ಸುಪಾರಿ ಕೇಸ್ ರದ್ದುಪಡಿಸಲು ಹೈಕೋರ್ಟಿಗೆ ರವಿ ಬೆಳಗೆರೆ ಅರ್ಜಿ
ಬೆಂಗಳೂರು, ನವೆಂಬರ್ 15: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ವಿರುದ್ಧ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ರವಿ ಬೆಳಗೆರೆ ಅವರು ತಮ್ಮ ವಿರುದ್ಧ ದೋಷರೋಪಣ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಹಾಕುತ್ತಿದ್ದಾರೆ.
ಈ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಜಾಮೀನು ನೀಡಿತ್ತು.ಬೆಂಗಳೂರಿನ 65ನೇ ಸಿಟಿಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಧುಸೂಧನ್. ಬಿ ಅವರು ರವಿ ಬೆಳಗೆರೆ ಅವರಿಗೆ ಡಿಸೆಂಬರ್ 21, 2017ರಂದು ಜಾಮೀನು ನೀಡಿತ್ತು.
ಜಾಮೀನು ರದ್ದುಗೊಳಿಸುವಂತೆ ಸರ್ಕಾರಿ ವಕೀಲರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಜಾಮೀನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು.

ಹೀಗೆ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಸುಪಾರಿ ಕೇಸಿನಲ್ಲಿ ತಾತ್ಕಾಲಿಕ ರಿಲೀಫ್ ಪಡೆದುಕೊಂಡ ರವಿ ಬೆಳಗೆರೆ ಅವರು ಈಗ ತಮ್ಮ ಮೇಲಿನ ದೋಷಾರೋಪಣ ಪಟ್ಟಿಯನ್ನು ರದ್ದುಗೊಳಿಸಿ, ಈ ಪ್ರಕರಣದಿಂದ ಮುಕ್ತಗೊಳಿಸುವಂತೆ ಕೋರಿದ್ದಾರೆ.
ರವಿ ಬೆಳಗೆರೆ ವಿರುದ್ಧ ಈಗಾಗಲೇ ಸುಪಾರಿ ಕೇಸಿಗೆ ಸಂಬಂಧಿಸಿದಂತೆ ರವಿ ಬೆಳೆಗೆರೆ ವಿರುದ್ಧ ಐಪಿಸಿ ಸೆಕ್ಷನ್ 307 ಹಾಗೂ 120 (ಬಿ) ಅನ್ವಯ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ 1958ರ ಸೆಕ್ಷನ್ 3 ಹಾಗೂ 25ರ ಅನ್ವಯ ಸುಬ್ರಮಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದಲ್ಲದೆ ಕೊಲೆ ಸಂಚು ಆರೋಪದಲ್ಲಿ ಈ ಐಪಿಎಸ್ ಸೆಕ್ಷನ್ 115 ನಂತೆ ಪ್ರಕರಣ ದಾಖಲಾಗಿದೆ.












Click it and Unblock the Notifications