ಬೆಂಗಳೂರಿನ ಹೊರ ವರ್ತುಲ ರಸ್ತೆಯಿಂದ ಸ್ಥಳಾಂತರಗೊಂಡ ಸ್ವಿಗ್ಗಿ ಕೇಂದ್ರ ಕಚೇರಿ!
ಬೆಂಗಳೂರಿನಲ್ಲಿ ಕೆಲವು ಕಂಪನಿಗಳು ಬೆಂಗಳೂರಿನ ಹೊರ ವರ್ತುಲ ರಸ್ತೆಯಿಂದ ತಮ್ಮ ಕಂಪನಿಗಳನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸುತ್ತಿವೆ. ಮುಖ್ಯವಾಗಿ ಕೆಲವೊಂದು ಪ್ರತಿಷ್ಠಿತ ಹಾಗೂ ದೊಡ್ಡ ಕಂಪನಿಗಳು ಬೆಂಗಳೂರಿನ ಈ ಪ್ರದೇಶದಿಂದ ಹೊರಕ್ಕೆ ಹೋಗುತ್ತಿವೆ. ಬೆಂಗಳೂರಿನ ಈ ಭಾಗದಲ್ಲಿ ಮೂಲಸೌಕರ್ಯ ಕೊರತೆ ಹಾಗೂ ರಸ್ತೆಗುಂಡಿಗಳ ಸಮಸ್ಯೆ ಇದಕ್ಕೆ ಮುಖ್ಯ ಕಾರಣವಾಗಿದೆ. ಇದೀಗ ಪ್ರತಿಷ್ಠಿತ ಸ್ವಿಗ್ಗಿ (Swiggy) ತನ್ನ ಕೇಂದ್ರ ಕಚೇರಿಯನ್ನು ಈ ಸ್ಥಳದಿಂದ ಬದಲಾಯಿಸಿದೆ.
ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆಯಿಂದ ಕಂಪನಿಗಳು ಹೊರಕ್ಕೆ ಹೋಗಲಿವೆ ಎನ್ನುವ ವಿಚಾರವು ಗಂಭೀರ ಚರ್ಚೆಗೆ ಕಾರಣವಾಗಿತ್ತು. ಇದಾದ ನಂತರ ಬೆಂಗಳೂರಿನ ಹೊರ ವರ್ತುಲ ರಸ್ತೆ ಭಾಗದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ರಸ್ತೆ ಅಭಿವೃದ್ಧಿ ಸೇರಿದಂತೆ ಟ್ರಾಫಿಕ್ ಜಾಮ್ಗೂ ಬ್ರೇಕ್ ಹಾಕುವುದಾಗಿ ಹೇಳಲಾಗಿತ್ತು. ಅಲ್ಲದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಹ ಈ ಭಾಗದಲ್ಲಿ ತುರ್ತು ಕಾಮಗಾರಿಗಳನ್ನು ತೆಗೆದುಕೊಳ್ಳುವುದಾಗಿ ಹೇಳಿತ್ತು. ಇದ ಹೊರತಾಗಿಯೂ ಈ ಭಾಗದಲ್ಲಿ ಮಹತ್ವದ ಬದಲಾವಣೆಗಳು ಆಗಿಲ್ಲ ಎನ್ನಲಾಗಿದೆ.

ಸಮಾಧಾನಕರ ಸಂಗತಿ ಎಂದರೆ ಇದೀಗ ಸ್ವಿಗ್ಗಿ ತನ್ನ ಪ್ರಧಾನ ಕಚೇರಿಯನ್ನು ಹೊರ ವರ್ತುಲ ರಸ್ತೆಯ (ORR) ಬೆಳ್ಳಂದೂರಿನಿಂದ ಸ್ಥಳಾಂತರವಾಗುತ್ತಿದೆಯಾದರೂ ಬೆಂಗಳೂರು ಬಿಟ್ಟು ಹೋಗುತ್ತಿಲ್ಲ. ಬೆಂಗಳೂರಿನ ವೈಟ್ಫೀಲ್ಡ್ಗೆ ತನ್ನ ಕೇಂದ್ರ ಕಚೇರಿಯನ್ನು ಸ್ಥಳಾಂತರಿಸಲು ಮುಂದಾಗಿದೆ. ಸಂಚಾರ ದಟ್ಟಣೆಯಿಂದ ಈ ಪ್ರದೇಶ ಕೂಡಿರುವುದು, ಉತ್ತಮ ಮೂಲಸೌಕರ್ಯ ಕೊರತೆ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತಹ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವುದಕ್ಕೆ ಪ್ರಮುಖ ಕಂಪನಿಗಳು ನಿರ್ಧರಿಸಿವೆ.
ಮನಿ ಕಂಟ್ರೋಲ್ ವರದಿಯ ಪ್ರಕಾರ, ಸ್ವಿಗ್ಗಿ ಶೀಘ್ರದಲ್ಲೇ ತನ್ನ ಎಲ್ಲಾ ಕಾರ್ಪೊರೇಟ್ ಪ್ರಧಾನ ಕಚೇರಿಗಳನ್ನು ಎಂಬಸಿ ಟೆಕ್ ವಿಲೇಜ್ನಿಂದ ವೈಟ್ಫೀಲ್ಡ್ನಲ್ಲಿರುವ ಸುಮಧುರ ಕ್ಯಾಪಿಟಲ್ ಟವರ್ಸ್ಗೆ ಸ್ಥಳಾಂತರಿಸಲಿದೆ. ಈ ಸೌಲಭ್ಯವು ಸುಮಾರು 2,000 ಸಿಬ್ಬಂದಿಗೆ ವಸತಿ ಸೌಲಭ್ಯವನ್ನು ಒದಗಿಸಲಿದೆ ಎಂದು ಹೇಳಲಾಗಿದೆ.
ಮೆಟ್ರೋ (ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ)ಗೆ ಹತ್ತಿರದಲ್ಲಿರುವುದರಿಂದ ಹೊಸ ಕಚೇರಿ ಉತ್ತಮ ಸಂಪರ್ಕವನ್ನು ಹೊಂದಿದೆ ಎಂದು ಸ್ವಿಗ್ಗಿ ಉದ್ಯೋಗಿಗಳಿಗೆ ತಿಳಿಸಲಾಗಿದೆ. ಅಲ್ಲದೇ ವಸತಿ ಪ್ರದೇಶ ಹಾಗೂ ವೆಚ್ಚವು ORR ಮತ್ತು ಬೆಳ್ಳಂದೂರಿಗಿಂತ ಕಡಿಮೆ ಬೆಲೆಯಲ್ಲಿ ಈ ಭಾಗದಲ್ಲಿ ಸಿಗಲಿದೆ ಎಂದು ಹೇಳಲಾಗಿದೆ. ಸ್ವಿಗ್ಗಿಯ ಹೊಸ ಕಚೇರಿಯು ಎರಡು ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಲಿದೆ. ಕಾಡುಗೋಡಿ ಟ್ರೀ ಪಾರ್ಕ್ ನಿಲ್ದಾಣ ಮತ್ತು ಹೋಪ್ಫಾರ್ಮ್ ಚನ್ನಸಂದ್ರ ಮೆಟ್ರೋ ನಿಲ್ದಾಣ ಸಮೀಪವಾಗಲಿದೆ ಎಂದು ಹೇಳಲಾಗಿದೆ.
ಇನ್ನಷ್ಟು ಕಂಪನಿಗಳು ಸ್ಥಳಾಂತರಗೊಳ್ಳುವ ಸಾಧ್ಯತೆ: ಇನ್ನು ಬೆಂಗಳೂರಿನ ಹೊರ ವರ್ತುಲ ರಸ್ತೆಯಿಂದ ಇನ್ನಷ್ಟು ಕಂಪನಿಗಳು ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಈ ಭಾಗದಲ್ಲಿ ಮೂಲಸೌಕರ್ಯ ಕೊರತೆ, ಭೂಮಿ ಬೆಲೆ ಹೆಚ್ಚಳ, ರಸ್ತೆಗುಂಡಿ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಗೆ ಕಂಪನಿಗಳು ಈ ಭಾಗದಿಂದ ಸ್ಥಳಾಂತರಗೊಳ್ಳುತ್ತಿವೆ ಎಂದು ಹೇಳಲಾಗಿದೆ.
-
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ












Click it and Unblock the Notifications