SWR: ಯಶವಂತಪುರದಿಂದ ಆ.23-ಡಿ. 29 ರವರೆಗೆ ವಿಶೇಷ ರೈಲು ಸೇವೆ
ಬೆಂಗಳೂರು, ಆಗಸ್ಟ್ 22: ಗೌರಿ ಗಣೇಶ ಹಬ್ಬದ ಪ್ರಯುಕ್ತ ಈಗಾಗಲೇ ಬೆಂಗಳೂರಿನಿಂದ ಹಾಗೂ ಕರ್ನಾಟಕದಿಂದ ವಿವಿಧ ಕಡೆಗಳಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇದೀಗ ಇದೇ ಹಬ್ಬದ ಪ್ರಯುಕ್ತ ಆಗಸ್ಟ್ 23ರಿಂದ ಬೆಂಗಳೂರಿನ ಯಶವಂತಪುರದಿಂದ ಸಾಪ್ತಾಹಿಕ ಎಕ್ಸ್ಪ್ರೆಸ್ ವಿಶೇಷ ರೈಲು ಕಾರ್ಯಾಚರಣೆ ಆರಂಭವಾಗಲಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ರೈಲು ಒಟ್ಟು 19 ಟ್ರಿಪ್ಗಳು ಟ್ರಿಪ್ಗಳ ಸೇವೆ ನೀಡಲಿದೆ. ಇದರಿಂದ ಹಬ್ಬದ ಪ್ರಯುಕ್ತ ಹೆಚ್ಚಾಗಲಿರುವ ಸಂಚಾರ ದಟ್ಟಣೆ ನಿವಾರಣೆ ಆಗಲಿದೆ. ಆಗಸ್ಟ್ 23ರ ಶನಿವಾರದಿಂದ ಡಿಸೆಂಬರ್ 27 ರವರೆಗೆ ಪ್ರತಿ ಶನಿವಾರ ಚಲಿಸಲಿದೆ. ಯಶವಂತಪುರದಿಂದ ಧನ್ಬಾದ್ ಗೆ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲನ್ನು (06563) ಕಾರ್ಯಾಚರಣೆ ಮಾಡಲಿದೆ. ಯಶವಂತಪುರದಿಂದ ಬೆಳಗ್ಗೆ 07:30 ಕ್ಕೆ ಹೊರಟು ಸೋಮವಾರ ರಾತ್ರಿ 11:00 ಕ್ಕೆ ಧನ್ಬಾದ್ ತಲುಪಲಿದೆ.

ಧನ್ಬಾದ್-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ವಿಶೇಷ (06564) ರೈಲು ಮರಳಿ ಧನ್ಬಾದ್ ನಿಂದ ಆಗಸ್ಟ್ 25 ರಿಂದ ಡಿಸೆಂಬರ್ 29ರವರೆಗೆ ಪ್ರತಿ ಸೋಮವಾರ ಚಲಿಸಲಿದೆ. ಬುಧವಾರ ರಾತ್ರಿ 20:45 ಕ್ಕೆ ಧನ್ಬಾದ್ನಿಂದ ಹೊರಟು ರಾತ್ರಿ 21:30ಕ್ಕೆ ಯಶವಂತಪುರ ತಲುಪಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ನಿಲುಗಡೆ ನಿಲ್ದಾಣಗಳು
ಯಲಹಂಕ, ಧರ್ಮಾವರಂ, ಅನಂತಪುರ, ಗೂಟಿ, ಧೋನೆ, ಕರ್ನೂಲ್ ಸಿಟಿ, ಮಹೆಬೂಬ್ನಗರ, ಕಾಚೇಗೌಡ, ಕಾಜಿಪೇಟ್, ರಾಮಗುಂಡಂ, ಬಲ್ಹರ್ಷಾ, ನಾಗ್ಪುರ, ಇಟಾರ್ಸಿ, ಪಿಪಾರಿಯಾ, ನರಸಿಂಗ್ಪುರ, ಮದನ್ ಮಹಲ್, ಕಟ್ನಿ, ಸತ್ನಾ, ಪ್ರಯಾಗ್ರಾಜ್ ಛೋಕಿ, ಮಿರ್ಜಾಪುರ, ಪಿ.ಟಿ. ದೀನ್ ದಯಾಳ್ ಉಪಾಧ್ಯಾಯ ಜೂ., ಭಬುವಾ ರಸ್ತೆ, ಸಸಾರಾಮ್, ಅನುಗ್ರಹ ನಾರಾಯಣ ರಸ್ತೆ, ಗಯಾ, ಕೊಡೆರ್ಮಾ, ಹಜಾರಿಬಾಗ್ ರಸ್ತೆ, ಪರಸ್ನಾಥ್ ಮತ್ತು ನೇತಾಜಿ ಸುಭಾಸ್ ಚಂದ್ರ ಬೋಸ್ ಗೋಮೊಹ್ ನಿಲ್ದಾಣಗಳಲ್ಲಿ ಎರಡು ಬದಿ ಸಂಚಾರದಲ್ಲೂ ನಿಲುಗಡೆ ನೀಡಲಿದೆ.
ರೈಲು ಪ್ರಯಾಣಿಕರು 02 ಎಸಿ 3-ಟೈರ್, 13 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್ಎಲ್ಆರ್/ಡಿ ಕೋಚ್ಗಳನ್ನು ಒಳಗೊಂಡಂತೆ 21 ಕೋಚ್ಗಳನ್ನು ಒಳಗೊಂಡಿರುತ್ತದೆ. ಪ್ರಯಾಣಿಕರು ಅಧಿಕೃತ ವೆಬ್ಸೈಟ್ www.enquiry.indianrail.gov.in, NTES ಅಪ್ಲಿಕೇಶನ್ ಬಳಸಿ ಟಿಕೆಟ್ ಬುಕ್ ಮಾಡಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 139 ಸಂಪರ್ಕಿಸಬಹುದು...
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications