BMTC: ಬಸ್ಗಳಲ್ಲಿ ಅಪ್ರಾಪ್ತರ ಓಡಾಟ, ಮಾರ್ಗಸೂಚಿ
ಬೆಂಗಳೂರು, ಜನವರಿ 25: ಬೆಂಗಳೂರು ನಗರದ ಜೀವನಾಡಿಯಾದ ಬಿಎಂಟಿಸಿ ಬಸ್ಗಳಲ್ಲಿ ಅಪ್ರಾಪ್ತರ ಓಡಾಟದ ಕುರಿತು ಚರ್ಚೆ ನಡೆಯುತ್ತಿದೆ. ಆದ್ದರಿಂದ ಬಿಎಂಟಿಸಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು (ಆ) ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಆದೇಶ ಬಸ್ಸುಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ/ ಅನುಮಾನಾಸ್ಪದವಾಗಿ ಪ್ರಯಾಣಿಸುವುದನ್ನು ಗಮನಿಸಿ, ಸಂಬಂಧಪಟ್ಟದಲ್ಲಿ ಗಮನಕ್ಕೆ ತರುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಾರ್ವಜನಿಕ ಸೇವಾ ಸಂಸ್ಥೆಯಾಗಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಪ್ರಯಾಣಿರಿಕರಿಗೆ ದಕ್ಷ, ಉತ್ತಮ, ಸುಲಭ ಸಾರಿಗೆ ಸೇವೆಯನ್ನು ಒದಗಿಸುವ ಧ್ಯೇಯದೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದೆ.
ಪ್ರತಿದಿನ 5,575 ಬಸ್ಸುಗಳಿಂದ 57,699 ಸುತ್ತುವಳಿಗಳನ್ನು 11.35 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕ ವಲಯದಲ್ಲಿ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ವಿಶ್ವಾಸನೀಯ ಸೇವೆಯನ್ನು ಒದಗಿಸುವಲ್ಲಿ ಸಂಸ್ಥೆಯು ಮುಂಚೂಣಿಯಲ್ಲಿದ್ದು, ಇದರಲ್ಲಿ ಸಂಸ್ಥೆಯ ಚಾಲನಾ ಸಿಬ್ಬಂದಿಗಳ ಪಾತ್ರ ಅಧಿಕವಾಗಿರುತ್ತದೆ.
ಇತ್ತೀಚಿನ ದಿನಗಳಲ್ಲಿ ಪೋಷಕರ/ ಪಾಲಕರ ಒತ್ತಡದ ಬದುಕು, ವೇಳೆಯ ಅಭಾವ, ಮಕ್ಕಳ ಮೊಂಡುತನ, ಅಪ್ರಬುದ್ಧತೆ ಇತ್ಯಾದಿ ಕಾರಣಗಳಿಂದ ಅಪ್ರಾಪ್ತ ವಯಸ್ಸಿನ ಮಕ್ಕಳು ಪಾಲಕರಿಗೆ ಗೊತ್ತಾಗದಂತೆ ಮನೆಯಿಂದ ಹೊರಗೆ ಹೋಗುತ್ತಿರುವುದರಿಂದ, ಪೋಷಕರು/ ಪಾಲಕರಿಗೆ ಆತಂಕವಾಗುತ್ತಿರುವುದಲ್ಲದೇ ಸಮಾಜದ ಸ್ವಾಸ್ಥ್ಯ ಹಾಳಾಗುವುದಕ್ಕೂ ಪ್ರಮುಖ ಕಾರಣವಾಗುತ್ತಿದೆ.
ಆದ್ದರಿಂದ ಬಸ್ಸುಗಳಲ್ಲಿ ಪಾಲಕರ ರಹಿತ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ ಚಾಲನಾ ಸಿಬ್ಬಂದಿಗಳು ಕೆಳಕಂಡಂತೆ ಕ್ರಮ
ವಹಿಸಲು ಸೂಚಿಸಿದೆ.
ಕೈಗೊಳ್ಳಬೇಕಾದ ಕ್ರಮಗಳು
* ಬಸ್ಸುಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ (ಶಾಲಾ ಸಮಯದಲ್ಲಿ ಸಮವಸ್ತ್ರದಲ್ಲಿರುವ ಮಕ್ಕಳನ್ನು ಹೊರತುಪಡಿಸಿ), ಪ್ರಯಾಣಿಸುತ್ತಿರುವುದನ್ನು ಗಮನಿಸುವುದು.
* ಮಕ್ಕಳ ಹಾವ-ಭಾವದಲ್ಲಿ ಗೊಂದಲಗಳಿದ್ದಲ್ಲಿ, ಅನುಮಾನಾಸ್ಪದವಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ಗುರುತಿಸಿ, ಪಾಲಕರ ಬಗ್ಗೆ ವಿಚಾರಿಸುವುದು.
* ಮಕ್ಕಳು ಗೊಂದಲದ ಉತ್ತರವನ್ನು ನೀಡಿದಲ್ಲಿ, ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡುವುದು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಸದರಿ ಮಕ್ಕಳನ್ನು ಕರೆದೊಯ್ಯುವುದು ಅಥವಾ ಮಕ್ಕಳಿಂದ ಪಾಲಕರ ದೂರವಾಣಿ ಸಂಖ್ಯೆ ಪಡೆದು ಮಾಹಿತಿ ನೀಡುವುದು.
ತಮ್ಮ ವಲಯ/ ಘಟಕ ವ್ಯಾಪ್ತಿಯ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಮೇಲ್ಕಂಡ ಅಂಶಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಕುರಿತು ಎಲ್ಲಾ ವಲಯಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲಾ ವಲಯಗಳ ವಿಭಾಗೀಯ ಸಂಚಾರ ಅಧಿಕಾರಿಗಳು, ಹಿರಿಯ/ ಘಟಕ ವ್ಯವಸ್ಥಾಪಕರು, ಘಟಕ-2 ರಿಂದ 51 ಬೆಂಮಸಾಸಂಸ್ಥೆ, ಬೆಂಗಳೂರು ಇವರಿಗೆ ಆದೇಶದ ಪ್ರತಿ ಕಳಿಸಲಾಗಿದೆ.
-
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications