ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಪಾರಿ ಕೇಸ್: ರವಿ ಬೆಳಗೆರೆ ಮಧ್ಯಂತರ ಜಾಮೀನು ವಿಸ್ತರಣೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ವಿಸ್ತರಣೆ ಮಾಡಲಾಗಿದೆ.

ಸುಪಾರಿ ಕೇಸ್ : ರವಿಬೆಳಗೆರೆಗೆ ಮಧ್ಯಂತರ ಜಾಮೀನು ಮಂಜೂರುಸುಪಾರಿ ಕೇಸ್ : ರವಿಬೆಳಗೆರೆಗೆ ಮಧ್ಯಂತರ ಜಾಮೀನು ಮಂಜೂರು

ಅನಾರೋಗ್ಯ ಹಿನ್ನಲೆಯಲ್ಲಿ ರವಿ ಬೆಳಗೆರೆ ಅವರ ಮಧ್ಯಂತರ ಜಾಮೀನು ಸೋಮವಾರ ಅಂದರೆ ಡಿಸೆಂಬರ್ 18ರ ವರೆಗೆ ವಿಸ್ತರಣೆ ಮಾಡಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಧುಸೂದನ್ ಶನಿವಾರ ಆದೇಶ ಹೊರಡಿಸಿದರು.

Supari to Kill: Journalist Ravi Belagere's interim conditional bail extended to December 18th

ಈ ಮೊದಲು ರವಿ ಬೆಳಗೆರೆ ಅವರಿಗೆ ಡಿಸೆಂಬರ್ 16ರ ವರೆಗೆ ಜಾಮೀನು ಮಂಜೂರು ಮಾಡಲಾಗಿತ್ತು. ಅದು ಇಂದಿಗೆ (ಶನಿವಾರ) ಅಂತ್ಯವಾಗಿದ್ದರಿಂದ ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಮದುಸೂಧನ್ ಅವರು ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದರು.

ಇಬ್ಬರ ಶ್ಯೂರಿಟಿ, 1 ಲಕ್ಷ ರು ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ನ್ಯಾಯಾಧೀಶ ಮದುಸೂಧನ್ ವಿಧಿಸಿದ್ದಾರೆ. ಡಿಸೆಂಬರ್ 18ರ ತನಕ ಜಾಮೀನು ವಿಸ್ತರಣೆಯಾಗಿದೆ.

English summary
Supari to Kill Sunil Case: Journalist Ravi Belagere's interim conditional bail bengaluru Sessions Court extended to December 18th. The Court granted bail on medical grounds till December 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X