Sunny Leone: ಬೆಂಗಳೂರಿನ ಬಗ್ಗೆ ಸನ್ನಿ ಲಿಯೋನಿ ಏನ್ ಹೇಳಿದ್ರು ಗೊತ್ತಾ?
Sunny Leone: ನಟಿ ಸನ್ನಿ ಲಿಯೋನಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಅವರು ಕನ್ನಡದ ಬಗ್ಗೆ ಉತ್ತಮ ಮಾತುಗಳನ್ನಾಡಿ ಗಮನ ಸೆಳೆದಿದ್ದರು. ಇದೀಗ ಮತ್ತೆ ನಿನ್ನೆ (ಡಿಸೆಂಬರ್ 07) ಸಂಜೆ ಬೆಂಗಳೂರಿಗೆ ಪಾರ್ಟಿಗಾಗಿ ಆಗಮಿಸಿದ್ದರು. ಈ ವೇಳೆ ಬೆಂಗಳೂರಿನ ಬಗ್ಗೆ ಮಾತನಾಡಿರುವ ಅವರು ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ.
ನಟಿ ಸನ್ನಿ ಲಿಯೋನಿ ನಿನ್ನೆ ಸಂಜೆ ಬೆಂಗಳೂರಿಗೆ ಪಾರ್ಟಿ ಮಾಡಲು ಬಂದಿದ್ದರು. ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ವೈಟ್ ಲೋಟಸ್ ಕ್ಲಬ್ನಲ್ಲಿ ನಡೆದ ಡಿಜೆ ಪಾರ್ಟಿಗೆ ಸನ್ನಿ ಲಿಯೋನ್ ಮುಖ್ಯ ಅತಿಥಿ ಆಗಿದ್ದರು.

ನಿನ್ನೆ ವೈಟ್ ಲೋಟಸ್ ಕ್ಲಬ್ನಲ್ಲಿ ಪಾರ್ಟಿ ಅದ್ಧೂರಿಯಾಗಿ ನಡೆದಿದೆ. ಇನ್ನು ಈ ಪಾರ್ಟಿಯಲ್ಲಿ ಸನ್ನಿ ಲಿಯೋನಿ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬುಕ್ ಮೈ ಶೋನಲ್ಲಿ ಈ ಪಾರ್ಟಿಯ ಟಿಕೆಟ್ಗಳನ್ನು ಸಹ ಮಾರಾಟ ಮಾಡಲಾಗಿತ್ತು. ಪಾರ್ಟಿಗೆ ಹೋಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸನ್ನಿ ಲಿಯೋನ್, ಬೆಂಗಳೂರು, ಪಾರ್ಟಿ ಬಗ್ಗೆ ಮಾತನಾಡಿ ಗಮನ ಸೆಳೆದರು.
ಸನ್ನಿ ಲಿಯೋನ್ ಹೇಳಿದ್ದೇನು?: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದರೆ, ಎ2 ಆರೋಪಿ ದರ್ಶನ್ ಆಗಿದ್ದಾನೆ. ಇನ್ನು ಈ ಬಗ್ಗೆ ಹಲವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೆಯೇ ಇತ್ತೀಚೆಗಷ್ಟೇ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ಮಾತನಾಡಿ ಗರಂ ಆಗಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ದರ್ಶನ್ ಇದೀಗ ಅನ್ನಪೂರ್ಣೇಶ್ವರಿನಗರ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇನ್ನು ಈ ಬಗ್ಗೆ ಕೆಲ ಅಂಧಾಭಿಮಾನಿಗಳು ಡಿ ಬಾಸ್ ಏನು ಮಾಡಿಲ್ಲ ಅಂತಾ ಹೇಳುತ್ತಿದ್ದರೆ, ಮತ್ತೆ ಕೆಲವರು ಅವರು ಏನೇ ಮಾಡಿದರೂ ಸರಿ ಇರತ್ತೆ ಎನ್ನುವ ಮಾತುಗಳನ್ನು ರಾಜರೋಷವಾಗಿ ಹೇಳುತ್ತಿದ್ದಾರೆ.
ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಅಂತಾ ಕೊಲೆ ಮಾಡಿರುವ ಆರೋಪ ದರ್ಶನ್ ಮತ್ತು ಗ್ಯಾಂಗ್ ಮೇಲಿದ್ದು, ಸದ್ಯ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇನ್ನು. ಈ ಬಗ್ಗೆ ಮಾತನಾಡಿದ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ಆಕ್ರೋಶ ಹೊರಹಾಕಿದ್ದಾರೆ.
ನಟಿ ಸನ್ನಿಲಿಯೋನ್ ಬೆಂಗಳೂರಿನ ಹೆಚ್.ಆರ್.ಬಿ.ಆರ್ ಲೇಔಟ್ನಲ್ಲಿ ನೂತನಾವಿ ಆರಂಭ ಆಗುತ್ತಿರುವ ನ್ಯಾಚುರಲ್ ಬ್ಯೂಟಿ ಆಂಡ್ ಎಕ್ಸ್ಪಿರಿಯನ್ಸ್ ಉದ್ಘಾಟನೆಗಾಗಿ ಪತಿ ಡೇನಿಯಲ್ ವೇಬರ್ ಜೊತೆ ಬಂದಿದ್ದರು. ಈ ವೇಳೆ ಮಾಧ್ಯಮದವರು ದರ್ಶನ್ ಪ್ರಕರಣದ ಬಗ್ಗೆ ಕೇಳಿದಾಗ, ಇದು ತುಂಬಾ ಕಷ್ಟಕರವಾದ ಪ್ರಶ್ನೆಯಾಗಿದೆ. ತಂಗಿ, ಪತ್ನಿ ಮತ್ತು ತಾಯಿಯನ್ನು ಖುಷಿಪಡಿಸಲು ಯಾವ ವಸ್ತು ಖರೀದಿ ಮಾಡುತ್ತೀರಿ ಹೇಳಿ. ಆಗಲ್ಲವಲ್ಲಾ, ಇದು ಸಹ ಹಾಗೆ ಎಂದು ಹೇಳುವ ಮೂಲಕ ಸನ್ನಿಲಿಯೋನ್ ಕೊಂಚ ಗರಂ ಆದ ಘಟನೆ ನಡೆದಿದೆ.
ಐ ಲವ್ ಯು ಬೆಂಗಳೂರು: ಕನ್ನಡ ಕಲಿಯುತ್ತೇನೆ ಎಂದು ಮಾತು ಆರಂಭಿಸಿದ ಸನ್ನಿಲಿಯೋನ್, ಐ ಲವ್ ಯು ಬೆಂಗಳೂರು ಎಂದು ಜೋರಾಗಿ ಕೂಗಿದ್ದಾರೆ. ಅಷ್ಟೇ ಅಲ್ಲದೆ, ನನಗೆ ಸ್ವಲ್ಪ ಕನ್ನಡ ಬರುತ್ತದೆ. ಇನ್ನೂ ಕಲಿಯುತ್ತೇನೆ ಎಂದು ಹೇಳಿ ಗಮನ ಸೆಳೆದಿದ್ದಾರೆ.
ಇನ್ನು ಸನ್ನಿ ಲಿಯೋನ್ ಕಾರ್ನಿಂದ ಇಳಿಯುತ್ತಿದ್ದಂತೆ ಅಭಿಮಾನಿಗಳು ಜೋರಾಗಿ ಶಿಳ್ಳೆ, ಚಪ್ಪಾಳೆ ಹೊಡೆಯುವ ಮೂಲಕ ಅವರನ್ನು ಸಿಲಿಕಾನ್ ಸಿಟಿಗೆ ಸ್ವಾಗತ ಎಂದು ಅದ್ಧೂರಿಯಾಗಿ ಸ್ವಾಗತಿಸಿಕೊಂಡಿದ್ದಾರೆ. ಇನ್ನುಳಿದ ಅಭಿಮಾನಿಗಳು ದೂರದಲ್ಲೇ ನಿಂತು ಸನ್ನಿಲಿಯೋನ್ ಫೋಟೋ ಸೆರೆಹಿಡಿದು, ಅಲ್ಲಿಂದಲೇ ಸೆಲ್ಫಿ ಕ್ಲಿಕ್ಕಿಸಿಕೊಂಡು ಕುಣಿದು ಕುಪ್ಪಳಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications