Ugadi Special Train: ವಿಶೇಷ ರೈಲು ಸಂಚಾರ, ಬೆಂಗಳೂರು-ಬೆಳಗಾವಿ ಪ್ರಯಾಣಿಕರೇ ಗಮನಿಸಿ
ಬೆಂಗಳೂರು: ಯುಗಾದಿ ಪ್ರಯುಕ್ತ ಬೆಂಗಳೂರಿನಂತಹ ಮಹಾನಗರಗಳಿಗೆ ಬಂದವರು ತಮ್ಮೂರುಗಳಿಗೆ ತೆರಳುತ್ತಾರೆ. ಬೆಂಗಳೂರಿನಿಂದ ತೆರಳುವವರ ಸಂಖ್ಯೆ ಹೆಚ್ಚಿರುವ ಕಾರಣಕ್ಕೆ ನೈಋತ್ಯ ರೈಲ್ವೆ ಅಧಿಕಾರಿಗಳು ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು ಕಾರ್ಯಾಚರಣೆ ನಡೆಸಲಿದೆ. ಇಂದಿನಿಂದ ಮಾರ್ಚ್ 22ರವರೆಗೆ ವಿಶೇಷ ಸೇವೆ ಪ್ರಯಾಣಿಕರಿಗೆ ಸಿಗಲಿದೆ.
ಯುಗಾದಿ ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಎಸ್ಎಂವಿಟಿ (SMVT) ಬೆಂಗಳೂರು ಮತ್ತು ಬೆಳಗಾವಿ ನಡುವೆ ಒಂದು ಸುತ್ತಿನ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ಮಾರ್ಚ್ 18 ರಂದು ಬೆಂಗಳೂರಿನಿಂದ ಹೊರಡಲಿದೆ. ಮರಳಿ ಮಾರ್ಚ್ 22 ರಂದು ಬೆಳಗಾವಿಯಿಂದ ಹೊರಟು ಬೆಂಗಳೂರಿಗೆ ಆಗಮಿಸಲಿದೆ.

ರೈಲುಗಳ ವೇಳಾಪಟ್ಟಿ ಮತ್ತು ವಿವರ
ಎಸ್ಎಂವಿಟಿ ಬೆಂಗಳೂರು - ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು (06503) ಮಾರ್ಚ್ 18 ರಂದು ಬುಧವಾರ ಸಂಜೆ 07 ಗಂಟೆಗೆ ಇಲ್ಲಿಂದ ಹೊರಡುತ್ತದೆ. ಮಾರನೇ ದಿನ ಮಾರ್ಚ್ 19ರಂದು ಬೆಳಗ್ಗೆ 7:35 ಕ್ಕೆ ಬೆಳಗಾವಿ ನಿಲ್ದಾಣ ತಲುಪುತ್ತದೆ.
ಬೆಳಗಾವಿ -ಎಸ್ಎಂವಿಟಿ ವಿಶೇಷ ಎಕ್ಸ್ಪ್ರೆಸ್ ರೈಲು (06504) ಭಾನುವಾರ ಸಂಜೆ 05:30 ಗಂಟೆಗೆ ಹೊರಟು ಮಾರನೇ ದಿನ ಸೋಮವಾರ ಬೆಳಗ್ಗೆ 5 ಗಂಟೆಗೆ ಬೆಂಗಳೂರಿಗೆ ಬಂದು ಸೇರಲಿದೆ. ಹಬ್ಬದ ಸಮಯದಲ್ಲಿ ಖಾಸಗಿ ಬಸ್ಗಳ ದರ ಏರಿಕೆ ಆಗಿರುತ್ತದೆ. ಇಂತಹ ಸಂದರ್ಭದಲ್ಲಿ ಪ್ರಯಾಣಿಕರಿಗೆ ಈ ವಿಶೇಷ ರೈಲು ಸಂಚಾರವು ದೊಡ್ಡ ಮಟ್ಟದ ನಿರಾಳತೆ ತರಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದರು.
ನಿಲುಗಡೆಯ ಪ್ರಮುಖ ನಿಲ್ದಾಣಗಳು
ಈ ವಿಶೇಷ ಎಕ್ಸ್ಪ್ರೆಸ್ ರೈಲು ಎರಡೂ ದಿಕ್ಕುಗಳಲ್ಲಿ 'ಎಸ್ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ ಮತ್ತು ಬೆಳಗಾವಿ' ನಿಲ್ದಾಣಗಳಲ್ಲಿ ನಿಲುಗಡೆ ನೀಡುತ್ತದೆ. ಈ ಭಾಗದ ಅನೇಕ ಪ್ರಯಾಣಿಕರಿಗೆ ಈ ವಿಶೇಷ ರೈಲು ಕಾರ್ಯಾಚರಣೆಯ ಸದುಪಯೋಗ ಮಾಡಿಕೊಳ್ಳಬಹುದು.
ಈ ವಿಶೇಷ ರೈಲುಗಳು ಎಸಿ ಥ್ರಿ ಟೈರ್, ಎಸಿ ಟು ಟೈರ್, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ಜನರಲ್ ಸೇರಿ ಒಟ್ಟು 19 ಬೋಗಿಗಳನ್ನು ಹೊಂದಿರುತ್ತದೆ. ರೈಲಿನ ಸಮಯ ಮತ್ತು ಹೆಚ್ಚಿನ ಮಾಹಿತಿಗೆ, ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಅಧಿಕೃತ ವೆಬ್ಸೈಟ್ www.enquiry.indianrail.gov.inಗೆ ಭೇಟಿ ನೀಡಬೇಕು. ಇಲ್ಲವೇ ಎನ್ಟಿಎಸ್ ಅಪ್ಲಿಕೇಷನ್ ಅಥವಾ ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದು.
-
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ













Click it and Unblock the Notifications