ಡಿವಿಡೆಂಟನ್ನು ಬ್ಯಾಂಕಿಗೆ ಹಿಂತಿರುಗಿಸಿ, ವಿದ್ಯಾರ್ಥಿಗಳಿಗೆ ನೆರವಾದರು
ಬೆಂಗಳೂರು, ಜುಲೈ 15 2018: ರಾಜ್ಯದ ಸಹಕಾರ ಬ್ಯಾಂಕುಗಳಲ್ಲಿ ವರ್ಷದಿಂದ ವರ್ಷಕ್ಕೆ ಆರ್ಥಿಕ ಪ್ರಗತಿ ಕಾಣುತ್ತಾ ಬಂದಿರುವ ಸ್ವರ್ಣ ಭಾರತಿ ಸಹಕಾರ ಬ್ಯಾಂಕ್ ವತಿಯಿಂದ ಈ ಬಾರಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಪಿ ಎಲ್ ವೆಂಕಟರಾಮ ರೆಡ್ಡಿ ಮಾತನಾಡಿ, ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಹೊಸದನ್ನು ಸಾಧಿಸುವ ಉತ್ಸಾಹವನ್ನು ಹೆಚ್ಚಿಸುತ್ತವೆ ಎಂದರು. ಸ್ವರ್ಣ ಭಾರತಿ ಬ್ಯಾಂಕ್ನ ವತಿಯಿಂದ ಪ್ರತಿವರ್ಷ ಪ್ರತಿಭಾ ಪುರಸ್ಕಾರ ಮಾಡುತ್ತಾ ಬಂದಿದ್ದೇವೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪಾರಿತೋಷಕಗಳನ್ನು ನೀಡಲಾಗುತ್ತಿದೆ ಎಂದರು.

ಏಕಾಗ್ರತೆಯಿಂದ ಗುರಿಯನ್ನು ಮುಟ್ಟಲು ಸಾಧ್ಯ. ಅದೇ ರೀತಿ ವಿದ್ಯಾರ್ಥಿಗಳು ಅಂಕಗಳನ್ನು ಪಡೆಯುವ ಜೊತೆಯಲ್ಲಿಯೇ ಜೀವನದ ಸಾಮಾನ್ಯ ಜ್ಞಾನವನ್ನು ಪಡೆದುಕೊಳ್ಳುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಸಾಮಾನ್ಯವಾಗಿ ಬ್ಯಾಂಕ್ ಷೇರುಗಳಿಂದ ಪಡೆದ ಡಿವಿಡೆಂಟನ್ನು ಚಾಚೂ ತಪ್ಪದೆ ಸ್ವೀಕರಿಸುವ ಗ್ರಾಹಕರನ್ನು ನೋಡಿದ್ದೇವೆ. ಆದರೆ, ಸ್ವರ್ಣಭಾರತಿ ಬ್ಯಾಂಕಿನ ಸದಸ್ಯರು ತಮ್ಮ ಡಿವಿಡೆಂಟನ್ನು ಸುಮಾರು 25 ಲಕ್ಷರೂಪಾಯಿಗಳಷ್ಟು ಬ್ಯಾಂಕಿಗೆ ವಾಪಾಸ್ ನೀಡಿದ್ದಾರೆ. ಅಲ್ಲದೆ, ಬ್ಯಾಂಕು ಸ್ವಂತ ಕಟ್ಟಡ ಹೊಂದಲು ಸಹಕಾರ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಪಿ ಎಲ್ ವೆಂಕಟರಾಮ ರೆಡ್ಡಿ ಹೇಳಿದರು.

ಕಾರ್ಯಕ್ರಮದಲ್ಲಿ ಸ್ವರ್ಣ ಭಾರತಿ ಬ್ಯಾಂಕಿನ ನಿರ್ದೇಶಕರುಗಳಾದ ಟಿ ಎನ್ ಚೌಡಪ್ಪ, ಎಂ ತಿಬ್ಬೇಗೌಡ, ಕೆ ನರಸಿಂಹಮೂರ್ತಿ, ಡಿ ಸತೀಶ್ ಬಾಬು, ಜೆ.ಪಿ. ಎಸ್ ಗೌಡ, ಡಾ. ಡಿ.ಬಿ ಬಸವೇಗೌಡ, ಆರ್ ಹರೀಶ್, ಬಿ.ಎಸ್ ಕೀರ್ತಿಕುಮಾರ್, ಡಾ. ಲತಾ ನಾರಾಯಣ್, ಎನ್ ನಾಗರಾಜ್, ಕೆ ನಾರಾಯಣಸ್ವಾಮಿ, ಬಿ. ನಾಗರಾಜ್, ಶ್ರೀಮತಿ ಲಕ್ಷ್ಮೀ ರೆಡ್ಡಿ, ಶ್ರೀ. ಜಿ.ಎಂ ರವೀಂದ್ರ, ಎಸ್ ನಾಗರಾಜಯ್ಯ, ಡಿ.ವಿಶ್ವನಾಥ್, ಸಿ ವೆಂಕಟೇಶ್, ಎಸ್ ಸದಾನಂದ, ಕು. ಸುಷ್ಮಾ ವಿ ಎಸ್ ಹಾಗೂ ಸದಸ್ಯರು ಭಾಗವಹಿಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications