ಕರ್ನಾಟಕದಲ್ಲಿ ಈ ವಿಷಯಗಳ ಮೇಲೆ ಕೆಲಸ ಮಾಡಲು ಮುಂದೆ ಬಂದ ಸ್ವಿಟ್ಜರ್ಲೆಂಡ್ ಕಂಪನಿಗಳು
ಬೆಂಗಳೂರು, ಜುಲೈ 25: ಕರ್ನಾಟಕ ರಾಜ್ಯದಲ್ಲಿ ವಿಜ್ಞಾನ ಮತ್ತು ಸಂಶೋಧನೆ ಹಾಗೂ ನಾವೀನ್ಯತೆ ವಿಷಯದಲ್ಲಿ ಜೊತೆಯಾಗಿ ಕೆಲಸ ಮಾಡಲು ಸ್ವಿಟ್ಜರ್ಲೆಂಡ್ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿದೆ. ಇದರಿಂದ ಭವಿಷ್ಯದಲ್ಲಿ ಉತ್ತಮ ಯೋಜನೆಗಳು ಸಾಕಾರಗೊಳ್ಳಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳೀದರು.
ಈ ಕುರಿತು ಸೋಮವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸ್ವಿಟ್ಜರ್ಲೆಂಡ್ ಕಾನ್ಸುಲ್ ಜನರಲ್ ಜೋನಾಸ್ ಬ್ರನ್ಶ್ವಿಗ್ ಅವರು ಎಂ ಬಿ ಪಾಟೀಲ್ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದರು.

ಈ ವೇಳೆ ಮಾತನಾಡಿದ ಬ್ರನ್ಶ್ವಿಗ್ ಅವರು, ಸ್ವಿಟ್ಜರ್ಲೆಂಡ್ ಮತ್ತು ಕರ್ನಾಟಕದ ನಡುವೆ ಇರುವ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಇಂಡೋ-ಸ್ವಿಸ್ ಇನ್ನೋವೇಶನ್ ಪ್ಲಾಟ್ಫಾರಂ ಎನ್ನುವ ಸಾಂಸ್ಥಿಕ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ. ಅದಕ್ಕೆ ಬೆಂಗಳೂರಿನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಬಯಲಾಜಿಕಲ್ ಸೈನ್ಸಸ್(ಎನ್ಸಿಬಿಎಸ್)ನಲ್ಲಿ ಮೂರು ದಿನಗಳ ಸಮಾವೇಶ ನಡೆಸುವ ಮೂಲಕ ಈ ವೇದಿಕೆಗೆ ಚಾಲನೆ ನೀಡಲಾಗುವುದು. ಇದರಲ್ಲಿ ಭಾರತ ಮತ್ತು ಸ್ವಿಸ್ಗಳ ತಲಾ 25 ಪರಿಣತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈಗಾಗಲೇ 49 ಕಂಪನಿಗಳು ಸಕ್ರಿಯ
ಕರ್ನಾಟಕದಲ್ಲಿ ಸ್ವಿಟ್ಜರ್ಲೆಂಡ್ನ 49 ಕಂಪನಿಗಳು ಸಕ್ರಿಯವಾಗಿದ್ದು, 17,800 ಉದ್ಯೋಗಾವಕಾಶ ಸೃಷ್ಟಿಯಾಗಿವೆ. ಇದರ ಪೈಕಿ ಸರಿಸುಮಾರು 40 ಕಂಪನಿಗಳು ರಾಜ್ಯದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿವೆ. ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ಸಮಾವೇಶದಲ್ಲಿ ಆಂಟಿಮೈಕ್ರೋಬಯಲ್ ರೆಸಿಸ್ಟೆನ್ಸ್ (AMR) ಕುರಿತು ಹೆಚ್ಚಿನ ಗಮನ ಹರಿಸುವುದು ಮುಖ್ಯ ಉದ್ದೇಶವಾಗಿದೆ. ಇದು ಅಂತಿಮವಾಗಿ ಶಿಕ್ಷಣ ಕ್ಷೇತ್ರ ಮತ್ತು ಉದ್ಯಮದ ನಡುವಿನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಲು ನೆರವಾಗಲಿದೆ ಎಂದು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ಹಲವು ಸ್ವಿಸ್ ಉದ್ದಿಮೆಗಳಿವೆ. ಒಟ್ಟಾರೆಯಾಗಿ ತಮ್ಮ ದೇಶದ ಕಂಪನಿಗಳು ಭಾರತದಲ್ಲಿ ಹೂಡುತ್ತಿರುವ ಬಂಡವಾಳ ಪ್ರಮಾಣವು 2015ರಿಂದ 2022ರ ನಡುವೆ ಶೇಕಡ 53ರಷ್ಟು ಏರಿಕೆ ಕಂಡಿದೆ. ಹಾಗೆಯೇ ಭಾರತದ ಕಂಪನಿಗಳು ಸ್ವಿಸ್ನಲ್ಲಿ ಹೂಡುತ್ತಿರುವ ಬಂಡವಾಳದಲ್ಲೂ ಕಳೆದ ಏಳು ವರ್ಷಗಳಲ್ಲಿ ಶೇಕಡ 9ರಷ್ಟು ಬೆಳವಣಿಗೆ ಕಂಡು ಬಂದಿದೆ ಎಂದು ಅವರು ವಿವರಿಸಿದರು.
ಸಚಿವರು ಹೇಳಿದ್ದೇನು?
ಮಾಹಿತಿ ಪಡೆದು ಬಳಿಕ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, ಭಾರತ ಒಂದು ಬೃಹತ್ ರಾಷ್ಟ್ರ, ಇಲ್ಲಿ ರಚನಾತ್ಮಕ ಪರಿವರ್ತನೆಗಳು ಕಾಣಿಸುತ್ತಿವೆ. ಬೆಂಗಳೂರಿನಲ್ಲಿ ಭಾರತೀಯ ವಿಜ್ಞಾನ ಮಂದಿರದಂತಹ ಹತ್ತಾರು ಅತ್ಯುತ್ತಮ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿವೆ. ಸ್ವಿಸ್ ಕಂಪನಿಗಳು ಇವುಗಳ ಜತೆಗೂಡಿ ಅಧ್ಯಯನ ಮತ್ತು ಸಹಭಾಗಿತ್ವ ನಡೆಸಬೇಕು. ಇದಕ್ಕೆ ಸರ್ಕಾರ ಮುಕ್ತ ಅವಕಾಶ ನೀಡಲಿದೆ ಎಂದರು.
ಡಿಕಾರ್ಬನೈಸೇಷನ್, ಪರಿಸರಸ್ನೇಹಿ ಇಂಧನ ಇವೆಲ್ಲವೂ ಇಲ್ಲಿ ನಡೆಯಬೇಕಿದೆ. ಇದಕ್ಕಾಗಿ ಎಲ್ಲೆಡೆ ಹಸಿರು ಕವಚವನ್ನು ಸೃಷ್ಟಿಸಬೇಕು. ಇಂತಹ ಆಸಕ್ತಿ ಸಾರ್ವಜನಿಕರಲ್ಲೂ ಹುಟ್ಟಬೇಕು. ಮಂಗಳೂರಿನಲ್ಲಿ ಹಸಿರು ಇಂಧನ ಉತ್ಪಾದಿಸಲು ಸರಕಾರ ಮುಂದಡಿ ಇಟ್ಟಿದ್ದು, ಅಪಾರ ಪ್ರಮಾಣದ ಹೂಡಿಕೆ ಹರಿದು ಬರುತ್ತಿದೆ ಎಂದು ತಿಳಿಸಿದರು.
ಇನ್ನೂ ನನ್ನ ಸ್ವಂತ ಜಿಲ್ಲೆಯಾದ ವಿಜಯಪುರದಲ್ಲಿ ತಾವು ಸ್ವಯಂ ಆಸಕ್ತಿಯಿಂದ 1.5 ಕೋಟಿ ಸಸಿ ನೆಟ್ಟಿರುವ ಕೋಟಿ ವೃಕ್ಷ ಅಭಿಯಾನದ ವಿಡಿಯೋ ತುಣಕನ್ನು ಸ್ವಿಸ್ ಕಾನ್ಸುಲ್ ಜನರಲ್ಗೆ ಪ್ರದರ್ಶಿಸಿದರು.
ಈ ವೇಳೆ ರಾಜ್ಯ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಉದ್ಯೋಗ ಮಿತ್ರದ ಸಿಇಒ ದೊಡ್ಡ ಬಸವರಾಜ ಮತ್ತಿತರರು ಉಪಸ್ಥಿತರಿದ್ದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ











Click it and Unblock the Notifications