Sunny Leone: ಬೆಂಗಳೂರಿನ ಬಗ್ಗೆ ಸನ್ನಿ ಲಿಯೋನಿ ಏನ್ ಹೇಳಿದ್ರು ಗೊತ್ತಾ?
Sunny Leone: ನಟಿ ಸನ್ನಿ ಲಿಯೋನಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಅವರು ಕನ್ನಡದ ಬಗ್ಗೆ ಉತ್ತಮ ಮಾತುಗಳನ್ನಾಡಿ ಗಮನ ಸೆಳೆದಿದ್ದರು. ಇದೀಗ ಮತ್ತೆ ನಿನ್ನೆ (ಡಿಸೆಂಬರ್ 07) ಸಂಜೆ ಬೆಂಗಳೂರಿಗೆ ಪಾರ್ಟಿಗಾಗಿ ಆಗಮಿಸಿದ್ದರು. ಈ ವೇಳೆ ಬೆಂಗಳೂರಿನ ಬಗ್ಗೆ ಮಾತನಾಡಿರುವ ಅವರು ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ.
ನಟಿ ಸನ್ನಿ ಲಿಯೋನಿ ನಿನ್ನೆ ಸಂಜೆ ಬೆಂಗಳೂರಿಗೆ ಪಾರ್ಟಿ ಮಾಡಲು ಬಂದಿದ್ದರು. ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ವೈಟ್ ಲೋಟಸ್ ಕ್ಲಬ್ನಲ್ಲಿ ನಡೆದ ಡಿಜೆ ಪಾರ್ಟಿಗೆ ಸನ್ನಿ ಲಿಯೋನ್ ಮುಖ್ಯ ಅತಿಥಿ ಆಗಿದ್ದರು.

ನಿನ್ನೆ ವೈಟ್ ಲೋಟಸ್ ಕ್ಲಬ್ನಲ್ಲಿ ಪಾರ್ಟಿ ಅದ್ಧೂರಿಯಾಗಿ ನಡೆದಿದೆ. ಇನ್ನು ಈ ಪಾರ್ಟಿಯಲ್ಲಿ ಸನ್ನಿ ಲಿಯೋನಿ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬುಕ್ ಮೈ ಶೋನಲ್ಲಿ ಈ ಪಾರ್ಟಿಯ ಟಿಕೆಟ್ಗಳನ್ನು ಸಹ ಮಾರಾಟ ಮಾಡಲಾಗಿತ್ತು. ಪಾರ್ಟಿಗೆ ಹೋಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸನ್ನಿ ಲಿಯೋನ್, ಬೆಂಗಳೂರು, ಪಾರ್ಟಿ ಬಗ್ಗೆ ಮಾತನಾಡಿ ಗಮನ ಸೆಳೆದರು.
ಸನ್ನಿ ಲಿಯೋನ್ ಹೇಳಿದ್ದೇನು?: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದರೆ, ಎ2 ಆರೋಪಿ ದರ್ಶನ್ ಆಗಿದ್ದಾನೆ. ಇನ್ನು ಈ ಬಗ್ಗೆ ಹಲವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೆಯೇ ಇತ್ತೀಚೆಗಷ್ಟೇ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ಮಾತನಾಡಿ ಗರಂ ಆಗಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ದರ್ಶನ್ ಇದೀಗ ಅನ್ನಪೂರ್ಣೇಶ್ವರಿನಗರ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇನ್ನು ಈ ಬಗ್ಗೆ ಕೆಲ ಅಂಧಾಭಿಮಾನಿಗಳು ಡಿ ಬಾಸ್ ಏನು ಮಾಡಿಲ್ಲ ಅಂತಾ ಹೇಳುತ್ತಿದ್ದರೆ, ಮತ್ತೆ ಕೆಲವರು ಅವರು ಏನೇ ಮಾಡಿದರೂ ಸರಿ ಇರತ್ತೆ ಎನ್ನುವ ಮಾತುಗಳನ್ನು ರಾಜರೋಷವಾಗಿ ಹೇಳುತ್ತಿದ್ದಾರೆ.
ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಅಂತಾ ಕೊಲೆ ಮಾಡಿರುವ ಆರೋಪ ದರ್ಶನ್ ಮತ್ತು ಗ್ಯಾಂಗ್ ಮೇಲಿದ್ದು, ಸದ್ಯ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇನ್ನು. ಈ ಬಗ್ಗೆ ಮಾತನಾಡಿದ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ಆಕ್ರೋಶ ಹೊರಹಾಕಿದ್ದಾರೆ.
ನಟಿ ಸನ್ನಿಲಿಯೋನ್ ಬೆಂಗಳೂರಿನ ಹೆಚ್.ಆರ್.ಬಿ.ಆರ್ ಲೇಔಟ್ನಲ್ಲಿ ನೂತನಾವಿ ಆರಂಭ ಆಗುತ್ತಿರುವ ನ್ಯಾಚುರಲ್ ಬ್ಯೂಟಿ ಆಂಡ್ ಎಕ್ಸ್ಪಿರಿಯನ್ಸ್ ಉದ್ಘಾಟನೆಗಾಗಿ ಪತಿ ಡೇನಿಯಲ್ ವೇಬರ್ ಜೊತೆ ಬಂದಿದ್ದರು. ಈ ವೇಳೆ ಮಾಧ್ಯಮದವರು ದರ್ಶನ್ ಪ್ರಕರಣದ ಬಗ್ಗೆ ಕೇಳಿದಾಗ, ಇದು ತುಂಬಾ ಕಷ್ಟಕರವಾದ ಪ್ರಶ್ನೆಯಾಗಿದೆ. ತಂಗಿ, ಪತ್ನಿ ಮತ್ತು ತಾಯಿಯನ್ನು ಖುಷಿಪಡಿಸಲು ಯಾವ ವಸ್ತು ಖರೀದಿ ಮಾಡುತ್ತೀರಿ ಹೇಳಿ. ಆಗಲ್ಲವಲ್ಲಾ, ಇದು ಸಹ ಹಾಗೆ ಎಂದು ಹೇಳುವ ಮೂಲಕ ಸನ್ನಿಲಿಯೋನ್ ಕೊಂಚ ಗರಂ ಆದ ಘಟನೆ ನಡೆದಿದೆ.
ಐ ಲವ್ ಯು ಬೆಂಗಳೂರು: ಕನ್ನಡ ಕಲಿಯುತ್ತೇನೆ ಎಂದು ಮಾತು ಆರಂಭಿಸಿದ ಸನ್ನಿಲಿಯೋನ್, ಐ ಲವ್ ಯು ಬೆಂಗಳೂರು ಎಂದು ಜೋರಾಗಿ ಕೂಗಿದ್ದಾರೆ. ಅಷ್ಟೇ ಅಲ್ಲದೆ, ನನಗೆ ಸ್ವಲ್ಪ ಕನ್ನಡ ಬರುತ್ತದೆ. ಇನ್ನೂ ಕಲಿಯುತ್ತೇನೆ ಎಂದು ಹೇಳಿ ಗಮನ ಸೆಳೆದಿದ್ದಾರೆ.
ಇನ್ನು ಸನ್ನಿ ಲಿಯೋನ್ ಕಾರ್ನಿಂದ ಇಳಿಯುತ್ತಿದ್ದಂತೆ ಅಭಿಮಾನಿಗಳು ಜೋರಾಗಿ ಶಿಳ್ಳೆ, ಚಪ್ಪಾಳೆ ಹೊಡೆಯುವ ಮೂಲಕ ಅವರನ್ನು ಸಿಲಿಕಾನ್ ಸಿಟಿಗೆ ಸ್ವಾಗತ ಎಂದು ಅದ್ಧೂರಿಯಾಗಿ ಸ್ವಾಗತಿಸಿಕೊಂಡಿದ್ದಾರೆ. ಇನ್ನುಳಿದ ಅಭಿಮಾನಿಗಳು ದೂರದಲ್ಲೇ ನಿಂತು ಸನ್ನಿಲಿಯೋನ್ ಫೋಟೋ ಸೆರೆಹಿಡಿದು, ಅಲ್ಲಿಂದಲೇ ಸೆಲ್ಫಿ ಕ್ಲಿಕ್ಕಿಸಿಕೊಂಡು ಕುಣಿದು ಕುಪ್ಪಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications