SWR ಗುಡ್ ನ್ಯೂಸ್: ಬೆಂಗಳೂರಿನಿಂದ ಇಲ್ಲಿಗೆ ವಿಶೇಷ ರೈಲುಗಳ ಕಾರ್ಯಾಚರಣೆ, ವೇಳಾಪಟ್ಟಿ
ಬೆಂಗಳೂರು, ಅಕ್ಟೋಬರ್ 01: ದಸರಾ ಪ್ರಯುಕ್ತ ಮಾತ್ರವಲ್ಲದೇ ದೀಪಾವಳಿಯನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಶೇಷ ರೈಲುಗಳ ಸೇವೆ ಆರಂಭಿಸಿದೆ. ಈ ಸೇವೆಯು ಸೆಪ್ಟೆಂಬರ್ 28 ರಂದೇ ಆರಂಭವಾಗಿದ್ದು, ಅಕ್ಟೊಬರ್ 5 ಮತ್ತು 6ರವರೆಗೆ ಮುಂದುವರಿಯಲಿದೆ. ಇದರಿಂದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಬಹುದಾಗಿದೆ. ಈ ಮಾರ್ಗಗದ ಪ್ರಯಾಣಿಕರಿಗೆ ಅನುಕೂಲ ಒದಗಿಸಿದಂತಾಗುತ್ತದೆ.
ನೈಋತ್ಯ ರೈಲ್ವೆಯು (South Western Railway) ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ-ಎರ್ನಾಕುಲಂ ಜಂಕ್ಷನ್ ನಡುವೆ ವಿಶೇಷ ರೈಲು ಸೇವೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಈ ರೈಲುಗಳ ಸಮಯ, ಸಂಖ್ಯೆ, ನಿಲುಗಡೆ ಹಾಗೂ ವೇಳಾಪಟ್ಟಿ ಇಲ್ಲಿದೆ.

ಎರ್ನಾಕುಲಂ- ಬೆಂಗಳೂರು ಕಂ. ನಿಲ್ದಾಣ ರೈಲುಗಳ ವೇಳಾಪಟ್ಟಿ
* ರೈಲು ಸಂಖ್ಯೆ 06147 ಎರ್ನಾಕುಲಂ ಜಂಕ್ಷನ್ ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ಪ್ರೆಸ್ ವಿಶೇಷವು ಸೆಪ್ಟೆಂಬರ್ 28ರಿಂದ ಕಾರ್ಯಾರಂಭ ಮಾಡಿದೆ. 2025 ಅಕ್ಟೋಬರ್ 5ರ ಭಾನುವಾರಗಳಂದು ಸಂಜೆ 4:20 ಕ್ಕೆ ಎರ್ನಾಕುಲಂ ಜಂಕ್ಷನ್ (ERS) ನಿಂದ ಹೊರಡುತ್ತದೆ. ಮರುದಿನ (ಸೋಮವಾರ) ಬೆಳಗ್ಗೆ 08:15 ಕ್ಕೆ ಬೆಂಗಳೂರು ಕಂಟೋನ್ಮೆಂಟ್ (BNC) ನಿಲ್ದಾಣಕ್ಕೆ ಬರಲಿದೆ. ಈ ರೈಲು 2 ಟ್ರಿಪ್ ಸೇವೆ ನೀಡಲಿದೆ.
* ಬೆಂಗಳೂರು ಕಂಟೋನ್ಮೆಂಟ್ ಎರ್ನಾಕುಲಂ ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು (ಸಂಖ್ಯೆ 06148) ವಿಶೇಷವು 2025 ಸೆಪ್ಟೆಂಬರ್ 29 ಮತ್ತು 2025 ಅಕ್ಟೋಬರ್ 6ರಂದು ಸೋಮವಾರ ರಾತ್ರಿ 22:10 ಕ್ಕೆ ಬೆಂಗಳೂರು ಕಂಟೋನ್ಮೆಂಟ್ (BNC) ನಿಂದ ಹೊರಡುತ್ತದೆ. ಈ ರೈಲು ಮೂರನೇ ದಿನ (ಮಂಗಳವಾರ) ಬೆಳಗ್ಗೆ 10:00 ಗಂಟೆಗೆ ಎರ್ನಾಕುಲಂ ಜಂಕ್ಷನ್ (ERS) ತಲುಪಲಿದೆ. ಈ ರೈಲು ಸಹ 2 ಟ್ರಿಪ್ಗಳ ಸೇವೆ ನೀಡುತ್ತದೆ.
ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಅಲುವಾ, ತ್ರಿಶೂರ್, ಪಾಲಕ್ಕಾಡ್ ಜಂಕ್ಷನ್, ಪೋದನೂರು ಜಂಕ್ಷನ್, ತಿರುಪ್ಪೂರು, ಈರೋಡ್ ಜಂಕ್ಷನ್, ಸೇಲಂ ಜಂಕ್ಷನ್, ಬಂಗಾರಪೇಟೆ, ವೈಟ್ಫೀಲ್ಡ್, ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಪ್ರಯಾಣಿಕರು ಇದರ ಲಾಭ ಪಡೆದುಕೊಳ್ಳಬಹುದಾಗಿದೆ.
ಈ ರೈಲು 22 LHB ಬೋಗಿಗಳೊಂದಿಗೆ ಚಲಿಸಲಿದೆ. ಇದರಲ್ಲಿ ಎರಡು ಎಸಿ ಪ್ರಥಮ ದರ್ಜೆ, ಮೂರು ಎಸಿ 2-ಟೈರ್, ಏಳು ಎಸಿ 3-ಟೈರ್ ಎಕಾನಮಿ, ನಾಲ್ಕು ಸ್ಲೀಪರ್ ಕ್ಲಾಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಜನರೇಟರ್ ಹೊಂದಿರುವ ಎರಡು ಲಗೇಜ್-ಕಮ್-ಬ್ರೇಕ್ ವ್ಯಾನ್ಗಳು ಸೇರಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಮುಂಗಡ ಬುಕ್ಕಿಂಗ್ ಗಾಗಿ ನೀವು IRCTC ವೆಬ್ಸೈಟ್, ಆಪ್ ಮೂಲಕ ಬುಕ್ ಮಾಡಿಕೊಳ್ಳಬಹುದು.
-
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications