ಬೆಂಗಳೂರು ಸವಾರರೇ ಎಚ್ಚರ: 3 ಬೈಕ್ಗೆ ಗುದ್ದಿದ ಕಾರು: ಅಪಘಾತದ ವಿಡಿಯೋ ಸೆರೆ
ಬೆಂಗಳೂರು, ನವೆಂಬರ್ 13: ನಗರದಲ್ಲಿ ಭಾನುವಾರ ಎಸ್ಯುವಿ ಕಾರೊಂದು ರಸ್ತೆಯಲ್ಲಿ ಹೊರಟಿದ್ದ ಮೂರು ದ್ವಿಚಕ್ರ ವಾಹನಗಳಿಗೆ ಏಕಕಾಲಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಸಂಜೆ ಬೆಂಗಳೂರಿನ ಹುಲಿಮಾವು ಪ್ರದೇಶದಲ್ಲಿ ಮುಖ್ಯರಸ್ತೆಯೊಂದರಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಹಿಂದಿನ ಕಾರಿನ ಡ್ಯಾಶ್ ಬೋರ್ಡ್ನಲ್ಲಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿರುವ ಸೆರೆಯಾದ ಮಾಹಿತಿ ಪ್ರಕಾರ, ರಸ್ತೆಯಲ್ಲಿ ಹಂಪ್ ಇದ್ದ ಕಾರಣ ಎರಡು ಬದಿಯ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದವು. ಇದೇ ಎಡ ಬದಿಯಲ್ಲಿ ನಿಧಾನವಾಗಿ ಮೂರು ಬೈಕ್ ಮತ್ತು ಕಾರುಗಳು ಸಾಗುತ್ತಿದ್ದವು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಬಿಳಿ ಬಣ್ಣದ ಎಸ್ಯುವಿ ಕಾರೊಂದು ಮುಂದಿನ ಮೂರು ಬೈಕ್ ಗಳಿಗೆ ಗುದ್ದಿ ಸ್ವಲ್ಪ ದೂರ ಹೋಗಿ ನಿಂತಿದೆ.
#Horrible #Accident in #Bengaluru:
— Rakesh Prakash (@rakeshprakash1) November 13, 2023
At least 6 persons were #injured after a car #crashed into them from behind at Kalena Agrahara on #Bannerghatta Road on Sunday. #Video (forwarded)👇@NammaBengaluroo @WFRising @0RRCA @TOIBengaluru @NammaKarnataka_ @peakbengaluru pic.twitter.com/IFcCGaXt5d
ಹಿಂಬದಿ ಕಾರಿನ ಕ್ಯಾಮೆರಾದಲ್ಲಿ ವಿಡಿಯೋ ಸೆರೆ
ಈ ಭಯಾನಕ ಘಟನೆ ಡ್ಯಾಶ್ ಬೋಡ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಜನ ನಿಬೀಡ ಪ್ರದೇಶದಲ್ಲಿ ಅತೀ ವೇಗವಾಗಿದ್ದ ಕಾರು ಚಾಲಕನ ಅಜಾಗೂಕತೆಯಿಂದ ಈ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತದೆ.
ಕಾರು ಬೈಕುಗಳಿಗೆ ಗುದ್ದಿದ ರಭಸಕ್ಕೆ ಸವಾರರು ಇಬ್ಬರು ಗಾಳಿ ತೋರಿ ರಸ್ತೆ ಮಧ್ಯೆ ಬಿದ್ದಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಕಾರು ಡಿಕ್ಕಿ ಹೊಡೆದ ಮೇಲೆ ನಿಯಂತ್ರಣ ಮಾಡಲಾಗದೇ ಪಾದಾಚರಿ ಮಾರ್ಗದಲ್ಲಿ ಉರಳಿ ಬಿದ್ದರು. ಈ ರಸ್ತೆ ಅಪಘಾತದಿಂದ ಸದರಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸದ್ಯ ಗಾಯಾಳು ವಾಹನ ಸವಾರರನ್ನು ಹತ್ತಿತರ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯ ಬಳಿಕ ಸ್ಥಳದಿಂದ ಪರಾರಿಯಾಗಿರುವ ಕಾರು ಚಾಲಕನನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications