ಯೆಮನ್ ನಲ್ಲಿ ಸಿಲುಕಿದ ಪೀಣ್ಯ ರವಿಗಾಗಿ ಉದ್ಯಮ ಬಂದ್
ಬೆಂಗಳೂರು, ಏ.3: ಯುದ್ಧಪೀಡಿತ ಯೆಮನ್ ನಲ್ಲಿ ಸಿಲುಕಿರುವ ಬೆಂಗಳೂರಿನ ಪೀಣ್ಯ ಉದ್ಯಮಿ ರವಿಕುಮಾರ್ ಅವರನ್ನು ವಾಪಸ್ ಕರೆ ತರಲು ಸರ್ಕಾರ ವಿಳಂಬ ಮಾಡುತ್ತಿದೆ ಏಕೆ? ಎಂದು ಪ್ರಶ್ನಿಸಿ ಪೀಣ್ಯ ಕೈಗಾರಿಕಾ ಘಟಕ ಸಂಪೂರ್ಣ್ ಬಂದ್ ಆಚರಿಸಿದೆ.
ಸುಮಾರು 8,500ಕ್ಕೂ ಅಧಿಕ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕಾ ಘಟಕಗಳು ಗುರುವಾರ ಸಂಪೂರ್ಣ ಬಂದ್ ಆಚರಿಸಿವೆ. ರವಿ ಅವರ ಸುರಕ್ಷತೆಗಾಗಿ ಆಗ್ರಹಿಸಿ ಮೇಣದ ಬತ್ತಿ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. [ಭಾರತಕ್ಕೆ ಹಿಂದಿರುಗಿದ 349 ಜನ ಸಂತ್ರಸ್ತರು]
ಪೀಣ್ಯದ ಟ್ರಿನಿಟಿ ಎನ್ ಡಿಟಿ ಇಂಜಿನಿಯರ್ಸ್ ಸಂಸ್ಥೆಯ ಸಿಇಒ ರವಿ ಕುಮಾರ್ ಅವರು ಮಾ.12ರಂದು ಯೆಮನ್ ನ ಸನಾ ಸಿಟಿಗೆ ತೆರಳಿದ್ದರು. ಸಂಸ್ಥೆಗೆ ಬೇಕಿದ್ದ ಅಗತ್ಯ ತಾಂತ್ರಿಕ ನೆರವು ಹಾಗೂ ತರಬೇತಿಯನ್ನು ಪಡೆದುಕೊಂಡ ರವಿ ಅವರು ಮಾ.26ಕ್ಕೆ ಬೆಂಗಳೂರಿಗೆ ಹಿಂತಿರುಗಬೇಕಿತ್ತು.
ಅದರೆ, ಷಿಯಾ ಹಾಗೂ ಸುನ್ನಿ ಪಂಗಡದ ಕಾದಾಟದಿಂದ ಯೆಮನ್ ಹೊತ್ತಿ ಉರಿಯ ತೊಡಗಿದ್ದರಿಂದ ಸೂಕ್ತ ನೆರವು ಸಿಗದೆ ರವಿ ಪರದಾಟ ನಡೆಸಬೇಕಾಗಿದೆ. [ಭಾರತೀಯರೇ ಹೆದರದಿರಿ, ಏರ್ ಇಂಡಿಯಾ ಬರ್ತಾ ಇದೆ!]

ರವಿ ಅವರಿಗೆ ಸೂಕ್ತ ನೆರವು ನೀಡಿ ಆದಷ್ಟು ಬೇಗ ಅವರನ್ನು ಬೆಂಗಳೂರಿಗೆ ಕರೆ ತರುವಂತೆ ಆಗ್ರಹಿಸಿ ಪೀಣ್ಯ ಕೈಗಾರಿಕಾ ಅಸೋಸಿಯೇಷನ್ ನ ಅಧ್ಯಕ್ಷ ಡಿಟಿ ವೆಂಕಟೇಶ್ ಅವರು ಕೇಂದ್ರ ಭಾರಿ ಕೈಗಾರಿಕಾ ಖಾತೆ ರಾಜ್ಯ ಸಚಿವ ಜಿಎಂ ಸಿದ್ದೇಶ್ವರ ಅವರಲ್ಲಿ ಮನವಿ ಮಾಡಿದ್ದಾರೆ.
ಸದ್ಯದ ಲೆಕ್ಕಾಚಾರ ಪ್ರಕಾರ ಸುಮಾರು 349 ಭಾರತೀಯ ನಾಗರೀಕರ ಪೈಕಿ 190 ಜನರನ್ನು ಏರ್ ಫೋರ್ಸ್ ಸಿ17 ಏರ್ ಕ್ರಾಫ್ಟ್ ಮೂಲಕ ಜಿಬೌತಿಯಿಂದ ಮುಂಬೈಗೆ ಕರೆ ತರಲಾಗಿದೆ. [ಯಪ್ಪಾ! ಇದು ಯಾವ ರೀತಿ ವಧುದಕ್ಷಿಣೆ]

ಅದರೆ, ಇನ್ನೂ ಸನಾ ನಗರದಲ್ಲೇ ಇರುವ ರವಿ ಅವರು ತಮ್ಮ ಸೋದರ ಶಿವಕುಮಾರ್ ಜೊತೆ ಮಾತನಾಡಿ, ಸನಾ ನಗರದ ಪರಿಸ್ಥಿತಿ ಕ್ಷಣ ಕ್ಷಣ ಬದಲಾಗುತ್ತಿದೆ. ಭಾರತೀಯ ವಿಮಾನ ಹಾರಾಟಕ್ಕೆ ನೀಡಿರುವ ಅವಧಿ ಸಾಲುತ್ತಿಲ್ಲ ಎಂದಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ತಮ್ಮ ರಾಜ್ಯದವರ ಬಗ್ಗೆ ಯಾವುದೇ ಕಾಳಜಿ ತೋರುತ್ತಿಲ್ಲ ಎಂದು ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಹಾಗೂ ಕೈಗಾರಿಕೆ ಫೆಡರೇಷನ್ ನ ಮಾಜಿ ಅಧ್ಯಕ್ಷ ಜೆ ಕ್ರಾಸ್ಟಾ ದೂರಿದ್ದಾರೆ. ಒಟ್ಟಾರೆ, ರವಿ ಅವರ ಆಗಮನಕ್ಕಾಗಿ ಪೀಣ್ಯ ಜನತೆ ಕಾದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications