SWR: ದಸರಾ ಪ್ರಯುಕ್ತ ಮೈಸೂರಿನಿಂದ ವಿವಿಧ ಮಾರ್ಗಗಳಲ್ಲಿ ವಿಶೇಷ ರೈಲುಗಳ ಕಾರ್ಯಾಚರಣೆ, ವೇಳಾಪಟ್ಟಿ
South Western Railway: ದಸರಾ ಹಬ್ಬದ ಪ್ರಯುಕ್ತ ಮೈಸೂರಿಗೆ ಬರುವವರು ಮತ್ತು ಇಲ್ಲಿಂದ ರಾಜ್ಯದ ಬೇರೆಡೆಗೆ ತೆರಳುವವರ ಸಂಖ್ಯೆ ಹೆಚ್ಚಿರುತ್ತದೆ. ಈ ಸಂಬಂಧ ನೈಋತ್ಯ ರೈಲ್ವೆ (SWR) ಮೈಸೂರು ವಿಭಾಗವು ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ವಿಶೇಷ ರೈಲುಗಳನ್ನು ಸಂಚಾರಕ್ಕೆ ಬಿಟ್ಟಿದೆ. ಸೆಪ್ಟೆಂಬರ್ 27ರಿಂದಲೇ ಸಂಚಾರ ಆರಂಭಿಸಿದ್ದು, ಅಕ್ಟೋಬರ್ 6ರವರೆಗೆ ಈ ವಿಶೇಷ ರೈಲುಗಳು ಮೈಸೂರು ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಸಂಚರಿಸಲಿವೆ.
ಬೆಂಗಳೂರು ಮಾರ್ಗದಲ್ಲಿ ನೋಡುವುದಾರೆ, ಮೈಸೂರಿನಿಂದ ಬೆಂಗಳೂರು ಕಡೆ ಹಲವು ರೈಲುಗಳು ವ್ಯವಸ್ಥೆಯಾಗಿದೆ. ಬೆಳಗ್ಗೆ 8 ಗಂಟೆಗೆ ಮೈಸೂರು-ಬೆಂಗಳೂರು ವಿಶೇಷ (06284), ಸಂಜೆ 4.20ಕ್ಕೆ ಅಶೋಕಪುರಂ-ಬೆಂಗಳೂರು (06286) ರೈಲುಗಳು ಸಂಚರಿಸಲಿವೆ. ಜೊತೆಗೆ ಮೈಸೂರಿನಿಂದ ತಿರುವನೇಲಿ, ಕಾರೈಕುಡಿ, ಎಸ್ಎಂವಿಬಿ, ಸಿಕಂದರಾಬಾದ್, ಧಾರವಾಡ, ಅಜ್ಮೇರ್ ಮತ್ತು ಬೆಳಗಾವಿಗೆ ಸಂಪರ್ಕ ಕಲ್ಪಿಸುವ ರೈಲುಗಳು ಸಂಚರಿಸಲಿವೆ. ಅಗತ್ಯತೆ ನೋಡಿಕೊಂಡು ಪ್ರಯಾಣಿಕರು ಸಂಚಾರ ಮಾಡಬೇಕಿದೆ.

ಚಾಮರಾಜನಗರ ಮಾರ್ಗ
ಗಡಿ ಜಿಲ್ಲೆಯಾದ ಚಾಮರಾಜನಗರ ಮಾರ್ಗವಾಗಿ ವಿಶೇಷ ರೈಲು ಸಂಚರಿಸಲಿದೆ. ಮೈಸೂರಿನಿಂದ ಹಾಗೂ ಬೆಂಗಳೂರು-ಚಾಮರಾಜನಗರ ನಡುವೆಯೂ ವಿಶೇಷ ರೈಲುಗಳು ಕಾರ್ಯಾಚರಣೆ ಮಾಡಲಿವೆ. 06293 ಮತ್ತು 06289 ರೈಲುಗಳು ಸೆಪ್ಟೆಂಬರ್ 27ರಿಂದ ಅಕ್ಟೋಬರ್ 5ರವರೆಗೆ ಸಂಚಾರ ಮಾಡಲಿವೆ.
ಹಾಸನ-ಅರಸಿಕೇರೆಯ ಮಾರ್ಗದಲ್ಲಿ ರೈಲು
ಮೈಸೂರು ದಸರಾ ಮುಗಿಸಿ ತೆರಳುವವರಿಗೆ ಮೈಸೂರಿನಿಂದ ಅರಸಿಕೇರೆಯವರೆಗೆ (06296) ವಿಶೇಷ ರೈಲು ಲಭ್ಯವಿದೆ. ಈ ರೈಲು ಸೆಪ್ಟೆಂಬರ್ 27ರಿಂದಲೇ ಸೇವೆ ಆರಂಭಿಸಿದ್ದು, ಅಕ್ಟೋಬರ್ 2ರವರೆಗೆ ಲಭ್ಯವಿರಲಿದೆ. ಸಂಜೆ 6.50ಕ್ಕೆ ಅರಸಿಕೇರೆಯಲ್ಲಿ ತಲುಪಲಿದೆ.
ಪ್ರಯಾಣಿಕರಿಗೆ ಅನುಕೂಲ
ಮೈಸೂರು ದಸರಾ ಆಚರಣೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಮನಗಂಡು ರೈಲ್ವೆ ಇಲಾಖೆ ಈ ವಿಶೇಷ ರೈಲುಗಳನ್ನು ಚಾಲನೆ ಮಾಡುತ್ತಿದೆ. ಬೆಂಗಳೂರು, ಹಾಸನ, ಅರಸಿಕೇರೆಯ ಜೊತೆಗೆ ತಮಿಳುನಾಡು, ಆಂಧ್ರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಿಗೆ ರೈಲು ಸಂಪರ್ಕ ಲಭ್ಯವಾಗಲಿದೆ. ಇದರಿಂದ ದಟ್ಟಣೆ ನಿವಾರಣೆ ಜೊತೆಗೆ ಸೂಕ್ತ ಸಮಯಕ್ಕೆ ಮರಳಿ ತಮ್ಮೂರು ತಲುಪಲು ಸಾಧ್ಯವಾಗುತ್ತದೆ.
ರೈಲ್ವೆ ಅಧಿಕಾರಿಗಳ ಪ್ರಕಾರ, ಈ ವಿಶೇಷ ರೈಲುಗಳಿಗೆ ಸಾಮಾನ್ಯ ಹಾಗೂ ರಿಸರ್ವೇಶನ್ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆನ್ಲೈನ್ ಹಾಗೂ ಕೌಂಟರ್ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದ್ದು, ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಲು ವಿನಂತಿಸಲಾಗಿದೆ. ದಸರಾ ಉತ್ಸವದ ಸಮಯದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ನಿಲ್ದಾಣಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ SWR ಮಾಹಿತಿ ನೀಡಿದೆ.
-
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್












Click it and Unblock the Notifications