ಬೆಂಗಳೂರಲ್ಲಿ ಸ್ವಾಮಿ ದಯಾನಂದ ಸರಸ್ವತಿ ಹಿತವಚನ

ಬೆಂಗಳೂರಿನ, ಜಯನಗರ 3ನೇ ಬಡಾವಣೆಯಲ್ಲಿರುವ ಎನ್ಎಮ್ಕೆಆರ್ವಿ ಕಾಲೇಜಿನ 'ಮಂಗಳ ಮಂಟಪ'ದಲ್ಲಿ ನವೆಂಬರ್ 18, ಸೋಮವಾರದಿಂದ ನವೆಂಬರ್ 22, ಶುಕ್ರವಾರದವರೆಗೆ 'Being Live to the Presence of Ishvara' ಎಂಬ ವಿಷಯದ ಬಗ್ಗೆ ಅವರು ಮಾತುಗಳನ್ನಾಡಲಿದ್ದಾರೆ.
ವೇದಾಂತ ಎಂದರೆ ಹಿಂದೂ ತತ್ವಶಾಸ್ತ್ರದಲ್ಲಿ ವೇದ ಗ್ರಂಥಗಳ ಭಾಗವಾದ ಉಪನಿಷತ್ತುಗಳನ್ನು ಸೂಚಿಸುವ ಪರ್ಯಾಯ ಪದ. ವೇದಾಂತ ಎಂದರೆ ವೇದಗಳ ಉದ್ದೇಶ ಅಥವಾ ಗುರಿ ಎಂಬ ಅರ್ಥವೂ ಬರುತ್ತದೆ. ವೇದಾಂತದ ಗುರಿಯು ಆತ್ಮಸಾಕ್ಷಾತ್ಕಾರದ ಸ್ಥಿತಿ ಅಥವಾ ಬ್ರಹ್ಮಾಂಡದ ಪ್ರಜ್ಞೆ ಹೊಂದುವುದೇ ಆಗಿದೆ.
ಈ ಕ್ಲಿಷ್ಟಕರವಾದ ವೇದಾಂತದ ತಿರುಳನ್ನು ಅತ್ಯಂತ ಸ್ಪಷ್ಟವಾಗಿ, ಸಾಮಾನ್ಯ ಜನರಿಗೆ ಅರ್ಥವಾಗುವಂತೆ, ಜೀವನದ ಸತ್ಯವನ್ನು ಅತ್ಯಂತ ಸರಳ ಭಾಷೆಯಲ್ಲಿ ಹೇಳುವುದರಲ್ಲಿ ಸ್ವಾಮಿ ದಯಾನಂದ ಸರಸ್ವತಿ ಅವರು ಸಿದ್ಧಹಸ್ತರು. ಅಂಥ ವೇದಾಂತಿಗಳ ಮಾತುಗಳನ್ನು ಕೇಳುವ ಸುಯೋಗ ಬೆಂಗಳೂರಿನ ನಾಗರಿಕರಿಗೆ ಒದಗಿಬಂದಿದೆ.
ಕಾರ್ಯಕ್ರಮದ ವಿವರ :
ಸಂಜೆ 5.45ರಿಂದ 6.20ರವರೆಗೆ ಶಾಸ್ತ್ರೀಯ ಸಂಗೀತ.
ಸಂಜೆ 6.30ರಿಂದ 8ರವರೆಗೆ ಸ್ವಾಮಿ ದಯಾನಂದ ಸರಸ್ವತಿ ಅವರಿಂದ ಹಿತೋಪದೇಶ.
ಸ್ವಾಮೀಜಿ ಕುರಿತು ಎರಡು ಮಾತು : ತಮಿಳುನಾಡಿನ ಮಂಜಕ್ಕುಡಿ (ಸ್ವಾಮೀಜಿ ಹುಟ್ಟೂರು) ಎಂಬಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಉದ್ಧಾರಕ್ಕಾಗಿ ಸ್ವಾಮಿ ದಯಾನಂದ ಸರಸ್ವತಿ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಕರ್ನಾಟಕ ಸಂಗೀತದಲ್ಲಿಯೂ ಪರಿಣತಿ ಹೊಂದಿರುವ ಅವರು ಹಿಂದೂ ಧರ್ಮ ಆಚಾರ್ಯ ಸಭಾ ಎಂಬ ಸಂಸ್ಥೆಯನ್ನೂ ಹುಟ್ಟುಹಾಕಿದ್ದಾರೆ. ಇದರ ಮುಖಾಂತರ ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ಉಪನ್ಯಾಸಗಳನ್ನು ನೀಡಿದ್ದಾರೆ.
ವೇದಾಂತ ಶಾಸ್ತ್ರದಲ್ಲಿ ಮಾಡಿದ ಸಾಧನೆಗಾಗಿ 2012ರಲ್ಲಿ ಶಂಕರ ಜಯಂತಿ ಸಂದರ್ಭದಲ್ಲಿ ಶೃಂಗೇರಿಯ ಶ್ರೀ ಭಾರತಿತೀರ್ಥ ಮಹಾಸ್ವಾಮಿ ಅವರಿಂದ 'ಆದಿ ಶಂಕರ ಪ್ರಶಸ್ತಿ'ಗೆ ಸ್ವಾಮಿ ದಯಾನಂದ ಸರಸ್ವತಿ ಅವರು ಭಾಜನರಾಗಿದ್ದರು. ನ.18ರಿಂದ 22ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಲ್ಲರಿಗೂ ಉಚಿತ ಪ್ರವೇಶವಿದೆ.
ವೆಬ್ ಸೈಟ್ ವಿಳಾಸ : www.aimforseva.org
ಸಂಪರ್ಕಿಸಿ : ಸ್ವಾತ್ಮಬೋಧ - 94802 11695, ನಮಿತಾ - 99013 00999, ಅರುಣಾ - 97400 66219
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications