ಮುಖ್ಯಮಂತ್ರಿ ಮನೆ ಬಾಗಿಲು ಹುಡುಕಿಕೊಂಡು ಬಂದ 'ಲಕ್ಷ್ಮಿ'
ಬೆಂಗಳೂರು, ನವೆಂಬರ್.13: ರಾಜಕಾರಣದಲ್ಲಿ ಯಾರೂ ಮಿತ್ರರೂ ಅಲ್ಲ. ಯಾರು ಶತ್ರುಗಳೂ ಅಲ್ಲ. ಕರ್ನಾಟಕ ರಾಜಕೀಯದ ವಿಷಯದಲ್ಲಂತೂ ಈ ಮಾತು ಹೇಳಿ ಮಾಡಿಸಿದಂತಿದೆ. ಇಲ್ಲಿ ಯಾರು ಯಾವಾಗ ಯಾವ ಪಕ್ಷದಲ್ಲಿ ಇರುತ್ತಾರೋ, ಯಾರು ಯಾವ ಯಾವ ಪಕ್ಷಕ್ಕೆ ಹಾರುತ್ತಾರೋ ಅನ್ನೋದೇ ಗೊತ್ತಾಗಲ್ಲ.
ಬುಧವಾರ ಬೆಂಗಳೂರಿನಲ್ಲಿ ಇಬ್ಬರು ನಾಯಕರ ನಡುವಿನ ಭೇಟಿ ಸದ್ಯದ ರಾಜಕೀಯ ಬೆಳವಣಿಗೆಯಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದೆ. ಅದರಲ್ಲೂ ಕಾಂಗ್ರೆಸ್ ನ ಈ ನಾಯಕಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ.
ಹೌದು, 17 ಅನರ್ಹ ಶಾಸಕರ ಪೈಕಿ 15 ಶಾಸಕರ ಭವಿಷ್ಯವನ್ನು ಸುಪ್ರೀಂಕೋರ್ಟ್ ಹೊರ ಹಾಕಿದೆ. 15 ಮಂದಿ ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕೋರ್ಟ್ ಅವಕಾಶ ನೀಡಿದೆ. ಈ ತೀರ್ಪು ಹೊರ ಬೀಳುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ವಿಸಿಟ್ ಕೊಟ್ಟಿದ್ದಾರೆ.

ಯಡಿಯೂರಪ್ಪ ಮನೆ ಬಾಗಿಲಿಗೆ 'ಲಕ್ಷ್ಮಿ':
ಸುಪ್ರೀಂಕೋರ್ಟ್ ಅನರ್ಹರ ಕುರಿತು ತೀರ್ಪು ಹೊರಡಿಸಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಇದರ ಮಧ್ಯೆ ಬೆಂಗಳೂರಿನ ಮುಖ್ಯಮಂತ್ರಿ ನಿವಾಸ ಧವಳಗಿರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಬೆಳಗಾವಿಯ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಪೈಕಿ ರಮೇಶ್ ಜಾರಕಿಹೊಳಿ ತವರು ಕ್ಷೇತ್ರ ಗೋಕಾಕ್ ಮೇಲೆ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣು ಇಟ್ಟಿದ್ದಾರೆ.
ಬೆಳಗಾವಿ ರಾಜಕಾರಣದಲ್ಲಿ ವೈರಿ ಎಂತಲೇ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಬಿಂಬಿತವಾಗಿದ್ದಾರೆ. ಗೋಕಾಕ್ ಅಖಾಡಕ್ಕೆ ಕಾಂಗ್ರೆಸ್ ನಿಂದ ತಮ್ಮ ಅಭ್ಯರ್ಥಿ ಅಶೋಕ್ ಪೂಜಾರಿಯನ್ನು ಕಣಕ್ಕಿಳಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಎಲ್ಲಿಲ್ಲದ ಕಸರತ್ತು ನಡೆಸಿದ್ದಾರೆ. ಬಿಜೆಪಿಯಿಂದ ಇನ್ನೇನು ರಮೇಶ್ ಜಾರಕಿಹೊಳಿಗೆ ಟಿಕೆಟ್ ಪಕ್ಕಾ ಅಂತಲೇ ಹೇಳಲಾಗುತ್ತಿದೆ.

ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಲ್ಲಿ ಅನರ್ಹ ಶಾಸಕರಿಗೆ ಟಿಕಿಟ್ ನೀಡುವ ಬಗ್ಗೆ ಚರ್ಚೆ ನಡೆಯಲಿದೆ. ಆ ನಂತರವಷ್ಟೇ ಬಿಜೆಪಿಯ ಮುಂದಿನ ನಡೆಯ ಬಗ್ಗೆ ತಿಳಿಸುವುದಾಗಿ ಮುಖ್ಯಮಂತ್ರಿ ಬಿಎಸ್ ವೈ ತಿಳಿಸಿದ್ದಾರೆ. ಇದರ ನಡುವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.
ಇಷ್ಟೆಲ್ಲಾ ಆದರೂ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಚರ್ಚೆ ಬಗ್ಗೆ ಯಾವುದೇ ರೀತಿ ಸುಳಿವು ಬಿಟ್ಟು ಕೊಡಲಿಲ್ಲ. ಸಿಎಂ ನಿವಾಸದಿಂದ ಹೊರ ಬಂದ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications