ಸುಪಾರಿ ಕೇಸ್: ರವಿ ಬೆಳಗೆರೆ ಮಧ್ಯಂತರ ಜಾಮೀನು ವಿಸ್ತರಣೆ
ಬೆಂಗಳೂರು, ಡಿಸೆಂಬರ್ 16: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ವಿಸ್ತರಣೆ ಮಾಡಲಾಗಿದೆ.
ಸುಪಾರಿ ಕೇಸ್ : ರವಿಬೆಳಗೆರೆಗೆ ಮಧ್ಯಂತರ ಜಾಮೀನು ಮಂಜೂರು
ಅನಾರೋಗ್ಯ ಹಿನ್ನಲೆಯಲ್ಲಿ ರವಿ ಬೆಳಗೆರೆ ಅವರ ಮಧ್ಯಂತರ ಜಾಮೀನು ಸೋಮವಾರ ಅಂದರೆ ಡಿಸೆಂಬರ್ 18ರ ವರೆಗೆ ವಿಸ್ತರಣೆ ಮಾಡಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಧುಸೂದನ್ ಶನಿವಾರ ಆದೇಶ ಹೊರಡಿಸಿದರು.
ಈ ಮೊದಲು ರವಿ ಬೆಳಗೆರೆ ಅವರಿಗೆ ಡಿಸೆಂಬರ್ 16ರ ವರೆಗೆ ಜಾಮೀನು ಮಂಜೂರು ಮಾಡಲಾಗಿತ್ತು. ಅದು ಇಂದಿಗೆ (ಶನಿವಾರ) ಅಂತ್ಯವಾಗಿದ್ದರಿಂದ ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಮದುಸೂಧನ್ ಅವರು ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದರು.
ಇಬ್ಬರ ಶ್ಯೂರಿಟಿ, 1 ಲಕ್ಷ ರು ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ನ್ಯಾಯಾಧೀಶ ಮದುಸೂಧನ್ ವಿಧಿಸಿದ್ದಾರೆ. ಡಿಸೆಂಬರ್ 18ರ ತನಕ ಜಾಮೀನು ವಿಸ್ತರಣೆಯಾಗಿದೆ.