SWR: ಬೆಂಗಳೂರು-ಬೀದರ್ ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್...Special Trains
ಬೆಂಗಳೂರು, ಆಗಸ್ಟ್ 23: ಗೌರಿ ಗಣೇಶ ಹಬ್ಬದ ಪ್ರಯುಕ್ತ ಹೆಚ್ಚಿನ ಸಂಖ್ಯೆ ಪ್ರಯಾಣಿಕರು ಸಂಚಾರ ಮಾಡಲಿದ್ದು, ಅವರಿಗೆ ಅನುಕೂಲ ಆಗುವಂತೆ ನೈಋತ್ಯ ರೈಲ್ವೆ ವಿಶೇಷ ರೈಲಿನ ಸೇವೆ ಆರಂಭಿಸಿದೆ. ಈಗಾಗಲೇ ಭಾರತೀಯ ರೈಲ್ವೆ ವಿವಿಧ ಮಾರ್ಗಗಳಲ್ಲಿ ಒಟ್ಟು 380 ಟ್ರಿಪ್ ಸೇವೆ ಆರಂಭಿಸಿದೆ. ಇದೀಗ ನೈಋತ್ಯ ರೈಲ್ವೆ (South Western Railway) ವಿಶೇಷ ರೈಲು ಕಾರ್ಯಾಚರಣೆ ಮಾಡುತ್ತಿದೆ. ಎಲ್ಲಿಂದ ಎಲ್ಲಿಗೆ, ಮಾರ್ಗ, ನಿಲುಗಡೆ ನಿಲ್ದಾಣಗಳು, ವೇಳಾಪಟ್ಟಿ ವಿವರ ಇಲ್ಲಿದೆ.
ಗಣೇಶ ಹಬ್ಬದ ಸಂಚಾರ ದಟ್ಟಣೆ ನಿವಾಸರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನೈಋತ್ಯ ರೈಲ್ವೆಯು ರಾಜಧಾನಿ ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಬೀದರ್ಗೆ ವಿಶೇಷ ರೈಲು ಸೇವೆ ನೀಡಲಿದೆ. ಈ ರೈಲು ಆಗಸ್ಟ್ 26 ಸಂಚಾರ ಮಾಡಲಿದೆ.

ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೀದರ್ ವಿಶೇಷ ಎಕ್ಸ್ಪ್ರೆಸ್ ರೈಲು (06549) ಇದೇ ಆಗಸ್ಟ್ 26ರಂದು ಮಂಗಳವಾರ SMVT ಬೆಂಗಳೂರಿನಿಂದ ರಾತ್ರಿ 21:15 ಗಂಟೆಗೆ ಹೊರಡಲಿದೆ. ಮಾರನೇ ದಿನ ಬುಧವಾರ ಬೆಳಗ್ಗೆ 11:30 ಗಂಟೆಗೆ ಬೀದರ್ ನಿಲ್ದಾಣ ತಲುಪುತ್ತದೆ.
ಮರಳಿ ಅಲ್ಲಿಂದ ಬೀದರ್-SMVT ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು (06550) ಆಗಸ್ಟ್ 27 ರಂದು ಬುಧವಾರ ಬೀದರ್ನಿಂದ ಮಧ್ಯ 14:30 ಗಂಟೆಗೆ ಹೊರಟು ಗುರುವಾರ ಬೆಳಗ್ಗೆ 04:30 ಗಂಟೆಗೆ SMVT ಬೆಂಗಳೂರು ತಲುಪಲಿದೆ. ಇದು ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವ ಪ್ರಯಾಣೀಕರಿಗೆ ಒಂದು ಟ್ರಿಪ್ ಸೇವೆ ನೀಡಲಿದೆ. ಯಾವೆಲ್ಲ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ ಎಂಬ ಮಾಹಿತಿ ಮುಂದಿದೆ.
ಬೆಂಗಳೂರು ಎಸ್ಎಂವಿಟಿ ನಂತರ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರಸ್ತೆ, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಮತ್ತು ಹುಮನಾಬಾದ್ ರೈಲು ನಿಲ್ದಾಣಗಳಲ್ಲಿ ಎರಡು ಕಡೆಗಳಲ್ಲಿ ನಿಲುಗಡೆ ನೀಡಲಿದೆ.
ಈ ರೈಲು ಎಲ್ಲ ವರ್ಗದ ಬೋಗಿ ಸೇರಿ ಒಟ್ಟು 22 ಬೋಗಿಗಳನ್ನು ಹೊಂದಿರಲಿದೆ. ಪ್ರಯಾಣಿಕರು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ www.enquiry.indianrail.gov.in ಗೆ ಭೇಟಿ ನೀಡಬೇಕು. ಇಲ್ಲವೇ NTES ಅಪ್ಲಿಕೇಶನ್ ಬಳಸಿ ಅಥವಾ 139 ಅನ್ನು ಡಯಲ್ ಮಾಡುವ ರೈಲಿ ಸಮಯ, ವಿವರ ತಿಳಿಯಬಹುದು. IRCTC ಆಪ್ ಮೂಲಕ ನೀವು ಮುಂಗಡ ಟಿಕೆಟ್ ಕಾಯ್ದಿರಿಸಬಹುದು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications