ಗಿರಿನಗರದಲ್ಲಿ ಪುಟಾಣಿಗಳಿಗಾಗಿ ಸ್ವಚ್ಛ ಬಾಲ ಅಭಿಯಾನ
ಬೆಂಗಳೂರು, ಫೆ. 6 : ದೇಶದಾದ್ಯಂತ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನದ ಭಾಗವಾಗಿ ಪರಿಸರ ಸ್ವಚ್ಛತೆಯೊಂದಿಗೆ ತಮ್ಮ ಶರೀರವನ್ನೂ ಸ್ವಚ್ಛವಾಗಿಡಬೇಕಾದ ಅಗತ್ಯವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಸ್ವಚ್ಛ ಬಾಲ ಅಭಿಯಾನ ಶುಕ್ರವಾರ ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿತ್ತು.
ಪ್ಯೂರ್ ಕಿಂಡರ್ಲೈಫ್ ತಂಡದ ವತಿಯಿಂದ ಬೆಂಗಳೂರಿನ ಗಿರಿನಗರದ ಮಾರ್ಟಿನ್ ಲೂಥರ್ ಪಬ್ಲಿಕ್ ಸ್ಕೂಲ್ನಲ್ಲಿ ಈ ಅಭಿಯಾನವನ್ನು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿತ್ತು. ಪುಟಾಣಿ ಮಕ್ಕಳು ಕೂಡ ಅಷ್ಟೇ ಉತ್ಸಾಹದಿಂದ ಈ ಅಭಿಯಾನದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಕಳೆ ತಂದರು. [ಅಂತೂ ಇಂತೂ ಸ್ವಚ್ಛವಾಯಿತು ವಿಕ್ಟೋರಿಯಾ ಆಸ್ಪತ್ರೆ]

ಶಾಲೆ, ಮನೆ, ಉದ್ಯಾನ, ಆಟದ ಮೈದಾನ ಸಹಿತ ನಾವು ಓಡಾಡುವ ಎಲ್ಲ ಕಡೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು, ಜತೆಗೆ ನಮ್ಮ ದೇಹ, ಶರೀರವನ್ನೂ ಕೊಳೆಯಿಂದ ಮುಕ್ತವಾಗಿ ಇಡಬೇಕು. ಮೈಮೇಲಿನ ಕೊಳೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಎಂಬ ಸಂದೇಶ ಸಾರುವುದಕ್ಕಾಗಿ ಈ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಿಂಡರ್ ಲೈಫ್ ತಂಡದ ಮುಖ್ಯಸ್ಥ ಅರುಣ್ ಅಭಿಪ್ರಾಯಪಟ್ಟರು.
ಶಿಕ್ಷಣ ತಜ್ಞ ಡಾ.ಸುನಿಲ್ಕುಮಾರ್ ಮಾತನಾಡಿ, ಮಕ್ಕಳು ವಾಸಿಸುವ ಪರಿಸರ ಅತ್ಯಂತ ಶುಚಿಯಾಗಿರಬೇಕು. ಮನೆಯಿಂದಲೇ ಸ್ವಚ್ಛತೆಯ ಮನೋಭಾವ ಬೆಳೆಯಬೇಕು. ಜತೆಗೆ ಶಾಲೆಯಲ್ಲೂ ಇಂತಹ ಪರಿಕಲ್ಪನೆ ಮಕ್ಕಳಲ್ಲಿ ಬೆಳೆದಾಗ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗುತ್ತದೆ ಎಂಬ ಕಾರಣಕ್ಕೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಮಾರಂಭದಲ್ಲಿ ನಟಿ, ರೂಪದರ್ಶಿ ಕುಮಾರಿ ಮಯೂರಿ ಶಾ, ಬಯೋನೋವಾ ವ್ಯವಸ್ಥಾಪಕ ನಿರ್ದೇಶಕರಾದ ಸುಧೀರ್ ಜೈನ್, ಪ್ರಾಂಶುಪಾಲರಾದ ಸುಧಾ ಪ್ರಸನ್ನ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರ ನೀಡಲಾಯಿತು.
More From
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ












Click it and Unblock the Notifications