ಸ್ವಚ್ಛಭಾರತ್ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರಸಚಿವ ಡಿವಿಎಸ್
ಬೆಂಗಳೂರು, ಅಕ್ಟೋಬರ್ 2: ಗಾಂಧಿಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಬೆಳಗ್ಗೆ 10.30ಕ್ಕೆ ಸರ್ಕಲ್ ಮಾರಮ್ಮ ದೇವಾಲಯದ ಸರ್ಕಲ್ ನಲ್ಲಿ ಕೇಂದ್ರಸಚಿವ ಡಿ.ವಿ.ಸದಾನಂದ ಗೌಡ ಸ್ವಚ್ಛ ಭಾರತ್ ಅಭಿಯಾನದ ಲಾಂಛನ ಬಿಡುಗಡೆ ಮಾಡುವರು.
ಆ ನಂತರ 10.45ಕ್ಕೆ ದಿವಾನರ ಪಾಳ್ಯದಲ್ಲಿರುವ ಚಂದ್ರೋದಯ ಕನ್ನಡ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಗಾಂಧಿ ಜಯಂತಿ ಕಾರ್ಯಕ್ರಮದ ನಂತರ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ.

ಸ್ವಚ್ಛ ಭಾರತ ಅಭಿಯಾನದ ಲಾಂಛನವನ್ನು ರೂಪಿಸಿದವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡ ವಿವಿಧ ಶಾಲೆಗಳನ್ನು ಗೌರವಿಸಲಾಗುವುದು. ವಿವಿಧ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.












Click it and Unblock the Notifications