'ಜನತಾ ಕರ್ಫ್ಯೂ' ಬಗ್ಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಪ್ರತಿಕ್ರಿಯೆ
ಬೆಂಗಳೂರು, ಮಾರ್ಚ್ 21: 'ಜನತಾ ಕರ್ಫ್ಯೂ' ಬಗ್ಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷರು ಕೂಡ ಆಗಿರುವ ಶರವಣ ಬಂದ್ ಬಗ್ಗೆ ವಿವರ ನೀಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡುವ ಸಲುವಾಗಿ ಘೋಷಣೆ ಮಾಡಿದ ಜನತಾ ಕರ್ಫ್ಯೂಗೆ ಶರವಣ ಬೆಂಬಲ ನೀಡಿದ್ದಾರೆ. ಆ ದಿನ ತಮ್ಮ ಸಂಘದ ವತಿಯಿಂದ ಚಿನ್ನದ ಅಂಗಡಿಗಳನ್ನು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆಯಂತೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ''ಪ್ರಧಾನಿಯವರು ಆಗ್ರಹಪೂರ್ವಕ ವಿನಂತಿ ಹಿಂದಿರುವ ಕಾಳಜಿಯನ್ನು ಅಭಿನಂದಿಸುತ್ತೇನೆ. ಎಲ್ಲರ ಸಹಕಾರದಿಂದ ಮಾತ್ರ ಜನತಾ ಕರ್ಫ್ಯೂ ಯಶಸ್ವಿಯಾಗಬಲ್ಲದು. ಅದರಿಂದ ದಿನಾಂಕ 22/03/2020 ಭಾನುವಾರ ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ವತಿಯಿಂದ ಎಲ್ಲಾ ಜ್ಯುವೆಲರಿ ಅಂಗಡಿಗಳನ್ನು ಬಂದ್ ಮಾಡುವ ನಿರ್ಣಯ ಕೈಗೊಂಡಿದ್ದೇವೆ'' ಎಂದು ತಿಳಿಸಿದ್ದಾರೆ.

ಚಿಕ್ಕಪೇಟೆ, ಸಿಟಿ ಮಾರ್ಕೆಟ್ ನಲ್ಲಿ ಹೆಚ್ಚು ಜನಸಂದಣಿ ಇರುವುದರಿಂದ ಆ ಭಾಗದ ಜ್ಯುವೆಲರಿ ಅಂಗಡಿಗಳಿಗೆ 7 ದಿನಗಳ ಕಾಲ ರಜೆ ಎಂದು ಅಲ್ಲಿನ ಅಸೋಸಿಯೇಷನ್ ತಿಳಿಸಿದೆ. ಆದರೆ, ತಮ್ಮ ಜ್ಯುವೆಲರಿ ಅಂಗಡಿಗಳನ್ನು ಪ್ರಧಾನಿಯವರು ಹೇಳಿರುವ ಹಾಗೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ಬಂದ್ ಮಾಡಿರುತ್ತೇವೆ. ಎಂದು ಶರವಣ ಹೇಳಿದ್ದಾರೆ.
ಬಂದ್ ಜೊತೆಗೆ ಅಂಗಡಿಗೆ ಬರುವ ಗ್ರಾಹಕರಿಗೆ ಮುಂಜಾಗ್ರತೆ ಕ್ರಮವಾಗಿ ಕೈಗಳನ್ನು ಶುದ್ಧಿಗೊಳಿಸುವ ಸ್ಯಾನಿಟೈಸರ್ ನೀಡಲಾಗುವುದಂತೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications