ಬೆಂಗಳೂರು ರೈಲು ನಿಲ್ದಾಣದಲ್ಲಿ ಏ.1ರಿಂದ 'ಯುಪಿಐ ಪೇಮೆಂಟ್ ಸಿಸ್ಟಮ್' ಜಾರಿ
ಬೆಂಗಳೂರು, ಮಾರ್ಚ್ 31: ಭಾರತೀಯ ರೈಲ್ವೆಯು ಮುಂದಿನ ಆರ್ಥಿಕ ವರ್ಷದಿಂದ ರೈಲ್ವೆಯ ಸಾಮಾನ್ಯ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿತ್ತು. ಅದರ ಅನುಷ್ಠಾನ ಜಾರಿಗೆ ಎಲ್ಲ ಸಿದ್ಧತೆ ನಡೆದಿವೆ. ಈಗಾಗಲೇ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೆಜೆಸ್ಟಿಕ್ (KSR) ರೈಲು ನಿಲ್ದಾಣದಲ್ಲಿ ಹಣ ಪಾವತಿಗೆ ಡಿಜಿಟಲ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ.
ಹೌದು, ಸದ್ಯ ನೈಋತ್ಯ ರೈಲ್ವೆಯು ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಯುಪಿಐ ಮೂಲಕ ಟಿಕೆಟ್ ಹಣ ಪಾವತಿಯ ಯೋಜನೆ ಜಾರಿಗೆ ತಂದಿದೆ. ಇದು ಏಪ್ರಿಲ್ 01ರಿಂದ ಜಾರಿಗೆ ಬರಲಿದೆ.

ರೈಲ್ವೆ ಪ್ರಯಾಣಿಕರು ಜನರಲ್ ಟಿಕೆಟ್ ಹೊರತುಪಡಿಸದರೆ ಬೇರೆ ನಾನ್ ಎಸಿ ಸ್ಲೀಪರ್, ಎಸಿ ಸ್ಲಿಪರ್, ಐಶಾರಾಮಿ ಟಿಕೆಟ್ ಪಡೆಯಲು ಆನ್ಲೈನ್ಲ್ಲಿ ಕಾಯ್ದಿರಿಸಬಹುದು. ಅಲ್ಲಿಯೇ ಡಿಜಿಟಲ್ ಹಣ ಪಾವತಿಸಬಹುದು. ಆದರೆ ಇದು ಸಾಮಾನ್ಯ ಟಿಕೆಟ್ ಖರೀದಿಸುವ ಜನರಲ್ ಪ್ರಯಾಣಿಕರಿಗೆ ಅನ್ವಯಿಸಲ್ಲ.
ಟಿಕೆಟ್ ಕೌಂಟರ್ನಲ್ಲಿ ಡಿಜಿಟಲ್ ಪಾವತಿ
ಹೀಗಾಗಿ ರೈಲ್ವೆ ಇಲಾಖೆಯು ಸಾಮಾನ್ಯ ಟಿಕೆಟ್ (General Passengers) ಖರೀದಿಸುವಾಗ ಕೌಂಟರ್ನಲ್ಲಿ ನಗದು ಹಣ ಕೊಟ್ಟೇ ಖರೀದಿಸಬೇಕಿತ್ತು. ಇದೀಗ ಆ ವ್ಯವಸ್ಥೆ ಜೊತೆಗೆ ಯುಪಿಐ ಪಾವತಿ ವ್ಯವಸ್ಥೆ ಬರಲಿದೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಬೆಂಗಳೂರು ಎಲ್ಲ ನಿಲ್ದಾಣಗಳಿಗೆ ವಿಸ್ತರಣೆ
ಸದ್ಯ ಬೆಂಗಳೂರಿನ ಒಂದು ನಿಲ್ದಾಣದಲ್ಲಿ ಈ ಯುಪಿಐ ವ್ಯವಸ್ಥೆ ಅಳವಡಿಸಿರುವ ನೈಋತ್ಯ ರೈಲ್ವೆಯು ಮುಂದಿನ ದಿನಗಳಲ್ಲಿ ಬೆಂಗಳೂರಿನ ಎಲ್ಲ ರೈಲು ನಿಲ್ದಾಣಗಳಲ್ಲೂ (ಯಶವಂತಪುರ, ಕಂಟೋನ್ಮೆಂಟ್ ರೈಲು ನಿಲ್ದಾಣ (ದಂಡು), ಬೈಯಪ್ಪನಹಳ್ಳಿ, ಕೆಂಗೇರಿ ಇತ್ಯಾದಿ) ಈ ವ್ಯವಸ್ಥೆ ಜಾರಿಗೆ ತರಲು ಪ್ಲಾನ್ ಮಾಡಿಕೊಂಡಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಯುಪಿಐ ಪಾವತಿ: ಚಿಲ್ಲರೆ ಸಮಸ್ಯೆಗೆ ಮುಕ್ತಿ
ರೈಲ್ವೆ ಮಂಡಳಿಯು ಹಲವು ಸುಧಾರಣೆ ಜಾರಿಗೆ ತರುತ್ತಿದೆ. ಅದರಲ್ಲಿ ಡಿಜಿಟಲ್ ಪಾವತಿಗೂ ಆದ್ಯತೆ ನೀಡಿದೆ. ಏಪ್ರಿಲ್ 1ರಿಂದ ಸಾಮಾನ್ಯ ಪ್ರಯಾಣಿಕರು ಟಿಕೆಟ್ ಕೌಂಟರ್ಗಳಲ್ಲಿ ಗೂಗಲ್ ಪೇ, ಫೋನ್ ಪೇ, ಭೀಮ್ ಆಪ್ ಸೇರಿದಂತೆ ಯುಪಿಐ ಆಧಾರಿತ ಎಲ್ಲ ಡಿಜಿಟಲ್ ವ್ಯವಸ್ಥೆಯಿಂದಲೂ ನೀವು ಕೌಂಟರ್ನಲ್ಲಿ ಹಣ ಪಾವತಿಸಬಹುದು.
ಭಾರತದಾದ್ಯಂತ ಸಾಮಾನ್ಯ ಪ್ರಯಾಣಿಕರಿಗಾಗಿ ಟಿಕೆಟ್ ಕೌಂಟರ್ನಲ್ಲಿ ಈ ಡಿಜಿಟಲ್ ಪಾವತಿಯನ್ನು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಪ್ರಾಥಮಿಕ ಹಂತದಲ್ಲಿ ಒಂದಷ್ಟು ರೈಲು ನಿಲ್ದಾಣಗಳಲ್ಲಿ ಇದು ಜಾರಿಗೆ ಬರಲಿದೆ. ನಂತರ ಎಲ್ಲ ರೈಲ್ವೆ ನಿಲ್ದಾಣಗಳಲ್ಲಿ ಇದರನ್ನು ವಿಸ್ತರಿಸುವ ಬಗ್ಗೆ ಇತ್ತೀಚೆಗೆ ರೈಲ್ವೆ ಇಲಾಖೆ ಅಧಿಕೃತ ಮಾಹಿತಿ ನೀಡಿತ್ತು.
ಟಿಕೆಟ್ ಬುಕ್ಕಿಂಗ್ ಸುಲಭ
ಡಿಜಿಟಲ್ ಪಾವತಿಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಈಗಾಗಲೇ ಇಲಾಖೆ ಅಧಿಕಾರಿಗಳು ಮಾಡಿಕೊಂಡಿದ್ದಾರೆ. ಇದರಿಂದ ಕೌಂಟರ್ನಲ್ಲಿ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ತಪ್ಪಲಿದೆ. ನಗದು ಹಣ ಇಲ್ಲದವರು ಇನ್ನು ಮುಂದೆ ಡಿಜಿಟಲ್ ವ್ಯವಸ್ಥೆಯಡಿ ಸಾಮಾನ್ಯ ಟಿಕೆಟ್ ಪಡೆಯಬಹುದು. ಇದು ಪ್ರಯಾಣಿಕರಿಗೆ ಚಿಲ್ಲರೆ ಕಿರಿ ಕಿರಿ ತಪ್ಪಲಿದೆ, ಕೌಂಟರ್ನಲ್ಲಿ ಟಿಕೆಟ್ ಬುಕ್ಕಿಂಗ್ ಸುಲಭವಾಗುವುದು ಸೇರಿದಂತೆ ಕೆಲವು ಪ್ರಯೋಜನ ನೀಡಲಿದೆ ಎಂದು ನೈಋತ್ಯ ರೈಲ್ವೆ ಪಿಆರ್ಒ ಮಾಹಿತಿ ನೀಡಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications