ರೈಲ್ವೆ ಗುಡ್ ನ್ಯೂಸ್: ಬೆಂಗಳೂರಿನ ಯಲಹಂಕದಿಂದ ಇಲ್ಲಿಗೆ ವಿಶೇಷ ರೈಲು ಕಾರ್ಯಾಚರಣೆ
Special Trains: ನೈಋತ್ಯ ರೈಲ್ವೆ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯ ಅಂಗವಾಗಿ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅನಕಪಲ್ಲೆ-ಯಲಹಂಕ-ಅನಕಪಲ್ಲೆ ಮಾರ್ಗದ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಘೋಷಿಸಲಾಗಿದೆ. ಇದು ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತಡೆಯಲಿದೆ.
ಅನಕಪಲ್ಲೆಯಿಂದ ಯಲಹಂಕವರೆಗೆ ವಿಶೇಷ ಎಕ್ಸ್ಪ್ರೆಸ್ ರೈಲು (07409) ಇದೇ ನವೆಂಬರ್ 13 (ಗುರುವಾರ) ರಂದು ಸಂಜೆ 5.15ಕ್ಕೆ ಹೊರಟು ಮುಂದಿನ ದಿನ ಮಧ್ಯಾಹ್ನ 12.30ಕ್ಕೆ ತಲುಪಲಿದೆ. ಅದರಂತೆಯೇ ಯಲಹಂಕದಿಂದ ಅನಕಪಲ್ಲೆವರೆಗೆ ವಿಶೇಷ ಎಕ್ಸ್ಪ್ರೆಸ್ ರೈಲು (07410) ನವೆಂಬರ್ 14 (ಶುಕ್ರವಾರ) ರಂದು ಮಧ್ಯಾಹ್ನ 2 ಗಂಟೆಗೆ ಹೊರಟು ಮುಂದಿನ ದಿನ ಬೆಳಗ್ಗೆ 11.00 ಗಂಟೆಗೆ ತಲುಪಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ಈ ವಿಶೇಷ ರೈಲುಗಳು 23 ಬೋಗಿಗಳಿಂದ ಕೂಡಿವೆ. ಅದರಲ್ಲಿ ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ಜನರಲ್ ಕೋಚ್ ಸೇರಿದಂತೆ ಹಲವು ಬೋಗಿಗಳು ಇವೆ. ಎರಡೂ ದಿಕ್ಕುಗಳಲ್ಲಿ ಎಳ್ಳಮಂಚಿಲಿ, ಟೂನಿ, ಸಮಾಲ್ಕೋಟ್ ಜಂಕ್ಷನ್, ರಾಜಹಮುನ್ದ್ರಿ, ತಡೆಪಳ್ಳಿಗುಡೆಮ್, ಎಲೂರು, ವಿಜಯವಾಡ ಜಂಕ್ಷನ್, ಗುಂಟೂರು ಜಂಕ್ಷನ್, ನಾರಸಾರೋಪೇಟ, ವಿನುಕೊಂಡ, ಡೋನಕೊಂಡ, ಮಾರ್ಕಾಪುರ ರಸ್ತೆ, ಕುಂಬಂ, ಗಿಡ್ಡಲೂರು, ದಿಗುವಮೆಟ್ಟ, ನಂದ್ಯಾಲು, ಧೋನೆ, ಗುಟಿ, ಅನಂತಪುರ, ಧರ್ಮಾವರಂ ಮತ್ತು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಪ್ರಯಾಣಿಕರು ರೈಲುಗಳ ಸಮಯ ಹಾಗೂ ಇತರೆ ವಿವರಗಳನ್ನು ತಿಳಿಯಲು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ http://www.enquiry.indianrail.gov.in ಅಥವಾ NTES ಆಪ್ ಇಲ್ಲವೇ 139 ಸಂಖ್ಯೆಗೆ ಕರೆಮಾಡಿ ಮಾಹಿತಿ ಪಡೆಯಬಹುದು ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರೈಲ್ ಒನ್ಆಪ್: ಆನ್ಇನ್ ಒನ್ ಆಪ್
ನೀವು ಟಿಕಟ್ ಬುಕ್ ಮಾಡಲು ಐಆರ್ಸಿಟಿಸಿ ಬದಲಾಗಿ 'ರೈಲ್ ಒನ್ಆಪ್' ಸಹ ಬಳಸಬಹುದಾಗಿದೆ. ರೈಲ್ ಒನ್ಆಪ್ ಇದು ಆನ್ಇನ್ ಒನ್ ಆಪ್ ಆಗಿದೆ. ಈ ಆಪ್ ನಲ್ಲಿ ನೀವು ಟಿಕೆಟ್ ಬುಕ್ ಮಾಡಬಹುದು. ಪ್ಲಾಟ್ ಫಾರ್ಮ್ ಟಿಕೆಟ್ ಬುಕ್ ಮಾಡಬಹುದು. ಸೀಸನ್ ಪಾಸ್ ಪಡೆಯುವುದು ಸೇರಿದಂತೆ ಇತರ ಸೌಲಭ್ಯಗಳನ್ನು ಪಡೆಯಬಹುದು. ಇದನ್ನು ಆಂಡ್ರಾಯ್ಡ್ ಮತ್ತು ಐಓಎಸ್ ಆಪ್ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಬಹುದು.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications