Get Updates
Get notified of breaking news, exclusive insights, and must-see stories!

SWR: KSR ಬೆಂಗಳೂರು ನಿಲ್ದಾಣದಲ್ಲಿ 153 ದಿನ ರೈಲುಗಳ ನಿಲುಗಡೆ ರದ್ದು! ಕಾರಣ, ಬದಲಾವಣೆ ವಿವರ

ಬೆಂಗಳೂರು, ಜುಲೈ 11: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ (KSR Bengaluru) ಯಾರ್ಡ್‌ನಲ್ಲಿ ಮೂಲಸೌಕರ್ಯ ಕಾಮಗಾರಿ ನಡೆಯುತ್ತಿದೆ. ಹೀಗಾಗಿ 2025 ರ ಆಗಸ್ಟ್ 15 ರಿಂದ 2026 ರ ಜನವರಿ 15 ರವರೆಗೆ 153 ದಿನಗಳ ಕಾಲ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ (SWR) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಯಾಣಿಕರು ಗಮನಿಸಿ ಸಂಚಾರ ಮಾಡಬೇಕಿದೆ. ಯಾವೆಲ್ಲ ರೈಲುಗಳು ನಿಲುಗಡೆ, ಮಾರ್ಗ ಬದಲಾಯಿಸಲಾಗಿದೆ ಎಂಬ ವಿವರ ಇಲ್ಲಿದೆ.

ಈ 153 ದಿನಗಳ ಅವಧಿಯಲ್ಲಿ, ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ, ಕೆಳಗೆ ನಮೂದಿಸಲಾದ ರೈಲುಗಳು ಎಸ್‌ಎಂವಿಟಿ ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳಿಂದ ತಮ್ಮ ಪ್ರಯಾಣವನ್ನು ಕೊನೆಗೊಳಿಸಲಿವೆ. ಮತ್ತ ಅಲ್ಲಿಂದಲೇ ಸಂಚಾರ ಪ್ರಾರಂಭಿಸಲಿವೆ. ಈ ರೈಲುಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ.

SWR Train Route Services Diverted from KSR Bengaluru for 153 Days From 15th Full Details Here

* ಆಗಸ್ಟ್ 15 ರಿಂದ ಜನವರಿ 15, 2026 ರವರೆಗೆ ಎರ್ನಾಕುಲಂ ನಿಂದ ಹೊರಡುವ 'ಎರ್ನಾಕುಲಂ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12678) ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ಬದಲಾಗಿ ಎಸ್‌ಎಂವಿಟಿ ಬೆಂಗಳೂರಿನಲ್ಲಿ (ರಾತ್ರಿ 9:00) ತನ್ನ ಪ್ರಯಾಣ ಕೊನೆಗೊಳಿಸಲಿದೆ. ಈ ರೈಲು ಕಾರ್ಮೆಲರಾಮ್, ಬೈಯಪ್ಪನಹಳ್ಳಿ, ಎಸ್‌ಎಂವಿಟಿ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣ, ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳಲ್ಲಿನ ನಿಲುಗಡೆ ರದ್ದಾಗಿದೆ.

* ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಎಕ್ಸ್‌ಪ್ರೆಸ್ ರೈಲು (12677) ಕೆಎಸ್‌ಆರ್ ಬೆಂಗಳೂರು ನಿಲ್ದಾಣ ಬದಲಾಗಿ ಎಸ್‌ಎಂವಿಟಿ ಬೆಂಗಳೂರಿನಿಂದ (ಬೆಳಗ್ಗೆ 6:10) ಪ್ರಯಾಣ ಪ್ರಾರಂಭಿಸಲಿದೆ. ಈ ರೈಲು ಎಸ್‌ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ ಮತ್ತು ಕಾರ್ಮೆಲರಾಮ್ ಮಾರ್ಗವಾಗಿ ಸಂಚರಿಸಲಿದೆ. ಕೆಎಸ್‌ಆ‌ರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಲ್ಲುವುದಿಲ್ಲ.

SWR Train Route Services Diverted from KSR Bengaluru for 153 Days From 15th Full Details Here

* ನಾಂದೇಡ್ ನಿಲ್ದಾಣದಿಂದ ಹೊರಡುವ 'ನಾಂದೇಡ್-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು' (16594) ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ ಯಶವಂತಪುರದಲ್ಲಿ (ಬೆಳಗ್ಗೆ 4:15) ತನ್ನ ಪ್ರಯಾಣ ಕೊನೆಗೊಳಿಸುತ್ತದೆ. ಈ ರೈಲು ಯಲಹಂಕ, ಲೊಟ್ಟೆಗೊಲ್ಲಹಳ್ಳಿ, ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೆಎಸ್‌ಆ‌ರ್ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

* ಆಗಸ್ಟ್ 16 ರಿಂದ ಜನವರಿ 16, 2026 ರವರೆಗೆ ಹೊರಡುವ ರೈಲು (16593) ಕೆಎಸ್‌ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ ಯಶವಂತಪುರದಿಂದ (ರಾತ್ರಿ 11:15) ಪ್ರಯಾಣ ಆರಂಭಿಸುತ್ತದೆ. ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದೆ. ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಲುಗಡೆ ನೀಡುವುದಿಲ್ಲ.

* ಕಣ್ಣೂರಿನಿಂದ ಹೊರಡುವ ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು (16512) ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ ಎಸ್‌ಎಂವಿಟಿ ಬೆಂಗಳೂರಿನಲ್ಲಿ (ಬೆಳಗ್ಗೆ 7:45) ಸಂಚಾರ ಅಂತ್ಯಗೊಳಿಸುತ್ತದೆ. ಈ ರೈಲು ಕುಣಿಗಲ್, ಚಿಕ್ಕಬಾಣಾವರ, ಯಶವಂತಪುರ, ಹೆಬ್ಬಾಳ, ಬಾಣಸವಾಡಿ ಮತ್ತು ಎಸ್‌ಎಂವಿಟಿ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ. ಕೆಎಸ್‌ಆರ್ ಬೆಂಗಳೂರಿನಲ್ಲಿ ನಿಲುಗಡೆ ಇರುವುದಿಲ್ಲ.

* ಆಗಸ್ಟ್ 16 ರಿಂದ ಜನವರಿ 16, 2026 ರವರೆಗೆ ಹೊರಡುವ ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಡೈಲಿ ಎಕ್ಸ್‌ಪ್ರೆಸ್ ರೈಲು (16511), ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ ಎಸ್‌ಎಂವಿಟಿ ಬೆಂಗಳೂರಿನಿಂದ (ರಾತ್ರಿ 8:00) ತನ್ನ ಪ್ರಯಾಣ ಪ್ರಾರಂಭಿಸಲಿದೆ. ಈ ರೈಲು ಎಸ್‌ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಚಿಕ್ಕಬಾಣಾವರ ಮತ್ತು ಕುಣಿಗಲ್ ಮಾರ್ಗವಾಗಿ ಸಂಚರಿಸಲಿದೆ. ಕೆಎಸ್‌ಆರ್ ಬೆಂಗಳೂರಿನಲ್ಲಿ ನಿಲುಗಡೆ ಇರುವುದಿಲ್ಲ ಎಂದು SWR ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+