ಬೆಂಗಳೂರು ಸ್ಫೋಟ : ಮದನಿಗೆ ಸುಪ್ರೀಂ ಜಾಮೀನು

ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ ಸ್ಥಾಪಕ ಅಬ್ದುಲ್ ನಾಸಿರ್ ಮದನಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಒಂದು ವೇಳೆ ಪ್ರಕರಣದ ಸಾಕ್ಷಿಗಳ ಜೊತೆ ಮದನಿ ಮಾತುಕತೆ ನಡೆಸುವುದು ತಿಳಿದುಬಂದರೆ, ತಕ್ಷಣದಿಂದಲೇ ಜಾಮೀನಿ ಅರ್ಜಿ ವಜಾಗೊಳ್ಳುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.
ತಲಾ 1 ಲಕ್ಷ ರೂ.ಗಳ ಎರಡು ಬಾಂಡ್ ಗಳನ್ನು ಒಂದು ತಿಂಗಳ ಜಾಮೀನಿಗಾಗಿ ಮದನಿ ನ್ಯಾಯಾಲಯಕ್ಕೆ ನೀಡಬೇಕಾಗುತ್ತದೆ. ಬೆಂಗಳೂರಿನಲ್ಲಿ ನೆಲೆಸುವ ಮದನಿ ಎಲ್ಲಿರುತ್ತಾರೆ? ಎಂಬ ಬಗ್ಗೆ ವಿಳಾಸವನ್ನು ಕರ್ನಾಟಕದ ಪೊಲೀಸರಿಗೆ ನೀಡುವಂತೆ ಕೋರ್ಟ್ ತನ್ನ ಆದೇಶದಲ್ಲಿ ಸೂಚನೆ ನೀಡಿದೆ. [ಮದನಿ ಮೇಲಿನ ಆರೋಪಗಳೇನು?]
2008ರ ಜುಲೈ 25ರಂದು ಬೆಂಗಳೂರಿನಲ್ಲಿ ಸಂಭವಿಸಿದ ಸರಣಿ ಸ್ಫೋಟದ ರೂವಾರಿಯಾದ ಅಬ್ದುಲ್ ನಾಸಿರ್ ಮದನಿ 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಮದನಿ ಮೇಲೆ ಉಗ್ರ ಚಟುವಟಿಕೆ, ಕೊಲೆ ಯತ್ನ ಮುಂತಾದ ಆರೋಪಗಳಿವೆ. ಅಂಧತ್ವ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಮದನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸುಪ್ರೀಂಕೋರ್ಟ್ ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿತ್ತು. [ಮದನಿ ಯಾರು, ಆತನ ಪ್ರತಾಪಗಳೇನು?]
ಕರ್ನಾಟಕ ಸರ್ಕಾರ 16 ಲಕ್ಷ ರೂ.ಖರ್ಚು ಮಾಡಿ ಬೆಂಗಳೂರಿನ ಮಣಿಪಾಲ್ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಮದನಿಗೆ ಚಿಕಿತ್ಸೆ ಕೊಡಿಸಿತ್ತು. ಜುಲೈ 4ರಂದು ಮದನಿಯನ್ನು ಮಣಿಪಾಲ್ ಆಸ್ಪತ್ರೆಗೆ ತಪಾಸಣೆಗಾಗಿ ಕರೆದುಕೊಂಡು ಹೋಗಬೇಕಾಗಿತ್ತು. ಆದರೆ, ಆಸ್ಪತ್ರೆಗೆ ಬರಲು ಮದನಿ ನಿರಾಕರಿಸುತ್ತಿದ್ದಾನೆ ಎಂದು ಸುಪ್ರೀಂಕೋರ್ಟ್ ಗೆ ಮೂರು ದಿನಗಳ ಹಿಂದೆ ಕರ್ನಾಟಕ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿತ್ತು. [ಬೆಂಗಳೂರು ಸರಣಿ ಸ್ಫೋಟ ಎಲ್ಲಿ, ಯಾವಾಗ?]
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications