿಯಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಪಾದಚಾರಿ ಮಾರ್ಗಗಳಲ್ಲಿ ಪಾರ್ಕಿಂಗ್ ಮಾಡುವುದನ್ನು ತಡೆಯಬೇಕೆಂದು ತಿಳಿಸಿದರು.
ವಾರಕ್ಕೊಮ್ಮೆ ವಾಕಥಾನ್ ಮತ್ತು ತಿಂಗಳಿಗೊಮ್ಮೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಚಿಂತನೆ ನಡೆಸಲಾಗುವುದು. ಗಾಂಧಿ ಬಜಾರ್ ರಸ್ತೆಯಲ್ಲಿ ವಾರಕ್ಕೊಮ್ಮೆ ಸ್ಥಳೀಯರು ಮತ್ತು ವಿದ್ಯಾರ್ಥಿಗಳಿಗೆ ವಾಕಥಾನ್ ಹಾಗೂ ತಿಂಗಳಿಗೊಮ್ಮೆ ವಾಹನಗಳ ಸಂಚಾರ ಮುಕ್ತಗೊಳಿಸಿ ಸಾಂಸ್ಕೃತಿಕ ಚಟುವಟಿಕಗಳನ್ನು ಆಯೋಜಿಸಲು ಸಾಧಕ ಬಾಧಕಗಳ ಬಗ್ಗೆ ರೂಪುರೆಷೆ ಸಿದ್ದಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.
ಕಾರ್ ಪಾರ್ಕಿಂಗ್ ಕಟ್ಟಡ ಉದ್ಘಾಟನೆಗೆ ಸಿದ್ದತೆ
ಸ್ಮಾರ್ಟ್ ಸಿಟಿ ವತಿಯಿಂದ ಗಾಂಧಿ ಬಜಾರ್ ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಈ ಸಂಬಂಧ ಲೋಕಾರ್ಪಣೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ನಲ್ಲಿ ತಳ ಮಹಡಿ ಹಾಗೂ ನೆಲ ಮಹಡಿಯಲ್ಲಿ ವ್ಯಾಪಾರಕ್ಕಾಗಿ 50 ಮಳಿಗೆಗಳನ್ನು ನಿರ್ಮಿಸಲಾಗಿದೆ. ಮೊದಲನೇ ಮಹಡಿಯಿಂದ 4ನೇ ಮಹಡಿಯವರೆಗೆ ಕಾರ್ ಗಳ ನಿಲುಗಡೆಗೆ ವ್ಯವಸ್ಥೆ (ಒಂದು ಮಹಡಿಯಲ್ಲಿ 31 ವಾಹನ)ಮಾಡಿದ್ದು, ಒಟ್ಟು 124 ವಾಹನಗಳನ್ನು ನಿಲುಗಡೆ ಮಾಡಬಹುದು. ಒಂದು ಲಿಪ್ಟ್, 6 ಶೌಚಾಲಯ, ಸ್ಟೆಪ್ಸ್ ಹಾಗೂ ಮೇಲ್ಚಾವಣಿಯಲ್ಲಿ ಟೆನ್ಸೆಲ್ ರೂಫಿಂಗ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications