ಭೂ ಮಾಫಿಯಾ ಕಪಿಮುಷ್ಟಿಯಿಂದ ಪಾರಾದ ಬೆಳ್ಳಂದೂರು, ಅಗರ ಕೆರೆ
ಬೆಂಗಳೂರು, ಮಾರ್ಚ್ 05: ನಗರದ ಪರಿಸರ ಪ್ರೇಮಿ ನಾಗರೀಕರು ಮತ್ತು ನಮ್ಮ ಬೆಂಗಳೂರು ಫೌಂಡೇಶನ್ ನಡೆಸಿದ ಕಾನೂನು ಹೋರಾಟಕ್ಕೆ ಜಯ ದೊರೆತಿದ್ದು ಬೆಳ್ಳಂದೂರು ಕೆರೆ ಹಾಗೂ ಅಗರ ಕೆರೆ ಕಾರ್ಪೊರೇಟ್ ಒತ್ತುವರಿಯಿಂದ ಪಾರಾಗಿದೆ.
ಕೆರೆ ಒತ್ತುವರಿಗೆ ಸಂಬಂಧಪಟ್ಟಂತೆ ಮಂತ್ರಿ ಟೆಕ್ಜೋನ್ ಮತ್ತು ಕೋರ್ಮೈಂಡ್ ಕಾರ್ಪೊರೇಟ್ ವಿರುದ್ಧ ಬಂದಿದ್ದ ಎನ್ಜಿಟಿ ಆದೇಶದ ವಿರುದ್ಧ ಸುಪ್ರಿಂಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯವು ತಿರಸ್ಕರಿಸಿದ್ದು, ಎನ್ಜಿಟಿಯು 2016ರ ಆದೇಶವನ್ನೇ ಎತ್ತಿಹಿಡಿದಿದೆ.
ಸುಪ್ರಿಂಕೋರ್ಟ್ನ ತೀರ್ಪಿನ ಪ್ರಕಾರ ಮಂತ್ರಿ ಟೆಕ್ಜೋನ್ ಹಾಗೂ ಕೋರ್ಮೈಂಡ್ ಸಾಫ್ಟ್ವೇರ್ ಸಂಸ್ಥೆಗಳು 117.5 ಕೋಟಿ ಹಾಗೂ 13.5 ಕೋಟಿ ಹಣವನ್ನು ದಂಡ ಕಟ್ಟಬೇಕಿದೆ ಹಾಗೂ ಒತ್ತುವರಿ ಮಾಡಿಕೊಂಡಿದ್ದ 3 ಎಕರೆ 10 ಗುಂಟೆ ಜಾಗವನ್ನು ಬಿಟ್ಟುಕೊಡಬೇಕಿದೆ. ಅಷ್ಟಲ್ಲದೆ ರಾಜಕಾಲುವೆಯನ್ನು ಮತ್ತೆ ಕಟ್ಟಿಸಿಕೊಡಬೇಕಿದೆ.

ಸಂಸದ ರಾಜೀವ್ ಚಂದ್ರಶೇಖರ್ ಅವರು ಸಂಸ್ಥಾಪಿಸಿರುವ ನಮ್ಮ ಬೆಂಗಳೂರು ಫೌಂಡೇಶನ್ 2014 ರಿಂದಲೂ ಈ ಪ್ರಕರಣದಲ್ಲಿ ಅರ್ಜಿದಾರರಾಗಿದ್ದು, ಆರಂಭದಿಂದಲೂ ಈ ಬಗ್ಗೆ ಸತತ ಹೋರಾಟವನ್ನು ಮಾಡುತ್ತಲೇ ಬರುತ್ತಿದೆ. ಸಿಟಿಜನ್ ಆಕ್ಷನ್ ಫೋರಂ ಸಹ ನಮ್ಮ ಬೆಂಗಳೂರು ಫೌಂಡೇಶನ್ಗೆ ಸಾಥ್ ನೀಡಿದೆ.
ಬೆಳ್ಳಂದೂರು ಕೆರೆಯ ಸುಮಾರು 100 ಎಕರೆ ಜಾಗ ಒತ್ತುವರಿ ಆಗಿದೆ. ನಗರದ ಹಲವು ಕೆರೆಗಳಿಗೆ ಇದೇ ಸ್ಥಿತಿ ಬಂದಿದೆ. ಆದರೆ ಇಂದಿನ ತೀರ್ಪಿನಿಂದ ನಮ್ಮ ಹೋರಾಟಕ್ಕೆ ಜಯ ದೊರೆತಿದೆ ಎಂದು ನಮ್ಮ ಬೆಂಗಳೂರು ಫೌಂಡೇಶನ್ನ ನಿರ್ದೇಶಕರಾದ ಸುರೇಶ್ ಎನ್.ಆರ್. ಅವರು ಹೇಳಿದ್ದಾರೆ.
ಬೆಳ್ಳಂದೂರು ಕೆರೆ ಮತ್ತು ಅಗರ ಕೆರೆ ಒತ್ತುವರಿ ವಿರುದ್ಧ ಹೋರಾಟದಲ್ಲಿ ನಮ್ಮ ಬೆಂಗಳೂರು ಫೌಂಡೇಶನ್ ಮುಂಚಿನಿಂದಲೂ ನೇತೃತ್ವವಹಿಸಿ ಮುನ್ನಡೆಸಿಕೊಂಡು ಬಂದಿದೆ. ಒತ್ತುವರಿ ವಿರುದ್ಧ ಸಾರ್ವಜನಿಕ ಆಕ್ರೋಶ ಹುಟ್ಟುಹಾಕಿ ಹೋರಾಟ ಸಂಘಟಿಸುವ ಜೊತೆಗೆ, ಕಾನೂನು ಹೋರಾಟವನ್ನೂ ಮಾಡಿದೆ ಎಂದು ಅವರು ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications