ಕೊರೊನಾ ಹೊಡೆದೋಡಿಸಲು ದೇವರ ಮೊರೆಯೂ ದಾರಿ; ಸಚಿವರಿಗೆ ಶರವಣ ಪತ್ರ
ಬೆಂಗಳೂರು, ಏಪ್ರಿಲ್ 1: ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಮುಖಂಡರಾದ ಟಿ.ಎ. ಶರವಣ ಅವರು ಕೊರೊನಾ ವೈರಾಣು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.
18ನೇ ಶತಮಾನದಲ್ಲಿ ಪ್ಲೇಗ್ ಎಂಬ ಮಹಾಮಾರಿ ಬಂದಾಗ ಎಲ್ಲ ಊರುಗಳಲ್ಲಿ, ಎಲ್ಲ ಧಾರ್ಮಿಕ ಸಂಘಟನೆಗಳು ಸೇರಿ ಶಂಖ ಊದಿ, ಜಾಗಟೆಯನ್ನು ಬಾರಿಸಿ ಆ ಮಹಾಮಾರಿಯನ್ನು ಹೊಡೆದೋಡಿಸುವಂಥ ಪ್ರಯತ್ನವನ್ನು ಮಾಡಿದ್ದರು. ಅದರಲ್ಲಿ ಯಶಸ್ಸನ್ನು ಕೂಡ ಕಂಡಿದ್ದರು.
ಈಗ ಕೊರೊನಾ ಓಡಿಸುವ ನಿಟ್ಟಿನಲ್ಲಿ ನಮ್ಮದೊಂದು ಬೇಡಿಕೆಯಿದೆ. ಪ್ರತಿದಿನ ದೇವಸ್ಥಾನಗಳಲ್ಲಿ 8 ಗಂಟೆಗೆ ಸರಿಯಾಗಿ ಅಥವಾ ಅನುಕೂಲವಾಗುವಂತ ಒಂದೇ ಸಮಯದಲ್ಲಿ ಐದು ನಿಮಿಷಗಳ ಕಾಲ ಮಹಾಮೃತ್ಯುಂಜಯ ಮಂತ್ರ ಹಾಗೂ ಓಂಕಾರವನ್ನು ಆಡಿಯೋ ಮೂಲಕ, ಸಾಧ್ಯವಾದರೆ ಜೋರಾಗಿ ಹಾಕುವುದು.

ಎಲ್ಲ ದೇವಸ್ಥಾನಗಳಲ್ಲೂ ಒಂದೇ ಸಮಯದಲ್ಲಿ ಹಾಕುವುದರಿಂದ ಅತ್ಯುತ್ತಮವಾದ, ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತದೆ. ಅತ್ಯುತ್ತಮವಾದ ಪರಿಣಾಮವನ್ನು ಸಹ ಕಾಣಬಹುದು. ಅದೇ ಸಮಯದಲ್ಲಿ ಜನರು ಕೂಡ ಮನೆಯಲ್ಲಿ ಅದೇ ಮಂತ್ರವನ್ನು ಜಪಿಸುವುದರಿಂದ ಅವರಲ್ಲಿರುವ ಭಯ, ದುಗುಡ, ಆತಂಕ ಕಡಿಮೆ ಆಗುವುದು.
ನಮ್ಮ ಜಪ, ತಪ, ಮಂತ್ರಗಳಲ್ಲಿ ಅತ್ಯದ್ಭುತವಾದ ಶಕ್ತಿಯಿದೆ. ಕೊರೊನಾವನ್ನು ಕೊನೆಗಾಣಿಸುವಲ್ಲಿ ಖಂಡಿತ ಸಹಾಯವಾಗುತ್ತದೆ. ದಯವಿಟ್ಟು, ದಯವಿಟ್ಟು ಸರಕಾರದ ಗಮನಕ್ಕೆ ತಂದು, ಇದನ್ನು ಆಚರಿಸಲು ಅವಕಾಶ ಮಾಡಿಕೊಡಬೇಕಾಗಿ ತಮ್ಮಲ್ಲಿ ವಿನಂತಿ ಎಂದು ಶರವಣ ಅವರು ಕೇಳಿಕೊಂಡಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications