ಹೊಸ ವರ್ಷಕ್ಕೆ ಬೆಂಗ್ಳೂರಿಗೆ 'ಸೇಸಮ್ಮ' ಸನ್ನಿ ಲಿಯೋನ್ ಬರಕ್ಕಿಲ್ವ?
ಬೆಂಗಳೂರು, ಡಿಸೆಂಬರ್ 19: ಬೆಂಗ್ಳೂರಲ್ಲಿ ಸೇಸಮ್ಮ ಸನ್ನಿ ಲಿಯೋನ್ ಡ್ಯಾನ್ಸ್ ನೋಡ್ಬೇಕು ಎಂದು ಟಿಕೆಟ್ ಬುಕ್ ಮಾಡಿಕೊಂಡವರು ಈಗ ಕೈ ಕೈ ಹಿಸುಕಿಕೊಳ್ಳಬೇಕಾಗಿದೆ. ಪೊಲೀಸರ ರಕ್ಷಣೆ ಸಿಗದ ಕಾರಣ ಕಾರ್ಯಕ್ರಮಕ್ಕೆ ಬರಕ್ಕಿಲ್ಲ ಎಂದು ನಟಿ ಸನ್ನಿ ಲಿಯೋನ್ ಅವರು ಮಂಗಳವಾರ ಹೇಳಿದ್ದಾರೆ.
'ಸನ್ನಿ ನೈಟ್' ಕಾರ್ಯಕ್ರಮದ ಅಯೋಜಕರು,ಕರ್ನಾಟಕ ರಕ್ಷಣಾ ವೇದಿಕೆ, ಸರ್ಕಾರದ ಪ್ರತಿರೋಧಕ್ಕೆ ಸವಾಲು ವಿರುದ್ಧ ರಿಟ್ ಅರ್ಜಿ ಸಲ್ಲಿಸಿ ಕೋರ್ಟಿನಲ್ಲಿ ಕಾನೂನು ಸಮರಕ್ಕೆ ನಾಂದಿ ಹಾಡಿದ್ದಾರೆ.
ಸೇಸಮ್ಮ ಸಾಂಗಿನಲ್ಲಿ ಕುಣಿದಿರುವ ಸನ್ನಿ ಲಿಯೋನ್ 'ನಾನು ಇಲ್ಲಿಗೆ ಬರೋಕೆ ತುಂಬಾ ತೊಂದರೆ' ಎಂದು ಥೇಟ್ ಡಿಕೆ ಚಿತ್ರದ ಹಾಡಿನ ರೀತಿಯಲ್ಲೇ ಪ್ರತಿಕ್ರಿಯಿಸಿದ್ದಾರೆ.
'ಸನ್ನಿ ಬರಬಾರದು, ಬಂದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ' ಎಂದು ಕರವೇ ಕಾರ್ಯಕರ್ತರು ಗುಡುಗಿದ್ದಾರೆ. ಇದಕ್ಕೆ ತಕ್ಕಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಬೆಂಗಳೂರಿನ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರು ಕೂಡಾ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಲು ಮುಂದಾಗಿದ್ದಾರೆ.

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಡಿಸೆಂಬರ್ 31ರ ರಾತ್ರಿ ಸನ್ನಿ ನೈಟ್ ಆಯೋಜಿಸಿರುವ ಜಾಹೀರಾತು ಸಂಸ್ಥೆ ಟೈಮ್ಸ್ ಕ್ರಿಯೇಷನ್ ನ ಹರೀಶ್ ಅವರು ಮಾತ್ರ ಸನ್ನಿ ಲಿಯೋನ್ ಕುಣಿಯುವುದನ್ನು ತಡೆಯಲು ಸಾಧ್ಯವಿಲ್ಲ. ಇದೊಂದು ಫ್ಯಾಮಿಲಿ ಪೋಗ್ರಾಂ, ನಂಗಾ ನಾಚ್ ಎಂದು ತಪ್ಪಾಗಿ ಭಾವಿಸಿದ್ದಾರೆ. ನಾನು ಕೂಡಾ ಕನ್ನಡಿಗ, ಸಂಸ್ಕೃತಿ ಬಗ್ಗೆ ಗೌರವವಿದೆ. ಕಲಾವಿದರಿಗೆ ನಾವು ಗೌರವ ನೀಡಬೇಕು ಎಂದಿದ್ದಾರೆ.
ಆಯೋಜಕರಲ್ಲಿ ಒಬ್ಬರಾದ ಭವ್ಯ ಎಂಬುವರು ಟೈಮ್ ಕ್ರಿಯೆಷನ್ಸ್ ಪರವಾಗಿ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸರು ಮೌಖಿಕ ಆದೇಶವನ್ನಷ್ಟೇ ನೀಡಿದ್ದಾರೆ. ಕಾರ್ಯಕ್ರಮ ರದ್ದಾದರೆ ಭಾರಿ ನಷ್ಟವಾಗಲಿದೆ ಎಂದಿದ್ದಾರೆ. ಈ ಕಾರ್ಯಕ್ರಮಕ್ಕೆ 2 ರಿಂದ 3 ಕೋಟಿ ರು ಹೂಡಿಕೆ ಮಾಡಲಾಗಿದೆ. ಸನ್ನಿ ಲಿಯೋನ್ ಹಾಗೂ ತಂಡಕ್ಕೆ ಈ ಕಾರ್ಯಕ್ರಮಕ್ಕೆ 50 ರಿಂದ 70 ಲಕ್ಷ ರು ತನಕ ನೀಡಿರುವ ಮಾಹಿತಿ ಇದೆ.(ಪಿಟಿಐ)
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications