ಮಕರ ಸಂಕ್ರಾಂತಿ ದಿನ ಗವಿ ಗಂಗಾಧರೇಶ್ವರನ ಸ್ಪರ್ಶಿಸದ ಸೂರ್ಯನ ಕಿರಣ
ಪ್ರತಿ ವರ್ಷ ಮಕರ ಸಂಕ್ರಾಂತಿ ಹಬ್ಬದ ದಿನ ಬೆಂಗಳೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ್ ದೇಗುಲದಲ್ಲಿ ನಡೆಯುವ ಪ್ರಕೃತಿ ವಿಸ್ಮಯವನ್ನು ನೋಡಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಮಕರ ಸಂಕ್ರಾಂತಿ ದಿನ ಸಂಜೆ ವೇಳೆ ಗವಿ ಗಂಗಾಧರೇಶ್ವರನನ್ನು ಸೂರ್ಯನ ಕಿರಣಗಳು ಸ್ಪರ್ಶಿಸುತ್ತವೆ. ಈ ಕೌತುಕವನ್ನು ಕಣ್ತುಂಬಿಕೊಳ್ಳಲು ಭಕ್ತರು ಅಪಾರ ಸಂಖ್ಯೆಯಲ್ಲಿ ಸೇರುತ್ತಾರೆ. ಈ ಬಾರಿ ಸಂಕ್ರಾಂತಿ ಹಬ್ಬದ ದಿನ ಸಾವಿರಾರು ಭಕ್ತರು ಈ ವಿಸ್ಮಯ ನೋಡಲು ಸೇರಿದ್ದರು, ಆದರೆ ಅವರಿಗೆ ನಿರಾಸೆಯಾಗಿದೆ.
ಇಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರನ ಮೂರ್ತಿಯನ್ನು ಸ್ಪರ್ಶಿಸದೇ ಇರುವುದು ಭಕ್ತರ ನಿರಾಸೆಗೆ ಕಾರಣವಾಗಿದೆ. ದೇವಸ್ಥಾನದ ಬಲಭಾಗದಲ್ಲಿರುವ ಕಮಾನಿನ ಕಿಟಕಿ ಮೂಲಕ ಗರ್ಭಗುಡಿಯನ್ನು ಪ್ರವೇಶಿಸುವ ಸೂರ್ಯನ ಕಿರಣ ಗಂಗಾಧರೇಶ್ವರನನ್ನು ಸ್ಪರ್ಶಿಸಬೇಕಿದ್ದು, ಆದರೆ ಮಂಗಳವಾರ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದ ಕಾರಣ ಗಂಗಾಧರೇಶ್ವರ ಮೇಲೆ ಸೂರ್ಯನ ಕಿರಣಗಳು ಬೀಳದೆ ಭಕ್ತರು ನಿರಾಸೆಗೊಂಡರು. ಇದು ಸೇರಿ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಇಂತಹ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮಕರ ಸಂಕ್ರಮಣ ಎಂದರೆ ಸೂರ್ಯ ತನ ಪಥವನ್ನು ಬದಲಾಯಿಸುವ ದಿನ ಎನ್ನುವುದು ಧಾರ್ಮಿಕ ನಂಬಿಕೆಯಾಗಿದೆ. ಉತ್ತರಾಯಣ ಪುಣ್ಯಕಾಲ ಎಂದು ಕೂಡ ಕರೆಯುತ್ತಾರೆ. ಇದು ರೈತರ ಹಬ್ಬವೂ ಹೌದು, ಬೆಳೆದ ಬೆಳೆಯನ್ನು ರಾಶಿ ಹಾಕಿ ಪೂಜಿಸಿ ಮನೆ ತುಂಬಿಸಿಕೊಳ್ಳುವ ಸಂಪ್ರದಾಯ ಕೂಡ ಇದೆ. ಸೂರ್ಯ ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಸಂಚಲನ ಮಾಡುವ ವೇಳೆ ಗವಿ ಗಂಗಾಧರೇಶ್ವರನಿಗೆ ನಮಿಸಿ ಹೋಗುತ್ತಾನೆ ಎನ್ನುವ ನಂಬಿಕೆ ಭಕ್ತರದ್ದಾಗಿದೆ.
ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಮಂಗಳವಾರ ಬೆಳಗ್ಗೆ 5 ಗಂಟೆಯಿಂದಲೇ ಮಹಾಮಂಗಳಾರತಿ ಮಾಡಲಾಗಿತ್ತು, ಸೂರ್ಯನ ಕಿರಣ ಸ್ಪರ್ಶಿಸುವ ದೃಶ್ಯ ಕಣ್ತುಂಬಿಕೊಳ್ಳಲು ಗಂಟೆ ಗಟ್ಟಲೆ ಕಾದಿದ್ದ ಭಕ್ತರಿಗೆ ಕೊನೆಗೂ ನಿರಾಸೆಯಾಯಿತಿ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications